ಬ್ರಹ್ಮಾವರ: ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮಾದಕ ವ್ಯಸನ ವಿರೋಧ ದಿನಾಚರಣೆ

ಬ್ರಹ್ಮಾವರ: ಎಸ್ಎಂಎಸ್ ಪದವಿ ಪೂರ್ವ ಕಾಲೇಜು, ಬ್ರಹ್ಮಾವರ ದಲ್ಲಿ ರಾಷ್ಟ್ರೀಯ ಮಾದಕ ವ್ಯಸನ ವಿರೋಧ ದಿನಾಚರಣೆ ಜೂ.26 ರಂದು ಬ್ರಹ್ಮಾವರ ಠಾಣಾಧಿಕಾರಿಯದ ಅಶೋಕ್ ಎಂ. ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಮಾದಕ ದ್ರವ್ಯಗಳು ನಮ್ಮ ಸಮಾಜದ ಸೌಹಾರ್ದತೆ, ಕುಟುಂಬಗಳ ಶಾಂತಿ ಮತ್ತು ಯುವಜನತೆಯ ಭವಿಷ್ಯವನ್ನು ನಾಶಮಾಡುತ್ತಿವೆ. ಪ್ರತಿಯೊಬ್ಬರ ಜವಾಬ್ದಾರಿ ಎಂದರೆ ಮಾದಕ ವ್ಯಸನದ ವಿರುದ್ಧ ಎಚ್ಚರಿಕೆ ಮೂಡಿಸುವುದು, ಜನರಲ್ಲಿ ಜಾಗೃತಿ ಬೆಳೆಸುವುದು. ಈ ದಿನಾಚರಣೆಯು ಕೇವಲ ಒಂದು ದಿನದ ಆಚರಣೆ ಮಾತ್ರವಲ್ಲ, ಇದು ಒಂದು ಸಂಕಲ್ಪದ ದಿನವಾಗಿದೆ […]

ನೇಶನಲ್ ಐಟಿಐ ಕಾಲೇಜಿನಲ್ಲಿ “ಮಾದಕ ವಸ್ತುಗಳ ವಿರೋದಿ‌ ದಿನಾಚರಣೆ” ಕಾರ್ಯಕ್ರಮ.

ಬ್ರಹ್ಮಾವರ: ನೇಶನಲ್ ಐಟಿಐ ಕಾಲೇಜಿನಲ್ಲಿ ಜೂ.25 ರಂದು “ಮಾದಕ ವಸ್ತುಗಳ ವಿರೋದಿ‌ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬ್ರಹ್ಮಾವರ ತಾಲೂಕಿನ ಆರಕ್ಷಕ ಠಾಣೆಯ ಪಿಎಸ್ಐ ಅಶೋಕ್ ಅವರು ಮಾದಕ ವ್ಯಸನದಿಂದ ಆಗುವ ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲ ವೆಂಕಟೇಶ್ ಕ್ರಮಧಾರಿ ಸ್ವಾಗತಿಸಿದರು. ತರಬೇತಿ ಅಧಿಕಾರಿ ಭಾಸ್ಕರ ಉಪಾದ್ಯ ಧನ್ಯವಾದ ಸಲ್ಲಿಸಿದರು. ವೇದಿಕೆಯಲ್ಲಿ ಪೋಲಿಸ್ ಸುರೇಶ್ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರೂ ಒಟ್ಟಾಗಿ ಪ್ರತಿಜ್ನಾ […]

ಸಹಪಾಠಿಯ ಮೇಲೆಯೇ ಅತ್ಯಾಚಾರವೆಸಗಿದ ಬಿಜೆಪಿ ಮುಖಂಡನ ಮಗ.!

ಮಂಗಳೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ಇದೀಗ ಮದುವೆಯಾಗಲು ನಿರಾಕರಿಸಿದ್ದಾನೆ. ಆರೋಪಿಯ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ದೂರು ದಾಖಲಿಸಲಾಗಿದೆ. ಆರೋಪಿಯು ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಎನ್ನುವರ ಪುತ್ರ ಕೃಷ್ಣ ರಾವ್. ಈತನ ವಿರುದ್ಧ ಯುವತಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು, ಈ ದೂರು ದಾಖಲಿಸಿಕೊಂಡಿರುವ ಪೊಲೀಸರು ಕೃಷ್ಣನ ಪತ್ತೆಗೆ ಬಲೆ ಬೀಸಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಬಿಎಸ್ ಸಿ ವ್ಯಾಸಂಗ ಮಾಡುತ್ತಿರುವ […]

ಖಾಸಗಿ ವಾಹನಗಳಿಗೆ ರೂ.3000ಕ್ಕೆ “ಫಾಸ್ ಟ್ಯಾಗ್” ವಾರ್ಷಿಕ ಪಾಸ್ ವಿತರಿಸುವ ಯೋಜನೆ ಆಗಸ್ಟ್ 15 ರಿಂದ ಜಾರಿ: ಸಚಿವ ನಿತಿನ್ ಗಡ್ಕರಿ

ನವದೆಹಲಿ: ‘ಅಡೆತಡೆಗಳಿಲ್ಲದ ಹೆದ್ದಾರಿ ಸಂಚಾರಕ್ಕಾಗಿ ಖಾಸಗಿ ವಾಹನಗಳಿಗೆ ₹3 ಸಾವಿರಕ್ಕೆ ಫಾಸ್‌ಟ್ಯಾಗ್‌ ವಾರ್ಷಿಕ ಪಾಸ್‌ ವಿತರಿಸುವ ಯೋಜನೆ ಆ. 15ರಿಂದ ಜಾರಿಗೆ ಬರಲಿದೆ’ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು, ‘ಈ ವಾರ್ಷಿಕ ಪಾಸ್‌ ಒಂದು ವರ್ಷದ ಅವಧಿ ಅಥವಾ 200 ಟ್ರಿಪ್‌ಗಳಿಗೆ ಅನ್ವಯಿಸಲಿದೆ. ಇದನ್ನು ವಾಣಿಜ್ಯ ಉದ್ದೇಶಕ್ಕಲ್ಲದ ವಾಹನಗಳಿಗೆ ಮಾತ್ರ ವಿತರಿಸಲಾಗುವುದು. ಇದರಲ್ಲಿ ಕಾರು, ಜೀಪು ಮತ್ತು ವ್ಯಾನ್‌ಗಳು ಸೇರುತ್ತವೆ’ ಎಂದಿದ್ದಾರೆ. […]

ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ರೂ.880 ಕೋಟಿ ಅನುದಾನ.

ನವದೆಹಲಿ: ಕರ್ನಾಟಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ 2025–26ನೇ ಸಾಲಿನಲ್ಲಿ ₹880 ಕೋಟಿ ಹಂಚಿಕೆ ಮಾಡಿ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಆದೇಶ ಹೊರಡಿಸಿದೆ. ಈ ಮೊತ್ತವನ್ನು ಮಂಜೂರಾದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಾತ್ರ ಬಳಸಬೇಕು. ಯಾವುದೇ ಹೆದ್ದಾರಿ ಯೋಜನೆಗೆ ಮಂಜೂರಾದ ಮೊತ್ತಕ್ಕಿಂತ ಹೆಚ್ಚುವರಿ ಹಣ ಬಳಕೆ ಮಾಡುವಂತಿಲ್ಲ ಎಂದು ಸಚಿವಾಲಯ ಷರತ್ತು ವಿಧಿಸಿದೆ.