ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಶಾಸಕ ವಿ. ಸುನಿಲ್ ಕುಮಾರ್ ಸಿ.ಎಂ ಗೆ ಪತ್ರ

ಬೆಂಗಳೂರು: 2024-25 ಹಾಗೂ 2025-26 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ಸೇರಿದಂತೆ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತೀ ಹೆಚ್ಚು ಮಳೆಯಾಗಿದ್ದು, ಪರಿಣಾಮ ನೆರೆ–ಪ್ರವಾಹದಿಂದಾಗಿ ಹಲವಾರು ರಸ್ತೆ, ಸೇತುವೆಗಳು ಹಾಗೂ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಹಾನಿಗೊಳಗಾದ ರಸ್ತೆಗಳ ಅಭಿವೃದ್ಧಿಗೆ ತುರ್ತು ಅನುದಾನ ಬಿಡುಗಡೆ ಮಾಡುವಂತೆ ವಿನಂತಿಸಿದ್ದಾರೆ. 2024-25ನೇ ಸಾಲಿನಲ್ಲಿ […]
ಜಿ.ಪಂ. ಕಾರು ಚಾಲಕ ಆತ್ಮಹತ್ಯೆ ಪ್ರಕರಣ; ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲು

ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್ಐಆರ್ ದಾಖಲಾಗಿದೆ. ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. A1 ಸಂಸದ ಡಾ.ಕೆ.ಸುಧಾಕರ್, a2 ನಾಗೇಶ, a3 ಮಂಜುನಾಥ್. ಬಿಎನ್ಎಸ್ 2023 ( u/s 108, 352. 351(2), (3)(5) ಹಾಗೂ […]
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ವಾರ್ಷಿಕ ಓಪನ್ ಡೇ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯವು ಜುಲೈ 28, 2025ರಂದು ವಾರ್ಷಿಕ ಓಪನ್ ಡೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು. 1,300ಕ್ಕೂ ಹೆಚ್ಚು ಭೇಟಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ರೆ. ಫಾದರ್ ಡಾ. ವಿಕ್ಟರ್ ಲೋಬೊ ಎಸ್.ಜೆ. (ಕುಲಪತಿ), ಡಾ. ಚಂದ್ರಭಾಸ್ ನಾರಾಯಣ (ರಾಜೀವ್ ಗಾಂಧಿ ಜೈವಿಕತಂತ್ರಜ್ಞಾನ ಕೇಂದ್ರದ ನಿರ್ದೇಶಕ) ಮತ್ತು ಡಾ. ವಿ. ಕ್ರಿಸ್ಟೋ ಸೆಲ್ವನ್ (ಓಪನ್ ಡೇ 2025 ಸಂಯೋಜಕ) ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 180ಕ್ಕೂ ಹೆಚ್ಚು ಪ್ರದರ್ಶನಗಳು ನಡೆದಿದ್ದು, […]
ಬಿಗ್ ಬಾಸ್ ಸ್ಪರ್ಧಿ ರಜತ್’ಗೆ ಕೊಲೆ ಬೆದರಿಕೆ; ಪೊಲೀಸರಿಗೆ ದೂರು

ಬೆಂಗಳೂರು: ಕಿಡಿಗೇಡಿಗಳಿಂದ ಕೊಲೆ ಬೆದರಿಕೆಯ ಸಂದೇಶಗಳು ಬರುತ್ತಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಕೋರಿ ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರು ಗುರುವಾರ ರಾತ್ರಿ ಪೊಲೀಸರಿಗೆ ದೂರು ನೀಡಿದರು.ದೂರಿನ ಪ್ರತಿಯನ್ನು ಪಶ್ಚಿಮ ವಿಭಾಗದ ಸೆನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದು ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸೌಜನ್ಯಾ ಅವರ ಮನೆಗೆ ಬುಧವಾರ ರಜತ್ ಕಿಶನ್ ಭೇಟಿ ನೀಡಿದ್ದರು. ಸೌಜನ್ಯಾ ಅವರ ತಾಯಿಯನ್ನು ಭೇಟಿ ಮಾಡಿ ಹೊರಗೆ […]
ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮತ್ತು ಇಂಜಿನಿಯರ್ ನ್ನು ಸೇವೆಯಿಂದ ವಜಾಗೊಳಿಸಿ: ಡಿಸಿಗೆ ಕಾರ್ಕಳ ಕಾಂಗ್ರೆಸ್ ನಿಯೋಗ ಮನವಿ

ಉಡುಪಿ: ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚ್ಚಿನ್ ವೈ ಅವರನ್ನು ಸೇವೆಯಿಂದ ವಜಾ ಮಾಡುವಂತೆ ಆಗ್ರಹಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭದ್ ರಾವ್ ನೇತೃತ್ವದ ಕಾರ್ಕಳ ಕಾಂಗ್ರೆಸ್ ನಿಯೋಗವು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಅವರಿಗೆ ಇಂದು ಮನವಿ ಸಲ್ಲಿಸಿತು. ಪರಶುರಾಮನ ನಕಲಿ ಕಂಚಿನ ಪ್ರತಿಮೆಯ ವಿಚಾರವಾಗಿ ನಿರ್ಮಿತಿ ಕೇಂದ್ರದ ಅಧಿಕಾರಿಗಳ ವಿರುದ್ಧ ಪೋಲೀಸರು ಕಾರ್ಕಳ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿರುವ ಹಿನ್ನಲೆಯಲ್ಲಿ ಆ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕೆಂದು […]