ಉರಿ ಮೂತ್ರ, ಮೂತ್ರನಾಳದ ಸೋಂಕು ಎಂದಿಗೂ ಕಡೆಗಣಿಸಬೇಡಿ: ಇಲ್ಲಿದೆ ಉಪಯುಕ್ತ ಮಾಹಿತಿ

ಮೂತ್ರನಾಳದ ಸೋಂಕು Urinary Tract Infection(UTI), ಮೂತ್ರ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಮೂತ್ರಪಿಂಡ, ಮೂತ್ರಾಶಯ (Bladder), ಮೂತ್ರನಾಳ (Urethra) ಗಳಲ್ಲಿ ಉಂಟಾಗುವ ಬ್ಯಾಕ್ಟೀರಿಯಾ ಸೋಂಕಾಗಿದೆ. ಇದು ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದ್ದರೂ, ಪುರುಷರು ಮತ್ತು ಮಕ್ಕಳಲ್ಲೂ ಇದು ಕಾಣಿಸಿಕೊಳ್ಳಬಹುದು. ಪ್ರಮುಖ ಕಾರಣಗಳು ಮೂತ್ರನಾಳದ ಸೋಂಕು ಸಾಮಾನ್ಯವಾಗಿ ಬ್ಯಾಕ್ಟೀರಿಯಾಗಳಿಂದ ಉಂಟಾಗುತ್ತದೆ. ಲಕ್ಷಣಗಳು ತಡೆಗಟ್ಟುವಿಕೆ ಕ್ರಮಗಳು UTI ಸಾಮಾನ್ಯ ಸಮಸ್ಯೆಯಾದರೂ, ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಸಲಹೆ […]
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮಂಜುನಾಥ ಆರ್. (ಕೆಎಂಎಎಸ್) ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಇವರು ಈ ಹಿಂದೆ ಕಾರಾವರ, ಹಾವೇರಿ, ಯಾದಗಿರಿ, ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ ದರ್ಜೆಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು ಖಾಲಿಯಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಬಿಜೆಪಿ ಮಾಜಿ ನಾಯಕನ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ: ಸಂತ್ರಸ್ತ ಯುವತಿಗೆ ಪ್ರತೀ ತಿಂಗಳು ರೂ.75 ಸಾವಿರ ನೀಡಲು ಕೋರ್ಟ್ ಆದೇಶ

ಮಂಗಳೂರು: ಮದುವೆಯಾಗುವ ಭರವಸೆ ನೀಡಿ ಯುವತಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ಮುಖಂಡ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆರೋಪಿ ಕೃಷ್ಣ ಜೆ. ರಾವ್ ಅವರು ಸಲ್ಲಿಸಿದ್ದ ಪ್ರಕರಣ ರದ್ದುಪಡಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ. ಆದರೆ, ಈ ತಡೆಯಾಜ್ಞೆಯು ನ್ಯಾಯಾಲಯ ವಿಧಿಸಿರುವ ಒಂದು […]
ಕುಂದಾಪುರ: ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣ- ಇಬ್ಬರು ಕಳ್ಳರ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏ.20ರಂದು ಬೆಳಿಗ್ಗೆ ನಡೆದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಕಳ್ಳರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ ಎಳಬೇರು ನಿವಾಸಿ ಸಂದೀಪ ಆಚಾರಿ (28) ಹಾಗೂ ಕೊಪ್ಪಳ ಜಿಲ್ಲೆಯ ಬನಹಟ್ಟಿ ಗ್ರಾಮದ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ […]
ಡಾ.ಕೆ. ಎಂ. ರಾಘವ ನಂಬಿಯಾರ್ ಗೆ ಪಾರ್ತಿಸುಬ್ಬ ಪ್ರಶಸ್ತಿ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತ ಉಡುಪಿ ಇಂದ್ರಾಳಿಯ ಡಾ.ಕೆ. ಎಂ. ರಾಘವ ನಂಬಿಯಾರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 1 ಲಕ್ಷ ರೂ., ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ. ಮೇ 3ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿರುವ 2025ನೇ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ನಂಬಿಯಾರ್ ಅವರನ್ನು ಸನ್ಮಾನಿಸಲಾಗುವುದು […]