ಉಡುಪಿಯಲ್ಲಿ ಕಳೆಗಟ್ಟಿದ ಅಷ್ಟಮಿ ಸಂಭ್ರಮ; ಉತ್ಸವಕ್ಕೆ ಮೆರುಗು ತಂದ ಮುದ್ದು ಕೃಷ್ಣರು

ಉಡುಪಿ: ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಕಳೆಗಟ್ಟಿದೆ. ಇಂದು ವಿಟ್ಲಪಿಂಡಿ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿಯ ಕೃಷ್ಣಮಠಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿದರು.ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಾಜಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಮೇಲೈಸಿದ್ದವು. ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಭಕ್ತರು ಬೆಳಗ್ಗಿನಿಂದಲೇ ಸರದಿಯಲ್ಲಿ ನಿಂತು ದೇವರ ದರ್ಶನ ಪಡೆದು, ಬಳಿಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕಣ್ಣುಂಬಿಕೊಂಡರು. ರಥಬೀದಿ ಹಾಗೂ ಕೃಷ್ಣಮಠವನ್ನು ಹೂವು, ವಿದ್ಯುತ್ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಪರ್ಯಾಯ ಪುತ್ತಿಗೆ ಮಠದ ಸುಶ್ರೀಂದ್ರತೀರ್ಥ ಸ್ವಾಮೀಜಿ […]
ಉಡುಪಿ: ಅಷ್ಟಮಿ ಟ್ರೋಫಿ-2025″ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ‘ಕೃಷ್ಣ ಕಿಂಗ್ಸ್” ತಂಡ ಚಾಂಪಿಯನ್

ಉಡುಪಿ: ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ಮಾರ್ನಿಂಗ್ ಶೆಟ್ಟಲ್ ಫ್ರೆಂಡ್ಸ್ ಇದರ ಆಶ್ರಯದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ” ಅಷ್ಟಮಿ ಟ್ರೋಫಿ-2025″ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನಾಗೇಂದ್ರ ಮಾಲಕತ್ವದ “ಕೃಷ್ಣ ಕಿಂಗ್ಸ್” ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿತು. ದಿವಾ ನಂಬಿಯಾರ್ ಮಾಲಕತ್ವದ ವಿಕ್ಟೋರಿಯಾ ವೃಂದಾವನ್ ತಂಡವು ಒಂದನೇ ರನ್ನರ್ಸ್ ಅಪ್ ಪ್ರಶಸ್ತಿ ಹಾಗೂ ನಂದಕಿಶೋರ್ ಮಾಲಕತ್ವದ ಮಥುರಾ ಮಾಸ್ಟರ್ಸ್ ತಂಡವು ಎರಡನೇ ರನ್ನರ್ಸ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು.ಪಂದ್ಯಾಟವನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭಾಹಾರೈಸಿದರು. […]
ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಕೃಷ್ಣನಿಗೆ ಪುತ್ತಿಗೆ ಶ್ರೀಗಳಿಂದ ಅರ್ಘ್ಯ ಪ್ರದಾನ

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಮರ ಸೇವೆಯನ್ನು ಮಾಡಿ, ಪುತ್ತಿಗೆ ಕಿರಿಯ ಶ್ರೀಪಾದರು ರಾತ್ರಿ ಪೂಜೆಯನ್ನು ಮಾಡಿದರು. ನಂತರ ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಶೇಷ ಪೂಜೆಯನ್ನು ಪುತ್ತಿಗೆ ಮಠದ ಉಭಯ ಶ್ರೀಪಾದರು ಮಾಡಿ ರಾತ್ರಿ 12.11ರ ರೋಹಿಣಿ ನಕ್ಷತ್ರದ ಸುಮುಹೂರ್ತದಲ್ಲಿ ಶ್ರೀ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು. ನಂತರ ತುಳಸಿ ಕಟ್ಟೆಯಲ್ಲಿ ಚಂದ್ರನಿಗೆ ಉಭಯ ಶ್ರೀಪಾದರು ಅರ್ಘ್ಯ ಪ್ರಧಾನ […]
ಜಿಎಸ್ ಟಿ ಸುಧಾರಣೆಯಿಂದ ದೇಶದ ನಾಗರಿಕರಿಗೆ ಸಿಕ್ಕಿತು ದೊಡ್ಡ ಗೆಲವು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಚೆನ್ನೈ: ‘ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ದರಗಳ ಪರಿಷ್ಕರಣೆಯಿಂದ ದೇಶದ ಪ್ರತಿಯೊಬ್ಬ ನಾಗರಿಕನಿಗೂ ದೊಡ್ಡ ಗೆಲುವು ಸಿಕ್ಕಂತಾಗಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಣ್ಣಿಸಿದ್ದಾರೆ.ಚೆನ್ನೈ ಸಿಟಿಜನ್ಸ್ ಫೋರಮ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದ ಪ್ರತಿಯೊಂದು ರಾಜ್ಯದಲ್ಲಿ ತನ್ನದೇ ಆದ ಹಬ್ಬಗಳನ್ನು ಆಚರಿಸುತ್ತಿರುವುದರಿಂದ ದೀಪಾವಳಿ ಹಬ್ಬಕ್ಕೂ ಮುನ್ನವೇ ಜಿಎಸ್ಟಿ ಸುಧಾರಣೆಗಳನ್ನು ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಗೂ ಮುಂಚಿತವಾಗಿಯೇ ನಿರ್ಧರಿಸಲಾಗಿತ್ತು’ ಎಂದು ಅವರು ಹೇಳಿದ್ದಾರೆ. ‘ಜನರು ಪ್ರತಿನಿತ್ಯ ಬಳಸುವ ಎಲ್ಲಾ ಉತ್ಪನ್ನಗಳ […]
ಆತ್ಯಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ಯುವತಿಯರು: ಒಬ್ಬರ ಸಾವು, ಇಬ್ಬರು ಗಂಭೀರ!

ರಾಯಚೂರು:ಒಂದೇ ಮನೆಯ ಮೂವರು ಯುವತಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದಂತಹ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೆ ಇರಬಗೇರಾ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಇರಬಗೇರಾ ಗ್ರಾಮದ ರೇಣುಕಾ ರಂಗಪ್ಪ (18) ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮತ್ತಿಬ್ಬರು ಯುವತಿಯರು ತೀವ್ರ ಅಸ್ವಸ್ಥರಾಗಿದ್ದು, ನಗರದ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿತಾ ಕರಿಯಪ್ಪ ಸ್ಥಿತಿ ಗಂಭೀರವಾಗಿದೆ. ಅಲ್ಲದೆ, ತಿಮ್ಮವ್ವ ನಾಗಪ್ಪ ಎಂಬ ಯುವತಿಯೂ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿಕೆ ಕೊಟ್ಟಿದ್ದಾರೆ. ದೇವದುರ್ಗ ಪೊಲೀಸ್ […]