ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಹರಿದ ಲಾರಿ: ಉಡುಪಿ ಪರ್ಕಳ ಮೂಲದ ಮಹಿಳೆ ಮೃತ್ಯು.!

ಮಂಗಳೂರು: ಮಂಗಳೂರು ನಗರದ ಕೂಳೂರು ರಾಯಲ್ ಓಕ್ ಶೋರೂಂ ಮುಂಭಾಗದಲ್ಲಿ ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಕ್ಯಾಂಟರ್ ಲಾರಿ ಹರಿದು, ಉಡುಪಿ ಪರ್ಕಳ ಮೂಲದ ಮಹಿಳೆಯೊಬ್ಬರು ಮೃತಪಟ್ಟಿರುವ ಭೀಕರ ಘಟನೆ ನಡೆದಿದೆ. ಮೃತಪಟ್ಟ ಮಹಿಳೆ ಉಡುಪಿಯ ಪರ್ಕಳ ಮೂಲದ ಮಾಧವಿ. ಮಂಗಳೂರಿನ ಎ.ಜೆ.ಆಸ್ಪತ್ರೆಯ ಸಿಬ್ಬಂದಿಯಾಗಿರುವ ಮಾಧವಿ, ಕರ್ತವ್ಯಕ್ಕೆ ಹಾಜರಾಗಲು ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದರು. ದ್ವಿಚಕ್ರ ವಾಹನವು ರಸ್ತೆ ಹೊಂಡಕ್ಕೆ ಬಿದ್ದ ಪರಿಣಾಮ ಮಾಧವಿ ರಸ್ತೆಗೆ ಬಿದ್ದಿದ್ದರು. ಈ ವೇಳೆ ಹಿಂದಿನಿಂದ ಬಂದ ಕ್ಯಾಂಟರ್ […]
‘ನಂಗೆ ಸ್ವಲ್ಪ ವಿಷ ಕೊಡಿ’: ಜಡ್ಜ್ ಮುಂದೆ ದರ್ಶನ್ ಮನವಿ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ (Darshan) ದರ್ಶನ್ ಜೈಲಿನ ನರಕಯಾತನೆ ತಾಳಲಾರದೆ ಜಡ್ಜ್ ಎದುರು ದರ್ಶನ್ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಜಡ್ಜ್ ದರ್ಶನ್ಗೆ ಕಿವಿ ಮಾತು ಹೇಳಿದ್ದಾರೆ.‘ಜೈಲು ಅಧಿಕಾರಿಗಳಿಗೆ […]
ಹುಲಿವೇಷದಲ್ಲೂ ಕಂಬಳದ ಹವಾ: ಬೆದ್ರದಲ್ಲಿ ಸದ್ದು ಮಾಡಿದ ಕೊಳಚೂರು ಕೊಂಡೆಟ್ಟು ಚೆನ್ನ!

ಕರಾವಳಿಗರ ಹೃದಯದಲ್ಲಿ ಕಂಬಳಕ್ಕೆ ಇರುವ ಪ್ರೀತಿ ಅಸಾಮಾನ್ಯ. ಸಿನಿಮಾ ನಟರಿಗಿಂತಲೂ ಹೆಚ್ಚು ತುಳುನಾಡಿನಲ್ಲಿ ಪೈಪೋಟಿ ಕೋಣಗಳಿಗೆ ಆರಾಧನೆ ಮಾಡುತ್ತಾರೆ ಎಂದರೆ ತಪ್ಪಲ್ಲ, ತನ್ನ ಮಣ್ಣಿನಲ್ಲಿ ಹುಟ್ಟಿದ ಪ್ರತಿಯೊಂದು ಕೋಣವನ್ನೂ ದೇವರೆಂದು ಕಾಣುವುದು ತುಳುನಾಡಿನ ಸಂಸ್ಕೃತಿ. ಕಂಬಳದ ಗದ್ದೆಗಳಲ್ಲಿ ಕೋಣ ಓಡುವ ಶಬ್ದವೇ ಇಲ್ಲಿನ ಜನರ ಹೃದಯದ ಧ್ವನಿ.ಹುಲಿ ಬಣ್ಣ ತೊಟ್ಟು ಕುಣಿಯುವ ಪಿಲಿನಲಿಕೆ, ಗಣೇಶೋತ್ಸವದ ಸಂಭ್ರಮದಲ್ಲಿ ಮಕ್ಕಳಿಂದ ಹಿಡಿದು ಯುವಕರವರೆಗೂ ಎಲ್ಲರ ಉಲ್ಲಾಸದಿಂದ ಕಾತರಿಸುತ್ತಾರೆ. ಈ ಪಿಲಿನಲಿಕೆಯಲ್ಲಿ ಕಾಣುವ ಪ್ರತಿಯೊಂದು ಬಣ್ಣವೂ ತುಳುನಾಡಿನ ಸಂಸ್ಕೃತಿಯ ಪ್ರತೀಕವಾಗಿದೆ. . […]
ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು; 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವು

ಉಡುಪಿ: ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ತಡರಾತ್ರಿ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್ನ ನಕಲಿ ಬೀಗದಿಂದ 600 ಗ್ರಾಂ ತೂಕದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ […]
ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಮನಸ್ಸಿನಲ್ಲಿ ಮೌಲ್ಯಗಳನ್ನು ಬೆಳೆಸುತ್ತವೆ: ಅಜಯ್ ಪುರುಷೋತ್ತಮ ಶೆಟ್ಟಿ

ಮೂಲ್ಕಿ: ಕೃಷ್ಣನ ವೇಷ ಧರಿಸಿದಾಗ ಮಕ್ಕಳು ತೋರಿಸುವ ಸೃಜನಶೀಲತೆ, ಕಲಾತ್ಮಕತೆ ಹಾಗೂ ನೈಜ ಭಾವಪ್ರಕಟನೆಗಳು ನಮ್ಮನ್ನು ಶ್ರೀಕೃಷ್ಣನ ಬಾಲ್ಯ ಲೀಲೆಯ ನೆನಪಿಗೆ ತರುತ್ತವೆ. ಇಂತಹ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಮನಸ್ಸಿನಲ್ಲಿ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಬಾಲಗೋಪಾಲರ ನಗುಮುಖ, ಅವರ ಸರಳತೆ ಮತ್ತು ಮಧುರ ನಟನೆ ಇಂದಿನ ಸ್ಪರ್ಧೆಯಲ್ಲಿ ಪ್ರತಿಯೊಬ್ಬ ಮಕ್ಕಳಿಂದ ಜೀವಂತವಾಗಲಿದೆ ಎಂದು ಉಡುಪಿಯ ಉಜ್ವಲ್ ಗ್ರೂಪ್ನ ಆಡಳಿತ ನಿರ್ದೇಶಕರಾದ ಅಜಯ್ ಪುರುಷೋತ್ತಮ ಶೆಟ್ಟಿ ತಿಳಿಸಿದರು. ಇವರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿಮಂತೂರಿನ ಶ್ರೀ ಶಾರದಾ […]