ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಸಿಂಚನಾ.

ಕುಂದಾಪುರ: ಸೆಪ್ಟೆಂಬರ್ 04 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಯ ಅನಾವರಣಕ್ಕಾಗಿ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನೆರವೇರಿತು. ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಜಾನಪದ ಅಕಾಡೆಮಿ ಪುರಸ್ಕೃತರಾದ ಡಾ. ಗಣೇಶ್ ಗಂಗೊಳ್ಳಿ ಅವರು ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿ ಗಳನ್ನು […]
ಇನ್ಸ್ಪೈರ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘‘ಐಐಎಸ್ ಸಿಖಾಯೇಗ’ ಆರಂಭ

ಬೆಂಗಳೂರು: ಭಾರತದ ಮುಂದಿನ ಒಲಿಂಪಿಕ್ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್ಸ್ಪೈರ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ ಡಿಜಿಟಲ್ ಕಲಿಕಾ ವೇದಿಕೆಯನ್ನು ‘IIS Sikhaega’ ಎಂಬ ಹೆಸರಿನಲ್ಲಿ ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಕ್ರೀಡಾಪಟುಗಳು ತಮ್ಮ ಕೈಬೆರಳ ತುದಿಯಲ್ಲಿ ವಿಶ್ವಮಟ್ಟದ ಕ್ರೀಡಾ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ.ಸುಲಭವಾಗಿ ಅರ್ಥವಾಗುವ ಚಿಕ್ಕ-ಚಿಕ್ಕ ವೀಡಿಯೊಗಳ ಮೂಲಕ IIS ನ ತರಬೇತುದಾರರು, ಕೋಚ್ಗಳು, ತಜ್ಞರು ಹಾಗೂ ಯುವ ಕ್ರೀಡಾಪಟುಗಳ ಅನುಭವವನ್ನು ಹಂಚಿಕೊಳ್ಳುತ್ತಾರೆ. ಫಿಟ್ನೆಸ್ನ ಮೂಲಭೂತಗಳಿಂದ […]
ಠಾಣೆಯಲ್ಲಿಲ್ಲ ಸಿಸಿಟಿವಿ: ಪ್ರಕರಣ ದಾಖಲಿಸಿದ ಸುಪ್ರೀಂ ಕೋರ್ಟ್!

ನವದೆಹಲಿ: ಪೊಲೀಸ್ ಠಾಣೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಮಾಡದೇ ಇರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪೊಲೀಸ್ ವಶದಲ್ಲಿರುವವರ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದನ್ನು ಗಮನಿಸಿ ನ್ಯಾಯಾಲಯ ಈ ಪ್ರಕರಣ ದಾಖಲಿಸಿದೆ. ಕಳೆದ ಎಂಟು–ಒಂಬತ್ತು ತಿಂಗಳಲ್ಲಿ ಪೊಲೀಸರ ವಶದಲ್ಲಿರುವಾಗಲೇ 11 ಮಂದಿ ಮೃತಪಟ್ಟಿದ್ದಾರೆಂದು ಹಿಂದಿ ಪತ್ರಿಕೆಯೊಂದು ವರದಿ ಮಾಡಿತ್ತು. ಬೆನ್ನಲ್ಲೇ ನ್ಯಾಯಮೂರ್ತಿ ವಿಕ್ರಮ್ ನಾಥ್ ಹಾಗೂ ನ್ಯಾ.ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಈ ಸ್ವಯಂ ಪ್ರೇರಿತ ದೂರು ದಾಖಲಿಸಲು ಆದೇಶಿಸಿದೆ. 2020ರ ಡಿಸೆಂಬರ್ನಲ್ಲೇ […]
ಉಚ್ಚಿಲ ದಸರಾ ಮಹೋತ್ಸವ: ಸೆಪ್ಟೆಂಬರ್ 27ರಂದು ದಕ್ಷಿಣ ಮತ್ತು ಉಡುಪಿ ಜಿಲ್ಲಾ ಮಟ್ಟದ “ಚಿತ್ರ ಬಿಡಿಸುವ ಸ್ಪರ್ಧೆ”

ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ ಆಶ್ರಯದಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ “ಚಿತ್ರ ಬಿಡಿಸುವ ಸ್ಪರ್ಧೆ” ಸೆ.27 ರಂದು ಬೆಳಗ್ಗೆ 9:30ಕ್ಕೆ ಮೊಗವೀರ ಭವನ ಉಚ್ಚಿಲದಲ್ಲಿ ನಡೆಯಲಿದೆ. ವಿಷಯ: ನಾಡಹಬ್ಬ ದಸರಾ ವಿಭಾಗ: ಸ್ಪರ್ಧಾ ನಿಯಮಗಳು: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:www.mahalakshmicoopbank.comMobile: 9845016830, 9972120332
ರಾಜ್ಯದಲ್ಲಿ ಸಿಹಿತಿಂಡಿಗಳ ಜೊತೆ ಮಿಕ್ಸ್ಚರ್ ನಲ್ಲೂ ಹಾನಿಕಾರಕ ಅಂಶ ಪತ್ತೆ: ಆಹಾರ ಇಲಾಖೆ ಅಲರ್ಟ್

ಬೆಂಗಳೂರು: ಮೈಸೂರು ಪಾಕ್ನಂತಹ ಸಿಹಿ ತಿಂಡಿಗಳ ಜತೆಗೆ, ಮಿಕ್ಸ್ಚರ್ನಂತಹ ಖಾರದ ತಿನಿಸುಗಳಿಗೂ ಕೃತಕ ಬಣ್ಣ ಬಳಕೆ ಮಾಡುತ್ತಿರುವುದು ಆಹಾರ ಸುರಕ್ಷತೆ ಇಲಾಖೆ ನಡೆಸಿದ ವಿಶ್ಲೇಷಣೆಯಿಂದ ದೃಢಪಟ್ಟಿದೆ. ವಿವಿಧ ತಿನಿಸುಗಳು ಮತ್ತು ಆಹಾರ ಪದಾರ್ಥಗಳಲ್ಲಿ ಅಸುರಕ್ಷಿತ ಹಾಗೂ ನಿಷೇಧಿತ ಕೃತಕ ಬಣ್ಣಗಳ ಬಳಕೆ ಪತ್ತೆಗೆ ಸಂಬಂಧಿಸಿದಂತೆ ಇಲಾಖೆ ವಿಶೇಷ ಅಭಿಯಾನ ನಡೆಸುತ್ತಿದೆ. 2024–25 ಹಾಗೂ 2025–26ನೇ ಸಾಲಿಗೆ 19 ಅಭಿಯಾನಗಳನ್ನು ಇಲಾಖೆ ನಡೆಸಿ, ವಿವಿಧ ಆಹಾರ ತಿನಿಸುಗಳ ಸಾವಿರಾರು ಮಾದರಿಗಳನ್ನು ಸಂಗ್ರಹಿಸಿದೆ. ಈ ಮಾದರಿಗಳನ್ನು ಇಲಾಖೆಯ ಪ್ರಯೋಗಾಲಯಗಳಲ್ಲಿ ಪರೀಕ್ಷೆ […]