ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಬಂಧನ

ಮೂಡುಬಿದಿರೆ: ರಸ್ತೆ ಅಪಘಾತವೊಂದರಲ್ಲಿ ಬಸ್ಸು ಮಾಲಕನಿಂದ ಗಾಯಾಳುಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವಲ್ಲಿ ಮುಂಚೂಣಿಯಲ್ಲಿ ಇದ್ದು ಹೋರಾಟ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಬಂಧಿತ.ಕಾರ್ಕಳ ಅನಂತಶಯನ ದೇವಳ ರಸ್ತೆಯ ವ್ಯಾಪಾರ ಸಂಕೀರ್ಣವೊಂದರಲ್ಲಿ ಮೂಡಬಿದಿರೆ ಪೊಲೀಸರ ತಂಡವು ಸಮಿತ್ರಾಜ್ನನ್ನು ಬಂಧಿಸಿದ್ದಾರೆ. 2024 ನವಂಬರ್ 11 ನೇ ತಾರೀಕಿನೊಂದು ಮೂಡುಬಿದ್ರಿ ಮೀಜಾರು ಬಳಿ ರಾಷ್ಟ್ರೀಯ ಹೆದ್ದಾರಿ -169ರಲ್ಲಿ ರಸ್ತೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಮಾಸ್ಟರ್ ನಾಮಾಂಕಿತದ […]
ಉಡುಪಿ:ಮಾದಕ ವ್ಯಸನ ಶೈಕ್ಷಣಿಕ ಕ್ಷೇತ್ರಕ್ಕೆ ಬಹುದೊಡ್ಡ ಸವಾಲು : ಶ್ಯಾಮಲ

ಉಡುಪಿ: ಇಂದು ಶೈಕ್ಷಣಿಕ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮಾದಕ ವ್ಯಸನಗಳ ಸವಾಲು ಬಹುಪ್ರಮುಖವಾಗಿದೆ. ಅದರಲ್ಲೂ ಪದವಿ ಮತ್ತು ಪದವಿ ಪೂರ್ವ ಹಂತದ ವಿದ್ಯಾರ್ಥಿಗಳನ್ನು ಇದರಿಂದ ದೂರ ಇಡುವ ಪ್ರಯತ್ನಮಾಡಬೇಕಾಗಿದೆ. ವೈಜ್ಞಾನಿಕವಾಗಿ ಅರಿವು ಮೂಡಿಸುವುದೊಂದೆ ಇದಕ್ಕಿರುವ ದಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ಹೇಳಿದರು. ಅವರು ಗುರುವಾರ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು […]
ಉಡುಪಿ:ಜಿಲ್ಲೆಯಲ್ಲಿ ಹೆಚ್ಚು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಉದ್ಯಮಿಗಳಿಗೆ ಉತ್ತೇಜಿಸಿ, ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ:ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೈಗಾರಿಕಾ ಘಟಕಗಳನ್ನು ಸ್ಥಾಪಿಸುವುದರೊಂದಿಗೆ ಸ್ಥಳೀಯ ಜನರಿಗೆ ಉದ್ಯೋಗ ಅವಕಾಶಗಳು ಲಭಿಸುವಂತೆ ಕಾರ್ಯಪ್ರವೃತ್ತರಾಗಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರುಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು […]
ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ. ಪರ್ಕಳ: ಜೂ.27 ರಂದು “2025 ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ” ಪ್ರಯುಕ್ತ ವನಮಹೋತ್ಸವ ಮತ್ತು ಸಸಿ ವಿತರಣೆ’

ಉಡುಪಿ: ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿ.ಪರ್ಕಳ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ.ಉಡುಪಿ, ಸಹಕಾರ ಭಾರತಿ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ‘2025 ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ’ ಪ್ರಯುಕ್ತ ಗಿಡ ನೆಡುವ ಸಂಕಲ್ಪ “ಏಕ್ ಪೇಡ್ ಮಾ ಕೆ ನಾಮ್” ಎಂಬ ವಿಷಯದಲ್ಲಿ ‘ವನಮಹೋತ್ಸವ ಮತ್ತು ಸಸಿ ವಿತರಣೆ’ ಕಾರ್ಯಕ್ರಮವು ಜೂ.27ರಂದು ಸಮಯ ಪೂರ್ವಾಹ್ನ 10:30ಕ್ಕೆ ಪರ್ಕಳ ಪ್ರೌಢಶಾಲೆ ಜ್ಯೋತಿನಗರದಲ್ಲಿ ನಡೆಯಲಿದೆ. […]