ಶಿರ್ವ: ಮಗು ಮಾರಾಟ ಪ್ರಕರಣ; ಮಹಿಳೆ ಸಹಿತ ಮೂವರು ಆರೋಪಿಗಳ ಬಂಧನ.

ಉಡುಪಿ: ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಡಾ. ಸೋಮೇಶ್‌ ಸೊಲೊಮನ್, ವಿಜಯಲಕ್ಷ್ಮೀ ಯಾನೆ ವಿಜಯ, ನವನೀತ್‌ ನಾರಾಯಣ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ವಿಚಾರಣೆ ವೇಳೆ ಸತ್ಯ ಒಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಕಾಪುವಿನ ಹೇರೂರು ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪ್ರಭಾವತಿ ಮತ್ತು ಆಕೆಯ ಪತಿ ರಮೇಶ್ ಮೂಲ್ಯ ದಂಪತಿಗಳು 4 ದಿನದ ಶಿಶುವನ್ನು ಪೋಷಣ್ ಟ್ರ್ಯಾಕರ್ ನಲ್ಲಿ ರಿಜಿಸ್ಟರ್ ಮಾಡಲು ಅಂಗನವಾಡಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಪರಿಶಿಲಿಸಿದಾಗ ಮಗು ದಂಪತಿಗಳಿಗೆ […]

ಉಡುಪಿ: ಸೆಪ್ಟೆಂಬರ್ 4ರಂದು ‘ಉಚಿತ ಆರೋಗ್ಯ ಮೇಳ’

ಉಡುಪಿ: ಜಯಂಟ್ಸ್ ಗ್ರೂಪ್ ಆಫ್, ಉಡುಪಿ, ವಿಶ್ವಭಾರತಿ ಅಸೋಸಿಯೇಷನ್ ಚಿಟ್ಪಾಡಿ, ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ಬೀಡಿನಗುಡ್ಡೆ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಸಿ.ಎಸ್.ಐ ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಉಡುಪಿ ಇವರು ಜಂಟಿಯಾಗಿ ಆಯೋಜಿಸಿರುವ ಉಚಿತ ಆರೋಗ್ಯ ಮೇಳವು ಸೆಪ್ಟೆಂಬರ್ 4ರಂದು (ಗುರುವಾರ) ಸ್ಥಳ: ಶಾರದಾಂಬ ದೇವಸ್ಥಾನ ವಠಾರ ಚಿಟ್ಪಾಡಿ ಉಡುಪಿ, ಸಮಯ: ಬೆಳಿಗ್ಗೆ 9.೦೦ ರಿಂದ ಮಧ್ಯಾಹ್ನ 1.೦೦ಗಂಟೆಯ ವರೆಗೆ ನಡೆಯಲಿದೆ. ಈ ಶಿಬಿರದಲ್ಲಿ ಸ್ತ್ರೀ ರೋಗ, ನೇತ್ರ, ಕೀಲು ಮತ್ತು ಎಲುಬು, […]

ಕುಂದಾಪುರ: ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ ಸುಲಿಗೆ: ಮುಸ್ಲಿಂ ಮಹಿಳೆ ಸಹಿತ ಆರು ಮಂದಿಯ ಬಂಧನ

ಉಡುಪಿ: ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌‌. ಬಂಧಿತರನ್ನು ಬೈಂದೂರು ನಾವುಂದ ಗ್ರಾಮದ ಸವದ್‌ ( 28), ಕುಂದಾಪುರ ಗುಲ್ವಾಡಿ ಗ್ರಾಮದ ಸೈಪುಲ್ಲಾ ( 38), ಕುಂದಾಪುರ ಹಂಗಳೂರು ಗ್ರಾಮದ ಮೊಹಮ್ಮದ್‌ ನಾಸೀರ್‌ ಶರೀಫ್‌ ( 36), ಕುಂದಾಪುರ ಕುಂಭಾಶಿ ಗ್ರಾಮದ ಅಬ್ದುಲ್‌ ಸತ್ತಾರ್‌ ( […]

ನಿಮ್ಮ ಭವಿಷ್ಯಕ್ಕೆ ಆರ್ಥಿಕ ಬೆಂಬಲ ನೀಡುತ್ತೆ ಅಂಚೆ ಇಲಾಖೆಯ ಈ ಯೋಜನೆ: ಕಡಿಮೆ ಹೂಡಿಕೆ ಮಾಡಿ, ಹೆಚ್ಚಿನ ಆದಾಯ ಪಡೀರಿ

ಪೋಸ್ಟ್ ಆಫೀಸ್ ನಲ್ಲಿರುವ ಕೆಲವೊಂದು ಯೋಜನೆಗಳು ಬ್ಯಾಂಕ್ ನಲ್ಲಿ ಸಿಗುವ ಬಡ್ಡಿ ದರಕ್ಕಿಂತ ಹೆಚ್ಚಿನ ಬಡ್ಡಿ ನೀಡುತ್ತದೆ. ಕಡಿಮೆ ಹೂಡಿಕೆಯಲ್ಲಿ ಪಿಪಿಎಫ್ ಯೋಜನೆ 2025: ಆಕರ್ಷಕ ಬಡ್ಡಿದರವನ್ನು ನೀಡುತ್ತವೆ. ಸಣ್ಣ ಹೂಡಿಕೆದಾರರಿಗೆ, ಮಧ್ಯಮ ವರ್ಗದವರಿಗೆ ಅಂಚೆ ಕಚೇರಿಯ ಉಳಿತಾಯ ಯೋಜನೆಗಳು ವಿಶ್ವಾಸಾರ್ಹ ಆಯ್ಕೆಯಾಗಿವೆ. ಹಾಗಾದ್ರೆ ನೋಡೋಣ ಬನ್ನಿ ಬಡ್ಡಿ ದರ ಮತ್ತು ಯೋಜನೆಯ ವಿವರಗಳನ್ನು. ಅಂಚೆಇಲಾಖೆ ಯೋಜನೆಗಳಲ್ಲಿ ಸಾರ್ವಜನಿಕ ಭವಿಷ್ಯ ನಿಧಿ (PPF) ಅತ್ಯಂತ ಜನಪ್ರಿಯವಾಗಿದೆ, ಇದು ಕಡಿಮೆ ಅಪಾಯ ಮತ್ತು ತೆರಿಗೆ ಪ್ರಯೋಜನಗಳನ್ನು ಹೊಂದಿದೆ ಬಡ್ಡಿದರ […]

ಕುಂಜಾರುಗಿರಿ: ಅವಳಿ ಕರುವಿಗೆ ಜನ್ಮ‌ ನೀಡಿದ ಹಸು

ಉಡುಪಿ: ಹಸುವೊಂದು ಅವಳಿ ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಕುಂಜಾರುಗಿರಿಯಲ್ಲಿ‌ ನಡೆದಿದೆ.ಕುಂಜಾರುಗಿರಿಯ ಪಾಜೈಯ ಕೃಷಿಕ ಹಾಗೂ‌ ಬಾಣಸಿಗ ಬಾಲಕೃಷ್ಣ ಭಟ್ ಅವರ ಮನೆಯ ದನವು ಅವಳಿ ಕರುಗಳಿಗೆ ಜನ್ಮನೀಡಿದೆ. ಒಂದು ಹೆಣ್ಣು ಹಾಗೂ ಒಂದು ಗಂಡು ಕರು ಹಾಕಿದ್ದು, ಎರಡು‌ ಕರುಗಳು‌ ಆರೋಗ್ಯವಂತಾಗಿವೆ. ಈ ಕರುಗಳನ್ನು ನೋಡಲು ಸುತ್ತಮುತ್ತಲಿನ ಜನರು ಆಗಮಿಸುತ್ತಿದ್ದಾರೆ.