ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘ: ನಾಳೆ (ಡಿ. 7) ಪ್ರಧಾನ ಕಚೇರಿಯ ಹವಾನಿಯಂತ್ರಿತ “ಸಮೃದ್ಧಿ” ಕಟ್ಟಡ ಉದ್ಘಾಟನಾ ಸಮಾರಂಭ.

ಉಡುಪಿ: ಕೊಡವೂರು ಶಾಲಾ ಬಳಿ ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿ ಕಟ್ಟಡ “ಸಮೃದ್ಧಿ” ಇದರ ಉದ್ಘಾಟನಾ ಸಮಾರಂಭವು ಡಿಸೆಂಬರ್ 7ರಂದು ಬೆಳಿಗ್ಗೆ 10ಕ್ಕೆ ಜರಗಲಿದೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ, ಆಡಳಿತ ಮಂಡಳಿ ಸಭಾಂಗಣವನ್ನು ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ದೀಪ ಪ್ರಜ್ವಲಿಸಲಿದ್ದು, ಶಾಸಕ ಯಶ್‌ಪಾಲ್ ಎ. ಸುವರ್ಣ ಸಭಾ ಕಾರ್ಯಕ್ರಮ […]

ಎಸ್ ಸಿಡಿಸಿಸಿ ಬ್ಯಾಂಕ್ ನಿಂದ ಉಡುಪಿ ಪೊಲೀಸ್ ಇಲಾಖೆಗೆ ಹೊಸ ಜೀಪ್ ಹಸ್ತಾಂತರ

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಡುಪಿ ಜಿಲ್ಲಾ ಪೊಲೀಸರಿಗೆ ಬೋಲೇರೋ ವಾಹನವನ್ನು ಕೊಡುಗೆಯಾಗಿ ಹಸ್ತಾಂತರ ಮಾಡಿದೆ. ಉಡುಪಿ ಎಸ್‌ಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿ, ಎಸ್ ಪಿ ಹರಿರಾಮ್ ಶಂಕರ್ ಅವರಿಗೆ ಕೀಲಿ ಕೈ ಹಸ್ತಾಂತರ ಮಾಡಿದರು.ಪೊಲೀಸ್ ಇಲಾಖೆ ಹಲವಾರು ವಾಹನಗಳು 15 ವರ್ಷವನ್ನು ಪೂರೈಸಿದ್ದು, ಕೆಲ ವಾಹನಗಳು ದುರಸ್ತಿಯಲ್ಲಿ ಇರುವುದರಿಂದ ಇಲಾಖೆಗೆ ಕರ್ತವ್ಯ ನಿರ್ವಹಿಸಲು […]

ಗೋ ಕಳ್ಳರಿಗೆ ಸಹಕರಿಸಲು ‘ಗೋ ಹತ್ಯೆ ನಿಷೇಧ’ ಕಾನೂನಿಗೆ ತಿದ್ದುಪಡಿ ತರಲು ಹೊರಟ ಕಾಂಗ್ರೆಸ್ ಸರಕಾರ- ವಿಶ್ವ ಹಿಂದೂ ಪರಿಷತ್

ಉಡುಪಿ: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ 2020 ಅನ್ನು ಸಡಿಲುಗೊಳಿಸಿ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರಕಾರದ ಕ್ರಮವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಇದೇ ಡಿ.8ರ ಸೋಮವಾರದಂದು ಉಡುಪಿ ಜಟ್ಕಾ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಎಚ್ ಪಿ ಕರ್ನಾಟಕ ದಕ್ಷಿಣ ಪ್ರಾಂತ್ಯದ ಗೋ ರಕ್ಷಾ ಪ್ರಮುಖರಾದ ಸುನೀಲ್ ಕೆ.ಆರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಹಿಂದೂ ಸಂಘಟನೆ ಹಾಗೂ ಕಾರ್ಯಕರ್ತರ ಮೇಲೆ […]

ಹಿರಿಯಡ್ಕ: ಡಿ.6 ರಂದು ಸಹಾಯಹಸ್ತ ಟ್ರಸ್ಟ್ (ರಿ.) ಇದರ ಉದ್ಘಾಟನಾ ಸಮಾರಂಭ, ಸಹಾಯಧನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ

ಹಿರಿಯಡ್ಕ: ಸಹಾಯಹಸ್ತ ಟ್ರಸ್ಟ್ (ರಿ.) ಮುಂಡುಜೆ ಇದರ ಉದ್ಘಾಟನಾ ಸಮಾರಂಭ, ಸಹಾಯಧನ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಡಿ.6 ರಂದು ಸಂಜೆ 7 ಗಂಟೆಗೆ ಹಿರಿಯಡ್ಕ ಮುರತ್ತಗುಡ್ಡೆ ಮೈದಾನ, ವರುಣ್ ಪೈಪ್ಸ್ ಫ್ಯಾಕ್ಟರಿಯ ಹತ್ತಿರ ನಡೆಯಲಿದೆ. ಸಭಾ ಕಾರ್ಯಕ್ರಮ:ಅಧ್ಯಕ್ಷತೆ:ಗುರ್ಮೆ ಶ್ರೀ ಸುರೇಶ್ ಶೆಟ್ಟಿ ಶಾಸಕರು, ಕಾಪು ವಿಧಾನಸಭಾ ಕ್ಷೇತ್ರ ಉದ್ಘಾಟನೆ:ಡಾ. ದೇವದಾಸ ಕಾಮತ್, ವೈದ್ಯರು, ಕಾಮತ್ ನರ್ಸಿಂಗ್ ಹೋಮ್, ಹಿರಿಯಡ್ಕ ಪ್ರಧಾನ ಭಾಷಣಕಾರರು:ಶ್ರೀ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮುಖ್ಯ ಅತಿಥಿಗಳು:ಶ್ರೀ ಸುರೇಶ್ ನಾಯಕ್ ಕುಯಿಲಾಡಿ, ಉದ್ಯಮಿ ಹಾಗೂ […]

ಉಡುಪಿ: ರೇಷ್ಮಾಗೆ ಪಿಎಚ್.ಡಿ. ಪದವಿ

ಉಡುಪಿ: ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಮಣಿಪಾಲ್ ಇಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರೇಷ್ಮಾ ಅವರು ಸಲ್ಲಿಸಿದ ಸಂಶೋಧನಾ ಪ್ರಬಂಧಕ್ಕೆ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ. ರೇಷ್ಮಾ ಅವರು ಕುವೆಂಪು ವಿಶ್ವವಿದ್ಯಾನಿಲಯದ ಮ್ಯಾನೇಜ್ ಮೆಂಟ್ ಸ್ಟಡೀಸ್ ಇದರ ಹಿರಿಯ ಪ್ರೊಫೆಸರ್ ಡಾ. ಎಚ್.ಎನ್.ರಮೇಶ್ ಅವರ ಮಾರ್ಗದರ್ಶನದಲ್ಲಿ ‘ಪರ್ಫಾರ್ಮೆನ್ಸ್ ಇವಾಲ್ಯುವೇಷನ್ ಆಫ್ ಮ್ಯೂಚುವಲ್ ಫಂಡ್ಸ್ -ಎ ಕಂಪಾರೇಟಿವ್ ಸ್ಟಡಿ ಆನ್ ಸೆಲೆಕ್ಟ್ ಈಕ್ವಿಟಿ ಆಂಡ್ ಡೆಟ್ ಫಂಡ್ಸ್ ಇನ್ ಇಂಡಿಯಾ ’ ಎಂಬ […]