ಬೈಂದೂರು: ಜೂನ್ 27 ರಿಂದ 29 ರವರೆಗೆ ಹಲಸು ಹಾಗೂ ಕೃಷಿ ಮೇಳ

ಬೈಂದೂರು: ಬೈಂದೂರಿನ ಇತಿಹಾಸದಲ್ಲಿ ಪ್ರಥಮ ಭಾರಿಗೆ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳ ಜೂನ್ 27ರ ಶುಕ್ರವಾರದಿಂದ 29ರ ಭಾನುವಾರದ ತನಕ ಇಲ್ಲಿನ ಯಡ್ತರೆ ಬಂಟರ ಭವನದಲ್ಲಿ ಜರುಗಲಿದೆ. ಬೈಂದೂರು ಉತ್ಸವ ಸಮಿತಿ ಹಾಗೂ ರೈತೋತ್ಥಾನ ಬಳಗ ನೇತೃತ್ವದಲ್ಲಿ, ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ರೋಟರಿ ಕ್ಲಬ್ ಬೈಂದೂರು ಸಹಯೋಗದೊಂದಿಗೆ ನಡೆಯುವಕಾರ್ಯಕ್ರಮದಲ್ಲಿ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ, ರುಚಿಕರ ಹಲಸಿನ ಉಪ ಉತ್ಪನ್ನಗಳು ಸವಿ ಉಣಬಡಿಸುವ ಜೊತೆಗೆ ಸಾಧಕ […]
ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ.: ಉಡುಪಿ ವಿಶ್ವ ಯೋಗ ದಿನಾಚರಣೆ –2025

ಉಡುಪಿ:ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸಾÊಟಿ ಲಿಮಿಟೆಡ್ ಇದರ ವತಿಯಿಂದ ವಿಶ್ವಯೋಗ ದಿನಾಚರಣೆಯನ್ನುಅಜ್ಜರಕಾಡು ಟೌನ್ (ಮಿನಿ) ಹಾಲ್ ನಲ್ಲಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಜಯಕರ ಶೆಟ್ಟಿಇಂದ್ರಾಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರ್ಟ್ ಆಫ್ ಲಿವಿಂಗ್ ಮಣಿಪಾಲದ ಸುನೀತಾ ನಾಯಕ್ ಯೋಗ ತರಬೇತಿಯನ್ನು ನೀಡಿದರು. ಸಂಘದ ಸಿಬ್ಬಂದಿ ಭಾರತಿ ಪಿ. ಹೆಗ್ಡೆ ಯೋಗ ಪ್ರಾತ್ಯಕ್ಷಿಕೆ ನೀಡಿದರು. ಸಂಸ್ಥೆಯ ನಿರ್ದೇಶಕಮಂಡಳಿ ಸದಸ್ಯರು, ಶಾಖಾ ಸಲಹಾ ಸಮಿತಿ ಸದಸ್ಯರು, ಶಾಖಾವ್ಯವಸ್ಥಾಪಕರು, ಸಿಬ್ಬಂದಿಗಳು ಮತ್ತು ದೈನಿಕ ಠೇವಣಿಸಂಗ್ರಾಹಕರು ಯೋಗಾಭ್ಯಾಸ ನಡೆಸಿದರು. ಸಂಘದ ಪ್ರಧಾನ […]
ಭಾರತ ದೇಶಕ್ಕೆ ತುರ್ತುಪರಿಸ್ಥಿತಿ ಹೇರಿರುವ ಕರಾಳ ದಿನವನ್ನು ಯಾರು ಮರೆಯಲು ಸಾಧ್ಯವಿಲ್ಲ- ಸಂಸದ ಕೋಟ

ಉಡುಪಿ: ಭಾರತ ದೇಶಕ್ಕೆ 1975ರ ಜೂನ್ 25ರಂದು ಹೇರಳಾದ ತುರ್ತುಪರಿಸ್ಥಿತಿಗೆ 50 ವರ್ಷಗಳು ತುಂಬಿವೆ. ಈ ಕರಾಳ ದಿನವನ್ನು ಯಾವ ಭಾರತೀಯನು ಮರೆಯಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಇದೊಂದು ಅತ್ಯಂತ ಕೆಟ್ಟ ದಿನ. ಸಂವಿಧಾನವನ್ನು ಹತ್ಯೆ ಮಾಡಿದ ದಿನ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡ ‘ಸಂವಿಧಾನ್ ಹತ್ಯಾ ದಿವಸ್’ (ತುರ್ತು ಪರಿಸ್ಥಿತಿಯ ಕರಾಳ ದಿನ) ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ಕರಾಳತೆಯನ್ನು […]
ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಭೇಟಿ

ಉಡುಪಿ: ಧಾರ್ಮಿಕ ದತ್ತಿ , ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಉಡುಪಿ ಜಿಲ್ಲಾ ಪ್ರವಾಸ ಮಾಡಿದ್ದಾರೆ. ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿಕೊಟ್ಟು ದೇವರಿಗೆ ವಿಶೇಷ ಪೂಜೆ ಅರ್ಪಿಸಿ, ಪ್ರಸಾದ ಸ್ವೀಕರಿಸಿದರು. ಸ್ವಚ್ಛ ಭಾರತ ಯೋಜನೆಯ ಅಭಿಯಾನದಡಿ ,ದೇಗುಲದ ಆವರಣದಲ್ಲಿ ಭಕ್ತರಿಗೆ ಕೋಟೇಶ್ವರ ಸೇವಾ ಟ್ರಸ್ಟ್ ನಿರ್ಮಿಸಿದ ಕಚೇರಿ ಮತ್ತು ಶೌಚಾಲಯವನ್ನು ಉದ್ಘಾಟನೆ ಮಾಡಿದರು. ರಾಜ್ಯದ ಎಲ್ಲಾ ದೇಗುಲಾದ ಆವರಣದಲ್ಲಿ ಭಕ್ತರಿಗೆ ಅನುಕೂಲವಾಗುವಂತಹ ಮೂಲಭೂತ ಸೌಕರ್ಯಗಳು, ಯೋಜನೆಗಳು ಭಕ್ತರಿಗೆ ಸಿಗಬೇಕು ಎಂದು ರಾಮಲಿಂಗಾ ರೆಡ್ಡಿ ಹೇಳಿದರು. […]
ತುರ್ತು ಪರಿಸ್ಥಿತಿ ಘೋಷಣೆಗೆ ಇಂದು 50 ವರ್ಷ: ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ; ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷದ ಅಂಗವಾಗಿ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನದ ಆಶಯವನ್ನು ಉಲ್ಲಂಘಿಸಿದ್ದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ ಸಾಂವಿಧಾನಿಕ ಆದರ್ಶಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಸಂಕಲ್ಪವನ್ನು ಒತ್ತಿ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ‘ಸಂವಿಧಾನ ಹತ್ಯೆ ದಿನ’ ಎಂಬ ಹ್ಯಾಶ್ಟ್ಯಾಗ್ ಅಡಿಯಲ್ಲಿ ಸರಣಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ‘ತುರ್ತು ಪರಿಸ್ಥಿತಿ ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ […]