ಮಳೆಗಾಲದ ಮೊದಲೇ ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಶುರು, ರೇಲ್ವೆ ಇಲಾಖೆ ನೀಡಿದ ಅಪ್ಡೇಟ್ ಗಳೇನು?

ಬೆಂಗಳೂರು : ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಸಂತಸದ ಸುದ್ದಿ ಸಿಕ್ಕಿದೆ. ಈ ಮಾರ್ಗದಲ್ಲಿ ಹೈಸ್ಪೀಡ್ ವಂದೇ ಭಾರತ್ ರೈಲು ಸೇವೆ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ ಇದೆ. ಮಳೆಗಾಲಕ್ಕೂ ಮುನ್ನವೇ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ಹಾಸನ-ಮಂಗಳೂರು ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಆರಂಭಿಕ ಪರೀಕ್ಷೆಗಳು ಈಗಾಗಲೇ ನಡೆದಿವೆ. ಜೂನ್ ತಿಂಗಳೊಳಗೆ ಪ್ರಾಯೋಗಿಕ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆ ಇದೀಗ […]
ಮಂಗಳೂರು ದಸರಾ ಮೆರವಣಿಗೆಯ ಮಾರ್ಗದ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ ಭೂಗತ ಕೇಬಲ್ ಅಳವಡಿಕೆಗೆ ರಾಜ್ಯ ಸರಕಾರದಿಂದ 67 ಕೋಟಿ

ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆ ಮಾರ್ಗದಲ್ಲಿ ಹಲವು ವರ್ಷಗಳಿಂದ ಸಮಸ್ಯೆಯಾಗಿದ್ದ ಮೇಲ್ದಂಡೆಯ ವಿದ್ಯುತ್ ತಂತಿಗಳನ್ನು ತೆರವುಗೊಳಿಸಿ, ಭೂಗತ ಕೇಬಲ್ ಅಳವಡಿಸುವ 67 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಪ್ರತಿ ವರ್ಷ ದಸರಾ ಮೆರವಣಿಗೆಯ ವೇಳೆ ಸಾಗುವ ಎತ್ತರದ ಸ್ತಬ್ಧಚಿತ್ರಗಳು, ರಥಗಳು ಹಾಗೂ ಅಲಂಕಾರಿಕ ವಾಹನಗಳಿಗೆ ರಸ್ತೆ ಮೇಲ್ಭಾಗದಲ್ಲಿ ಹಾದುಹೋಗುತ್ತಿದ್ದ ವಿದ್ಯುತ್ ತಂತಿಗಳು ದೊಡ್ಡ ಅಡಚಣೆಯಾಗುತ್ತಿತ್ತು. ಸುರಕ್ಷತಾ ಕ್ರಮವಾಗಿ ಮೆರವಣಿಗೆಯ ಸಮಯದಲ್ಲಿ ನಗರದ ಅನೇಕ ಭಾಗಗಳಲ್ಲಿ ವಿದ್ಯುತ್ ಸಂಪರ್ಕ […]
ಕಾಸ್ಮೆಟಾಲಜಿ ಕ್ಷೇತ್ರದಲ್ಲಿದೆ ಅದ್ಬುತ ಅವಕಾಶಗಳು, ಮಣಿಪಾಲದ MSDC ಯಲ್ಲಿದೆ ಕಾಸ್ಮೆಟಾಲಜಿ ಪದವಿ ಕೋರ್ಸ್! ಈಗ ಪ್ರವೇಶಾತಿ ಶುರು

ಉಡುಪಿ: ಮಣಿಪಾಲ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ಮತ್ತು ಓರೇನ್ ಇಂಟರ್ನ್ಯಾಷನಲ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾಸ್ಮೆಟಾಲಜಿ ಕ್ಷೇತ್ರದಲ್ಲಿ ಬ್ಯಾಚುಲರ್ ಪದವಿ ಕೋರ್ಸ್ಗಳಿಗೆ 2026–27ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿವೆ. ಸೌಂದರ್ಯ ವೃತ್ತಿಪರರ ಮುಂದಿನ ಪೀಳಿಗೆಯನ್ನು ಸಬಲಗೊಳಿಸುವ ಉದ್ದೇಶದಿಂದ ರೂಪಿಸಲಾದ ಈ ಕೋರ್ಸ್ನಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ತರಬೇತಿ ನೀಡಲಾಗುತ್ತದೆ. ಯುಜಿಸಿ ಮಾನ್ಯತೆ ಪಡೆದ ಪದವಿಯಾಗಿರುವುದರಿಂದ ಸರ್ಕಾರ ಹಾಗೂ ಖಾಸಗಿ ವಲಯಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ.ಈ ಕೋರ್ಸ್ನಲ್ಲಿ ಮಾಸ್ಟರ್ ಕಾಸ್ಮೆಟಾಲಜಿ, ಮೇಕಪ್, ಕೂದಲು ಆರೈಕೆ, ನೇಲ್ ಆರ್ಟ್ ಸೇರಿದಂತೆ ಹಲವು ವಿಷಯಗಳಲ್ಲಿ […]
ಮೊಟ್ಟೆ ಬೇಯಿಸುವಾಗ ನೀರಿಗೆ ಒಂದಿಷ್ಟು ಉಪ್ಪು ಹಾಕಿ! ಇದು ಸ್ಪೆಷಲ್ ಕುಕಿಂಗ್ ಟಿಪ್ಸ್

ಮೊಟ್ಟೆ ಬೇಯಿಸುವಾಗ ನೀರಿಗೆ ಸ್ವಲ್ಪ ಉಪ್ಪು ಸೇರಿಸುವುದು ಬಹುಜನರು ಅನುಸರಿಸುವ ಹಳೆಯ ಅಡುಗೆ ಟ್ರಿಕ್ ಆಗಿದೆ. ಆದರೆ ಇದರ ಹಿಂದೆ ಇರುವ ನಿಜವಾದ ಕಾರಣಗಳು ಏನು ಎಂಬುದು ಹಲವರಿಗೆ ತಿಳಿದಿಲ್ಲ. ಸಿಪ್ಪೆ ಸುಲಭವಾಗಿ ತೆಗೆಯಲು ಸಹಾಯ ಉಪ್ಪು ನೀರಿನಲ್ಲಿ ಮೊಟ್ಟೆ ಕುದಿಸಿದರೆ, ಸಿಪ್ಪೆ ಸುಲಭವಾಗಿ ಬಿಡಿಸಲು ಸಹಾಯವಾಗುತ್ತದೆ ಎಂದು ಹೇಳಲಾಗುತ್ತದೆ. ವಿಶೇಷವಾಗಿ ಹೊಸ ಮೊಟ್ಟೆಗಳ ಸಿಪ್ಪೆ ಬಿಗಿಯಾಗಿ ಅಂಟಿಕೊಂಡಿರುವ ಸಂದರ್ಭದಲ್ಲಿ ಈ ವಿಧಾನ ಉಪಯುಕ್ತವಾಗಬಹುದು. ಒಡೆದ ಮೊಟ್ಟೆಗೆ ರಕ್ಷಣೆ ಮೊಟ್ಟೆ ಕುದಿಸುವಾಗ ಅದು ಒಡೆದರೆ, ಉಪ್ಪು ನೀರು […]
ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿದೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಆಯೋಜಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಪಂಚ ಗ್ಯಾರಂಟಿ ಯೋಜನೆ ಸಮಾವೇಶ”ದಲ್ಲಿ ಅವರು ಮಾತನಾಡಿದರು. ನಾನು ಸೋತವ, ವಿಧಾನಸಭೆಗೆ ಪ್ರವೇಶಿಸಲು ನನಗೆ ನೀವೇ ಅಧಿಕಾರ ಕೊಡಲಿಲ್ಲ. ಆದರೂ ಹೊಳೆಬೈಲಿನ ಗ್ರಾಮಸ್ಥರು ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿ ಶೌಚಾಲಯ ನಿರ್ಮಿಸಿಕೊಡುವ […]