ಉಡುಪಿ: ರಸ್ತೆ ಬದಿಯ ಕಾಂಪೌಂಡ್‌ಗೆ ಸ್ಕೂಟರ್ ಡಿಕ್ಕಿ; ಮಹಿಳೆ ಮೃತ್ಯು, ಪುತ್ರ ಗಂಭೀರ

ಉಡುಪಿ: ಸ್ಕೂಟರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿಯ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.ಘಟನೆಯಲ್ಲಿ ಮಹಿಳೆಯ ಪುತ್ರ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಅವರ ಪುತ್ರ ಶೆರ್ವಿನ್ (20) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಯಿ ಮತ್ತು ಮಗ ಚಲಿಸುತ್ತಿದ್ದ ಸ್ಕೂಟರ್ ನಿಟ್ಟೂರು ರಸ್ತೆ ಬದಿಯಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ವೇಗವಾಗಿ ಅಪ್ಪಳಿಸಿದೆ. ಅಪಘಾತದ […]

ಏಂಜೆಲ್ ಝುಂಬಾ ಫಿಟ್ನೆಸ್ ಸ್ಟುಡಿಯೋ 4ನೇ ವರ್ಷದ ಸಂಭ್ರಮ: ಉಡುಪಿಯಲ್ಲಿ ಜುಂಬಾ ಮಾಸ್ಟರ್ ಕ್ಲಾಸ್

ಉಡುಪಿ: ಏಂಜೆಲ್ ಝುಂಬಾ ಮತ್ತು ಫಿಟ್ನೆಸ್ ಸ್ಟುಡಿಯೋ ವತಿಯಿಂದ “ಜುಂಬಾ ಮಾಸ್ಟರ್ ಕ್ಲಾಸ್” ಹಾಗೂ ಸಂಸ್ಥೆಯ 4ನೇ ವರ್ಷದ ವಾರ್ಷಿಕೋತ್ಸವ ಆಚರಣೆ ಮಾರ್ಚ್ 28, 2026ರಂದು ಸಂಜೆ 6:30ಕ್ಕೆ ಉಡುಪಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಝುಂಬಾ ತರಬೇತುದಾರರಾದ ZIN ಪೂರ್ಣಿಮಾ ಪೆರ್ಗನ್ನ ಹಾಗೂ ಪುಣೆಯಿಂದ ವಿಶೇಷ ಅತಿಥಿಯಾಗಿ ಆಗಮಿಸುವ ZIN ಕರಿಷ್ಮಾ ಭಾಗವಹಿಸಿ ವಿಶೇಷ ಝುಂಬಾ ತರಗತಿಯನ್ನು ನಡೆಸಲಿದ್ದಾರೆ. ಫಿಟ್ನೆಸ್ ಹಾಗೂ ನೃತ್ಯ ಪ್ರಿಯರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಎಲ್ಲರೂ ಭಾಗವಹಿಸಲು ಆಹ್ವಾನಿಸಲಾಗಿದೆ. ಕಾರ್ಯಕ್ರಮಕ್ಕೆ ಪ್ರವೇಶ ಶುಲ್ಕವನ್ನು […]

ಶ್ರೀ ಪೆರ್ಡೂರು ಅನಂತಪದ್ಮನಾಭ ಕ್ಷೇತ್ರದಲ್ಲಿ ಮಾ.16 ರಂದು ಶ್ರೀಮನ್ಮಹಾರಥೋತ್ಸವ: ಕದಳೀಪ್ರಿಯನ ನಾಡಿನಲ್ಲಿ ಸಂಭ್ರಮ, ಸಡಗರ

ಉಡುಪಿ: ಶ್ರೀ ಪೆರ್ಡೂರು ಅನಂತಪದ್ಮನಾಭ ಕ್ಷೇತ್ರದಲ್ಲಿವಾರ್ಷಿಕ ಜಾತ್ರಾಮಹೋತ್ಸವಗಳು ಶುರುವಾಗಿದ್ದು,ಮಾ. 13 ರಂದು ಧ್ವಜಾರೋಹಣ, ಆಗ್ನಿಜನನ, ಪ್ರಧಾನಹೋಮ, ಕಲಶಾಭಿಷೇಕ, ಮಧ್ಯಾಹ್ನ :ಮಹಾಪೂಜೆ, ಅನ್ನಸಂತರ್ಪಣೆ,ರಾತ್ರಿ : ದೀವಟಿಗೆ ಸೇವೆ, ಉತ್ಸವ ಬಲಿ, ಗರುಡವಾಹನ, ತೆಪ್ಪೋತ್ಸವ, ರಥೋತ್ಸವ, ಓಲಗಮಂಟಪದಲ್ಲಿ ಪೂಜೆ, ಅಷ್ಟಾವಧಾನ ಸೇವೆಗಳು, ಮಹಾಪೂಜೆ, ನಿತ್ಯಬಲಿ, ಸವಾರಿ ಬಲಿ, ಕಟ್ಟೆಪೂಜೆ, ಕಂಚಿಲ ಸೇವೆ, ದೊಡ್ಡರಂಗಪೂಜೆ, ರಂಗಪೂಜೆ ಬಲಿ, ಕೆರೆದೀಪ, ಚಂದ್ರಮಂಡಲ ರಥ, ಉಶಃಕಾಲ ಪೂಜೆ, ಕಂಚಿಲ ಪ್ರಸಾದ ವಿತರಣೆ ನಡೆಯಿತು. ಶ್ರೀ ಕ್ಷೇತ್ರದಲ್ಲಿ 14 ರಂದು ಮಧ್ಯಾಹ್ನ ಪ್ರಧಾನಹೋಮ, ಕಲಶಾಭಿಷೇಕ, ಮಹಾಪೂಜೆ […]

ಉಡುಪಿ: ಉದ್ಯೋಗಾವಕಾಶ.

ಉಡುಪಿ: ಉಡುಪಿ ಕಿನ್ನಿ ಮುಲ್ಕಿಯಲ್ಲಿರುವ ಪ್ರತಿಷ್ಠಿತ ಪೃಥ್ವಿ ಏಜೆನ್ಸ್ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮಳಿಗೆಗೆ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯುವತಿಯರು/ ಯುವಕರು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ತಮ್ಮ ರೆಸ್ಯೂಮ್ ‌ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.ಮೊ: 9845243328,[email protected]

ಉಡುಪಿ: ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎನ್‌ಆರ್‌ಸಿ ಕೇಂದ್ರ ಇಲ್ಲದಿರುವುದು ಖೇಧಕರ- ಶಶಿಧರ್ ಕೋಸಂಬೆ

ಉಡುಪಿ: ಉಡುಪಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಶುಕ್ರವಾರ ಸದಸ್ಯರೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಿಶೇಷ ಆಹಾರ, ಚಿಕಿತ್ಸೆ ಮತ್ತು ಆರೈಕೆ ನೀಡಿ ಆರೋಗ್ಯವನ್ನು ಸುಧಾರಿಸುವ ಮಕ್ಕಳ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರ(ಎನ್‌ಆರ್‌ಸಿ)ವೇ ಉಡುಪಿ ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಲ್ಲದೆ ಇರುವುದು ಖೇಧಕರ […]