ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯ ಅಂಗವಾಗಿ ನುಡಿನಮಾನ ಕಾರ್ಯಕ್ರಮ.

ಕಾರ್ಕಳ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯ ಅಂಗವಾಗಿ ನುಡಿನಮನ. ಕಾರ್ಕಳ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ದಲ್ಲಿ ಯಜ್ಞಮಾತೆ ಜಗದಂಬಾ ಸರಸ್ವತಿಯವರ ಸ್ಮೃತಿ ದಿನಾಚರಣೆಯು ಜೂನ್ 24 ರಂದು ಜರಗಿತು. ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿಜಿ ಯವರು ಜಗದಂಬಾ ಸರಸ್ವತಿ ಯವರ ಜೀವನ ಚರಿತ್ರೆ ತಿಳಿಸಿದರು. ನಂತರ ನುಡಿ ನಮನ ಕಾರ್ಯಕ್ರಮ ಜರಗಿತು. ಭಾರತೀಯ ಸ್ಟೇಟ್ ಬ್ಯಾಂಕ್ ನ ನಿವೃತ ಪ್ರಬಂದಕ ರಮೇಶ್ ಪ್ರಭು ಉಪಸ್ಥಿತರಿದ್ದರು.

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಸಿಂಚನಾ ಜಿ.ಭಟ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ.

ಕುಂದಾಪುರ: ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿದ್ಯಾರ್ಥಿನಿ ಸಿಂಚನಾ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ತನ್ವಿತಾ ತೃತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಜುಲೈ 1ರಿಂದ ರೈಲು ಟಿಕೆಟ್ ದರ ತುಸು ಹೆಚ್ಚಳ.

ನವದೆಹಲಿ: ಜುಲೈ 1ರಿಂದ ಅನ್ವಯವಾಗುವಂತೆ, ಮೇಲ್‌, ಎಕ್ಸ್‌ಪ್ರೆಸ್‌ ರೈಲುಗಳ ಎ.ಸಿ, ನಾನ್‌ ಎ.ಸಿ ಹಾಗೂ ಎರಡನೇ ದರ್ಜೆ ಪ್ರಯಾಣದ ಟಿಕೆಟ್‌ ದರಗಳನ್ನು ತುಸು ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ.ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳ ನಾನ್‌ ಎ.ಸಿ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ, ಎ.ಸಿ ದರ್ಜೆ ಪ್ರಯಾಣಕ್ಕೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಿಸುವ ಪ್ರಸ್ತಾವ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಪನಗರ ರೈಲು ಮತ್ತು ಮಾಸಿಕ ಟಿಕೆಟ್‌ ದರಗಳಲ್ಲಿ ಯಾವುದೇ […]

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ, ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಹಾಗೂ ಆಡಳಿತ ಸಮಿತಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್, ಮುನಿಯಾಲು ಉದಯ್ ಕುಮಾರ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ರಾಜು ಪೂಜಾರಿ […]

ಕೊಲ್ಲೂರು ಸಂಪರ್ಕಿಸುವ ಹೆಬ್ರಿ – ಮಡಾಮಕ್ಕಿ ರಸ್ತೆ ಸಂಚಾರ ಬಂದ್; ಜಿಲ್ಲಾಧಿಕಾರಿ ಭೇಟಿ

ಹೆಬ್ರಿ: ‌ಹೆಬ್ರಿ–ಮಡಾಮಕ್ಕಿ ಮೂಲಕ ಕೊಲ್ಲೂರು ಸಂಪರ್ಕಿಸುವ ಹೆಬ್ರಿ–ಕುಚ್ಚೂರು–ಮಡಾಮಕ್ಕಿ ರಸ್ತೆಯ ಕಂಚರ್ಕಳ್‌ ಎಂಬಲ್ಲಿ ಸಂಪರ್ಕ ಕಡಿತಗೊಂಡಿರುವ ಪ್ರದೇಶಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭೇಟಿ ನೀಡಿದರು. 8 ತಿಂಗಳ ಹಿಂದೆಯೇ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೇತುವೆ ಕಾಮಗಾರಿ ಬಗ್ಗೆ ಮನವರಿಕೆ ಮಾಡಿದ್ದೇವೆ. ಆದರೆ, ಅಧಿಕಾರಿಗಳು ತಡವಾಗಿ ಮಳೆಗಾಲ ಸಮೀಪಿಸುತ್ತಿರುವಾಗಲೇ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಿದ್ದ ಹಿನ್ನೆಲೆ ಸಮಸ್ಯೆ ಎದುರಾಗಿದೆ. ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿರುವ ರಸ್ತೆಯು ಮಳೆಗೆ ಕೊಚ್ಚಿ ಹೋಗಿದ್ದು, ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಹುದೂರ ಸುತ್ತಾಡಿ […]