ಉಡುಪಿ: ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಶಾಸನೋಕ್ತ ಕಲಾತ್ಮಕ ದೀಪ ಪತ್ತೆ.

ಉಡುಪಿ: ತಾಲ್ಲೂಕಿನ ಪೆರ್ಡೂರಿನ ಅನಂತಪದ್ಮನಾಭ ದೇವಾಲಯದಲ್ಲಿ ಪುರಾಣೋಕ್ತ ಕಥಾನಕದ ನಿರೂಪಣಾ ಶಿಲ್ಪಗಳಿರುವ ಅಪರೂಪದ ದೀಪ ಪತ್ತೆಯಾಗಿದೆ ಎಂದು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ. ಮುರುಗೇಶಿ ಟಿ. ತಿಳಿಸಿದ್ದಾರೆ.ದುಂಡನೆಯ ತಳವನ್ನು ಹೊಂದಿರುವ ದೀಪದ ಮೇಲ್ಭಾಗದಲ್ಲಿ ಕಮಾನಿನ ಆಕಾರದ ಕಲಾತ್ಮಕವಾದ ಫಲಕವಿದೆ. ಈ ಫಲಕದ ಎರಡೂ ಬದಿಗಳಲ್ಲಿ ಶೈವ ಮತ್ತು ವೈಷ್ಣವ ಪಂಥದ ಶಿಲ್ಪಗಳಿದ್ದು, ದೇವಾಲಯದ ಶೈವ ಮತ್ತು ವೈಷ್ಣವ ಪರಂಪರೆಯ ಅಪರೂಪದ ಪ್ರತೀಕವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೀಪದ […]

ಇಂದು ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಲಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ

ಫ್ಲೋರಿಡಾ: ಭಾರತೀಯ ಕಾಲಮಾನ ಇಂದು ಮಧ್ಯಾಹ್ನ 12:01ಕ್ಕೆ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಆಕ್ಸಿಯಂ ನೌಕೆ ನಭಕ್ಕೆ ಚಿಮ್ಮಲಿದೆ. ಸ್ಪೇಸ್‌ಎಕ್ಸ್ ಫಾಲ್ಕನ್-9 ರಾಕೆಟ್‌ ಮೂಲಕ ಶುಭಾಂಶು ಶುಕ್ಲಾ ಅವರ ಜೊತೆಗೆ ಇತರೆ ಮೂವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ. 28 ಗಂಟೆ ಪ್ರಯಾಣದ ಬಳಿಕ ಉದ್ದೇಶಿತ ಡಾಕಿಂಗ್ ಅನ್ನು ಗುರುವಾರ ಸಂಜೆ 4:30ಕ್ಕೆ ಕೈಗೊಳ್ಳಲಾಗುವುದು ಎಂದು ನಾಸಾ ಮಾಹಿತಿ ನೀಡಿದೆ. 1984 ರಲ್ಲಿ ಸೋವಿಯತ್ ರಷ್ಯಾದ ಸೋಯುಜ್ ಬಾಹ್ಯಾಕಾಶ ನೌಕೆಯಲ್ಲಿ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸುವ […]

ಉಡುಪಿ:ಹಿರಿಯ ನಾಗರಿಕರು ತಮಗಿರುವ ಹಕ್ಕುಗಳ ಸದುಪಯೋಗ ಪಡೆದುಕೊಳ್ಳಿ : ನ್ಯಾ. ಯೋಗೀಶ್ ಪಿ.ಆರ್

ಉಡುಪಿ: ಹಿರಿಯ ನಾಗರಿಕರು ತಮ್ಮ ಹಕ್ಕುಗಳನ್ನು ಕಾನೂನು ಬದ್ಧವಾಗಿ ಚಲಾಯಿಸಲು ಕಾನೂನು ಸೇವೆಗಳ ಪ್ರಾಧಿಕಾರವು ಅಗತ್ಯ ಸಹಕಾರ ನೀಡುತ್ತಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬ ಹಿರಿಯರು ಪಡೆದುಕೊಳ್ಳಬೇಕು ಎಂದು ಹಿರಿಯಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್ ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡು ಯುದ್ಧ ಸ್ಮಾರಕದ ಎದುರಿನ ಹಿರಿಯ ನಾಗರಿಕರ ಕಚೇರಿ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ […]

ಉಡುಪಿ:ಮಹಿಳೆ ನಾಪತ್ತೆ

ಉಡುಪಿ: ಮಣಿಪಾಲದಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರಿನಲ್ಲಿ ವಾಸವಿದ್ದ ಮಾದೇವಿ (38) ಎಂಬ ಮಹಿಳೆಯು ಜೂನ್ 14 ರಂದು ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು, ಕೆಲಸಕ್ಕೂ ಹೋಗದೇ, ಸಂಬಂಧಿಕರ ಮನೆಗೂ ತೆರಳದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉತ್ತರ ಕರ್ನಾಟಕ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ […]

ಶಿರಿಯಾರ-ಕಲ್ಮರ್ಗಿ ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್ (ರಿ)ನ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ, ನ್ಯಾಯವಾದಿ, ನೋಟರಿ ಪ್ರಭಾಕರ ನಾಯಕ್ ಆಯ್ಕೆ

ಶಿರಿಯಾರ: ಬ್ರಹ್ಮಾವರ ತಾಲೂಕಿನ ಶಿರಿಯಾರ- ಕಲ್ಮರ್ಗಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್ನ ಸಭೆಯು ಜೂನ್ 21ರಂದು ಜರುಗಿತು. ಟ್ರಸ್ಟಿ ಗಣೇಶ ನಾಯಕ್ ಸೂಚಿಸಿದರು. ಹಾಗೂ ಹಿರಿಯರಾದ ಕೃಷ್ಣಾನಂದ ಶೆಣೈ ಅನುಮೋದಿಸಿದರು. ಸರ್ವಾನುಮತದಿಂದ ಅಧ್ಯಕ್ಷರಾಗಿ ನ್ಯಾಯವಾದಿ, ನೋಟರಿ, ಸಾಮಾಜಿಕ ಕಾರ್ಯಕರ್ತ ಶಿರಿಯಾರ ಕಲ್ಮರ್ಗಿ ಪ್ರಭಾಕರ ನಾಯಕ್ ಆಯ್ಕೆ ಮಾಡಲಾಯಿತು. ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್ ನ ಯುವ ಮುಖಂಡ ರವೀಂದ್ರ ಹೆಗ್ಡೆ ಎತ್ತಿನಟ್ಟಿರವರನ್ನು ಪ್ರಧಾನ ಕಾರ್ಯದರ್ಶಿ ಮತ್ತು ಉದ್ಯಮಿ ಶ್ರೀ ದಾಮೋದರ ನಾಯಕ್ ಕಲ್ಮರಗಿ […]