ಉಡುಪಿ:ಮಹಿಳಾ ಠಾಣೆ ಸ್ಥಳಾಂತರಕ್ಕೆ ವಕೀಲರ ಸಂಘ ಮನವಿ

ಉಡುಪಿ:ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡ ಹರಿರಾಮ್ ಶಂಕರ್ ಅವರನ್ನು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ನೇತೃತ್ವದ ನಿಯೋಗವು ಭೇಟಿಯಾಗಿ ಅವರಿಗೆ ಪುಷ್ಪಗುಚ್ಛ ನೀಡಿ ಅಭಿನಂದಿಸಿತು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಮತ್ತು ನಗರದ ಸಂಚಾರ ವ್ಯವಸ್ಥೆ ಕಾಪಾಡಲು ವಿಶೇಷ ಆದ್ಯತೆ ನೀಡುವಂತೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಯು ಬಹಳ ಇಕ್ಕಟ್ಟಾಗಿರುವುದರಿಂದ ಆ ಠಾಣೆಯ ಮೇಲ್ಬಾಗದಲ್ಲಿರುವ ಮಹಿಳಾ ಠಾಣೆಯನ್ನು ಬೇರೆಡೆ ಸ್ಥಳಾಂತರಿಸುವಂತೆ ವಿನಂತಿಸಲಾಯಿತು. ಮತ್ತು ವಕೀಲರ ಸಂಘಕ್ಕೆ ಭೇಟಿ […]
ಉಡುಪಿ: ಸ್ಥಗಿತಗೊಂಡ ನರ್ಮ್ ಬಸ್ಸುಗಳು ಪುನಾರಂಭಕ್ಕೆ ಬಿಜೆಪಿ ಯುವ ಮೋರ್ಚಾ ಮನವಿ

ಉಡುಪಿ: ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು, ಆದರೆ ಪ್ರಸ್ತುತ ಆ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿರುತ್ತದೆ. ಸ್ಥಗಿತಗೊಳಿಸಲಾಗಿರುವ 13 ರೂಟ್ ಗಳ ಬಸ್ಸುಗಳ ಓಡಾಟವನ್ನು ಪುನರಾರಂಭಿಸುವುದು ತೀರಾ ಅಗತ್ಯವಾಗಿರುತ್ತದೆ. ಅಲ್ಲದೆ ಸದ್ರಿ 45 ಬಸ್ಸು ಗಳ ಮಂಜೂರಾತಿಯು 10 ವರ್ಷಗಳ ಹಿಂದಿನ ಸಮೀಕ್ಷೆಯಂತೆ ಆಗಿರುತ್ತದೆ, ಹೊಸ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮತ್ತು ಪ್ರಸ್ತುತ […]
ಶ್ಯಾಮಪ್ರಸಾದ್ ಮುಖರ್ಜಿ ಜೀವನ ಎಲ್ಲರಿಗೂ ಪ್ರೇರಣೆ- ಮಟ್ಟಾರು ರತ್ನಾಕರ ಹೆಗ್ಡೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಸಂಸ್ಮರಣೆಯ ಅಂಗವಾಗಿ ‘ಬಲಿದಾನ ದಿವಸ್’ ಕಡಿಯಾಳಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಮುಖಂಡರು ಶ್ಯಾಮಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸಂಸ್ಕರಣ ಭಾಷಣ ಮಾಡಿ, ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಿಗೆ ಪ್ರೇರಣೆಯಾಗಿದೆ. ಅವರ ಜೀವನಾದರ್ಶನ, ತ್ಯಾಗ, ಬಲಿದಾನವನ್ನು ನಾವು ಅರ್ಥಮಾಡಿಕೊಳ್ಳಬೇಕು. ಅವರ ಸಾವು ಇಂದಿಗೂ ನಿಗೂಢವಾಗಿಯೇ ಉಳಿದಿದೆ. […]
ದೇಶದ ಮುಂದಿನ ಭವಿಷ್ಯ ಸಹಕಾರಿ ಕ್ಷೇತ್ರದ ಕೈಯಲ್ಲಿದೆ- ಸಂಸದ ಕೋಟ

ಉಡುಪಿ: ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಗಳ ಮೂಲಕ ಸಾಮಾನ್ಯ ಸೇವಾ ಕೇಂದ್ರಗಳು ಇನ್ನು ಮುಂದೆ ಜನಸೇವೆಗೆ ತೆರೆದುಕೊಳ್ಳಲಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಾಜ್ಯದ ಸೌಹಾರ್ದ ಸಹಕಾರಿಗಳ ಸಾಮಾನ್ಯ ಸೇವಾ ಕೇಂದ್ರಗಳ ಉದ್ಘಾಟನೆಯನ್ನು ಸೋಮವಾರ ಉಡುಪಿಯ ಹೊಟೇಲ್ ಡಯಾನ ಸಭಾಂಗಣದಲ್ಲಿ ನೆರವೇರಿಸಿ ಅವರು ಮಾತನಾಡಿದರು. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಸೇವೆಗಳು ತಲಮಟ್ಟದ ಜನರಿಗೆ ಅನುಕೂಲ ವಾಗಬೇಕಾದರೆ, ಆಡಳಿತವು ಗ್ರಾಮೀಣ ಮಟ್ಟಕ್ಕೆ ವ್ಯಾಪಿಸಬೇಕು. ಆ […]
ಉಡುಪಿ: ಜೂ.25ರಿಂದ 29ರವರೆಗೆ ಉಚಿತ ಸಹಜ ಯೋಗ ಧ್ಯಾನೋತ್ಸವ

ಉಡುಪಿ: ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು ಬೆಳಗ್ಗೆೆ 9.30ರಿಂದ ಸಂಜೆ 4ರವರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ, ಜೂ.26ರಂದು ಶ್ರೀಕೃಷ್ಣ ಮಠದ ರಾಜಾಂಗಣ, ಸಂಜೆ 6ರಿಂದ 9ರವರೆಗೆ ಬೈಲೂರು ಮಹಿಷಮರ್ದಿನಿ ದೇವಸ್ಥಾಾನ, ಜೂ.27ರಂದು ಬೆಳಗ್ಗೆೆ 9.30ರಿಂದ ಸಂಜೆ 9 ರವರೆಗೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನ, ಜೂ.28ರಂದು ಬೆಳಗ್ಗೆೆ 9ರಿಂದ ಸಂಜೆ 9ರ ವರೆಗೆ ಅಜ್ಜರಕಾಡು […]