ಬ್ರಹ್ಮಾವರ: ವ್ಯಕ್ತಿ ನಾಪತ್ತೆ

ಉಡುಪಿ, ಸೆ.09: ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ, ಮೂಲತಃ ಬ್ರಹ್ಮಾವರ ತಾಲೂಕಿನ ಕಾವಡಿ ಗ್ರಾಮದ ಪ್ರಕಾಶ್ ಶೆಟ್ಟಿ (39) ಎಂಬವರು ಕೆಲಸದ ನಿಮಿತ್ತ ಹೊರಜಿಲ್ಲೆಗಳಿಗೆ ತೆರಳುತ್ತಿದ್ದು ಐದಾರು ತಿಂಗಳಿಗೊಮ್ಮೆ ಮನೆಗೆ ಬರುವ ಅಭ್ಯಾಸವಿದ್ದು, ಕಳೆದ ವರ್ಷ ಜೂನ್ ತಿಂಗಳಲ್ಲಿ ಕೊನೆಯ ಬಾರಿಗೆ ಮನೆಗೆ ಬಂದಿದ್ದ ಇವರು ತದನಂತರ ಸುಮಾರು 7 ತಿಂಗಳಿ೦ದೀಚೆಗೆ ಯಾವುದೇ ರೀತಿಯ ಸಂಪರ್ಕಕ್ಕೆ ಸಿಗದೆ, ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರವಿದ್ದು, ಕೋಲು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, […]

ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಬಾಲಕಿಯರ ತಂಡಕ್ಕೆ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ.

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಹಾಗೂ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯ ದಲ್ಲಿ ಕುಂದಾಪುರದ ಗಾಂಧಿ ಮೈದಾನ ದಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ವಿದ್ಯಾರ್ಥಿನಿಯರಾದ ರಿಷಾ, ಸಂಜನಾ, ಪ್ರೀತಿ, ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ […]

ಉಡುಪಿ:ಸೆ.8 ರಿಂದ 13ರವರೆಗೆ “ಮಹಾ ಉದ್ಯಮ ಸಪ್ತಾಹ”

ಉಡುಪಿ:ಭಾರತೀಯ ಅಂಚೆ ಇಲಾಖೆಯು ತನ್ನ ವ್ಯಾಪಾರ ಅಭಿವೃದ್ಧಿ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ದಿನಾಂಕ 8ನೇ ಸೆಪ್ಟೆಂಬರ್ 2025 ರಿಂದ 13ನೇ ಸೆಪ್ಟೆಂಬರ್ 2025 ರವರೆಗೆ “ಮಹಾ ಉದ್ಯಮ ಸಪ್ತಾಹ”ವನ್ನು ಆಯೋಜಿಸಿದೆ. ಈ ಅಭಿಯಾನದ ಮುಖ್ಯ ಗುರಿ ಸಣ್ಣ ಮತ್ತು ದೊಡ್ಡ ಉದ್ಯಮಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ, ಭಾರತೀಯ ಅಂಚೆಯ ವಿಶ್ವಾಸಾರ್ಹ ಸೇವೆಗಳ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದಾಗಿದೆ. ಈ ಸಪ್ತಾಹದಲ್ಲಿ ಅಂಚೆ ಸಿಬ್ಬಂದಿಗಳು ಪ್ರತಿಯೊಬ್ಬರನ್ನು ಭೇಟಿ ಮಾಡಿ ಅಂಚೆ ಇಲಾಖೆಯಲ್ಲಿ ಲಭ್ಯವಿರುವ್ವ ತ್ವರಿತ, ಸುರಕ್ಷಿತ ಮತ್ತು ಮಿತ […]

ಜಿಎಸ್‌ಟಿ ಪರಿಷ್ಕರಣೆ: ಐಸಿಇ ವಾಹನಗಳ ಬೆಲೆ ಕಡಿಮೆಯಾಗುವ ಸಾಧ್ಯತೆ; ಟಿವಿಎಸ್‌ ಸಿಇಒ ಕೆ.ಎನ್.ರಾಧಾಕೃಷ್ಣನ್

ಕೇಂದ್ರ ಸರ್ಕಾರದ ಜಿಎಸ್​ಟಿ ಪರಿಷ್ಕರಣೆ ಹಿನ್ನೆಲೆ ಐಸಿಇ (ಆಂತರಿಕ ದಹನಕಾರಿ ಇಂಜಿನ್​) ವಾಹನಗಳ ಬೆಲೆಗಳು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಟಿವಿಎಸ್ ಮೋಟಾರ್ ಕಂಪನಿ ಸಿಇಓ ಕೆ.ಎನ್​.ರಾಧಕೃಷ್ಣನ್ ಸೋಮವಾರ(ಸೆ. 08) ಹೇಳಿದ್ದಾರೆ ಎಂದು ವರದಿಯಾಗಿದೆ.ಜಿಎಸ್‌ಟಿ ಕೌನ್ಸಿಲ್ ಐಸಿಇ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು ಶೇ.28 ರಿಂದ ಶೇ.18 ಕ್ಕೆ ಇಳಿಕೆ ಹಿನ್ನೆಲೆ ಮಾತನಾಡಿರುವ ಅವರು, ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯು ಒಂದು ದಿಟ್ಟ ಮತ್ತು ಪರಿವರ್ತನಾತ್ಮಕ ಕ್ರಮವಾಗಿದ್ದು ಅದು ಸಮಾಜದಾದ್ಯಂತ ಬಳಕೆಯನ್ನು ವೇಗಗೊಳಿಸುತ್ತದೆ. ಜಿಎಸ್‌ಟಿ ದರ ಕಡಿತದ ಸಂಪೂರ್ಣ […]

ಭದ್ರಾವತಿ: ಈದ್‌ ಮಿಲಾದ್ ಮೆರವಣಿಗೆಯಲ್ಲಿ ಪಾಕ್‌ ಪರ ಘೋಷಣೆ; ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇವೆ – ಶಿವಮೊಗ್ಗ ಎಸ್‌ಪಿ

ಶಿವಮೊಗ್ಗ: ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭದ್ರಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಕೆಲ ಯುವಕರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಈ ಸಂಬಂಧ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಡಿಯೋ ಸತ್ಯಾಸತ್ಯತೆ ಜೊತೆಗೆ ಘೋಷಣೆ ಕೂಗಿದವರ ಶೋಧಕ್ಕೆ ಪೊಲೀಸರು ಮುಂದಾಗಿದ್ದಾರೆ. ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಮೊಗ್ಗ […]