ಡಾ.ಕೆ. ಎಂ. ರಾಘವ ನಂಬಿಯಾರ್ ಗೆ ಪಾರ್ತಿಸುಬ್ಬ ಪ್ರಶಸ್ತಿ

ಉಡುಪಿ: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2025ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಯಕ್ಷಗಾನ ಸಂಶೋಧಕ, ಪ್ರಸಂಗಕರ್ತ ಹಾಗೂ ಭಾಗವತ ಉಡುಪಿ ಇಂದ್ರಾಳಿಯ ಡಾ.ಕೆ. ಎಂ. ರಾಘವ ನಂಬಿಯಾರ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ 1 ಲಕ್ಷ ರೂ., ಪ್ರಶಸ್ತಿ ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿದೆ. ಮೇ 3ರಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿರುವ 2025ನೇ ಸಾಲಿನ ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾ.ನಂಬಿಯಾರ್ ಅವರನ್ನು ಸನ್ಮಾನಿಸಲಾಗುವುದು […]

ಬಿಪಿಸಿಎಲ್‌ನಲ್ಲಿ ಬಂಪರ್ ಉದ್ಯೋಗಾವಕಾಶ!

ಪ್ರತಿಷ್ಠಿತ ಸರ್ಕಾರಿ ಸ್ವಾಮ್ಯದ ಕಂಪೆನಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 250ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 17 ಕೊನೆಯ ದಿನವಾಗಿದೆ. ಹುದ್ದೆಗಳ ವಿವರ ಅಸೋಸಿಯೇಟ್ ಎಕ್ಸಿಕ್ಯೂಟಿವ್: ಈ ಹುದ್ದೆಗೆ ಆಯ್ಕೆಯಾದವರಿಗೆ ₹40,000 ರಿಂದ ಆರಂಭವಾಗಿ ಗರಿಷ್ಠ ₹1,40,000 ವರೆಗೆ ವೇತನ ದೊರೆಯುತ್ತದೆ. ಜೂನಿಯರ್ ಎಕ್ಸಿಕ್ಯೂಟಿವ್: ಈ ತಾಂತ್ರಿಕ ಹುದ್ದೆಗಳಿಗೆ ₹30,000 ರಿಂದ ₹1,20,000 ವರೆಗೆ ಮಾಸಿಕ ಸಂಭಾವನೆ ಇರಲಿದೆ. ಸಂಬಳದ ಜೊತೆಗೆ ವೈದ್ಯಕೀಯ ಸೌಲಭ್ಯ, ರಜೆ ಭತ್ಯೆ […]

ಭಾರತದಲ್ಲಿ 10 ವರ್ಷ ಪೂರೈಸಿರೋ ಈ ಮೊಬೈಲ್ ಕಂಪನಿ, ಗ್ರಾಹಕರಿಗೆ ಬರೋಬ್ಬರಿ “ರಿಪ್ಲೇಸ್‌ಮೆಂಟ್ ಆಫರ್” ಘೋಷಿಸಿದೆ!

ಈಗ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಯ್ತು ಅಂದ್ರೆ ಅದನ್ನು ಸರಿಮಾಡಿಸೋದೇ ಒಂದು ದೊಡ್ಡ ತಲೆಬಿಸಿಯ ಕೆಲಸ. ಈ ಮಧ್ಯೆ ಭಾರತದಲ್ಲಿ 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಐಟೆಲ್ ಕಂಪನಿ, ತನ್ನ ಗ್ರಾಹಕರಿಗೆ ವಿಶೇಷ ಉಡುಗೊರೆಯಾಗಿ ಫೀಚರ್ ಫೋನ್‌ಗಳ ಮೇಲೆ ಒಂದು ವರ್ಷದ ‘ಕೌಂಟರ್ ರಿಪ್ಲೇಸ್‌ಮೆಂಟ್’ ಆಫರ್ ಅನ್ನು ಘೋಷಿಸಿದೆ. ಈ ಆಫರ್‌ನಡಿ, ಫೋನ್‌ನಲ್ಲಿ ಯಾವುದೇ ಉತ್ಪಾದನಾ ದೋಷ ಕಂಡುಬಂದರೆ ರಿಪೇರಿ ಮಾಡುವ ಬದಲು ನೇರವಾಗಿ ಹೊಸ ಫೋನ್ ನೀಡಲಾಗುತ್ತದೆ. ಕಡಿಮೆ ಬೆಲೆ, ಉತ್ತಮ ಗುಣಮಟ್ಟ ಮತ್ತು […]

ಪೆರ್ಡೂರು ಎ.ಪಿ. ಟಿ. ಶಾಲೆಯಲ್ಲಿ ಚಾಣಕ್ಯ ನಲಿ ಕಲಿ ಬೇಸಗೆ ಶಿಬಿರ

ಹೆಬ್ರಿ: ರಜಾ ಸಮಯನ್ನು ಟಿವಿ ಮೊಬೈಲ್ ನೋಡುತ್ತಾ ವ್ಯರ್ಥ ಕಾಲ ಹರಣ ಮಾಡುವ ಬದಲು ಇಂತಹ ಬದುಕು ಶಿಕ್ಷಣ ನೀಡುವ ಬೇಸಗೆ ಶಿಬಿರಕ್ಕೆ ಸೇರ್ಪಡೆಗೊಳಿಸಿದಾಗ ಮಕ್ಕಳ ಪ್ರತಿಭೆಗಳು ಅನಾವರಣಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 11 ವರ್ಷಗಳಿಂದ ವಿನೂತನ ಬೇಸಿಗೆ ಶಿಬಿರ ಮೂಲಕ ಮಕ್ಕಳ ಮನೆಗೆದ್ದಿದೆ ಎಂದು ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ ಹೇಳಿದರು. ಅವರು ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಪೆರ್ಡೂರು ಅನಂತಪದ್ಮನಾಭ […]

ಉಡುಪಿ: ಅಶ್ವಥ ಎಲೆಯಲ್ಲಿ ಮೂಡಿಬಂದ ರಾಜಕುಮಾರ್ ರೇಖಾಚಿತ್ರ

ಉಡುಪಿ: ಇಂದು ನಟಸಾರ್ವಭೌಮ ಡಾ. ರಾಜಕುಮಾರ್ ಜನ್ಮದಿನ. ಈ ದಿನವನ್ನು ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ. ನಟಸಾರ್ವಭೌಮನ ಜನ್ಮದಿನದ ಅಂಗವಾಗಿ ಅಶ್ವಥ್ದ ಎಲೆಯಲ್ಲಿ ಚಿತ್ರವನ್ನು ರಚಿಸಲಾಗಿದೆ‌ 97ನೇ ವರ್ಷದ ಜನುಮದಿನದ. ಅಂಗವಾಗಿ ಕಲಾವಿದ ಸಾಮಾಜಿಕ ಕಾರ್ಯಕರ್ತ ಸರಳೆಬೆಟ್ಟು ಗಣೇಶ್ ರಾಜ್ ಅವರು ಈ ಅಪರೂಪದ ಚಿತ್ರ ರಚಿಸಿದ್ದಾರೆ. ಕಲಾವಿದನ ಕೈಚಳಕದಲ್ಲಿ ಒಣಗಿದ ಅಶ್ವಥ ಎಲೆಯಲ್ಲಿ ವರನಟ ರಾಜಕುಮಾರ್ ಅವರ ರೇಖಾ ಚಿತ್ರ ಮೂಡಿಬಂದಿದೆ. ಉಡುಪಿಯಲ್ಲಿ ರಾಜ್ ಅಭಿಮಾನಿ ಸಂಘದ ಕಾರ್ಯದರ್ಶಿಯಾಗಿ ಗಣೇಶ್ ರಾಜ್ ಕೆಲಸ ಮಾಡಿದ್ದರು