ಸಮಾನತೆ ಮತ್ತು ಒಳಗೊಳ್ಳುವಿಕೆಯತ್ತ ಮಹತ್ವದ ಹೆಜ್ಜೆ: ಮಾಹೆ ಮತ್ತು ಸ್ಪೆಷಲ್ ಒಲಿಂಪಿಕ್ಸ್ ಭಾರತ್ ನಡುವೆ ಒಪ್ಪಂದಕ್ಕೆ ಸಹಿ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯು ಇತ್ತೀಚೆಗೆ ‘ಸ್ಪೆಷಲ್ ಒಲಿಂಪಿಕ್ಸ್ ಭಾರತ್’ ಸಂಸ್ಥೆಯೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಎಲ್ಲರನ್ನೂ ಸಮಾನವಾಗಿ ಕಾಣುವ, ಪರಸ್ಪರ ಸಹಕಾರ ಮತ್ತು ಸಾಮಾಜಿಕ ಸುಧಾರಣೆಯತ್ತ ಇಟ್ಟಿರುವ ಒಂದು ಮಹತ್ವದ ಹೆಜ್ಜೆ ಇದಾಗಿದೆ. ಶಿಕ್ಷಣ ಮತ್ತು ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ವಿಶೇಷ ಚೇತನರನ್ನು ಸಬಲೀಕರಿಸಲು ಈ ಒಪ್ಪಂದ ಸಹಕಾರಿಯಾಗಿದೆ. ಸಮಾಜದಲ್ಲಿ ಅವರಿಗೆ ಸಮಾನ ಸ್ಥಾನಮಾನ ಮತ್ತು ಗೌರವ ಸಿಗುವಂತೆ ಮಾಡುವಲ್ಲಿ ಹಾಗೂ […]
ನಿಮ್ಮ ಮಕ್ಕಳನ್ನು ಲೆಕ್ಕದಲ್ಲಿ ಪಕ್ಕಾ ಕ್ರಿಯೇಟಿವ್ ಮಾಡುತ್ತೆ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಮೇ 11 ರಿಂದ ಶುರುವಾಗುವ ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಗಣಿತ ಕೌಶಲ್ಯ ಪಡೀರಿ

ಉಡುಪಿ: ಮಕ್ಕಳಲ್ಲಿ ಗಣಿತದ ಮೇಲಿನ ಆಸಕ್ತಿ ಹೆಚ್ಚಿಸಿ, ಅವರಿಗೆ ಪಾಠಗಳನ್ನು ಸುಲಭವಾಗಿ ಕಲಿಸುವ ಉದ್ದೇಶದಿಂದ ಮಣಿಪಾಲದ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್ ವತಿಯಿಂದ ವಿಶೇಷ “ಟೇಬಲ್ಸ್ ವರ್ಕ್ಶಾಪ್” ನ್ನು ಮೇ 11 ರಿಂದ ಆಯೋಜಿಸಲಾಗಿದೆ. ಈ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ 99 ರವರೆಗಿನ ಟೇಬಲ್ಸ್ ಗಳನ್ನು ಮನರಂಜನಾತ್ಮಕವಾಗಿ ಹಾಗೂ ಸುಲಭ ವಿಧಾನಗಳ ಮೂಲಕ ಕಲಿಸಲಾಗುತ್ತದೆ. ಜೊತೆಗೆ ಪಾಠಗಳನ್ನು ಅವರಿಗೆ ಖುಷಿ ಕೊಡುವ ಚಟುವಟಿಕೆಗಳನ್ನು, ಕ್ವಿಜ್ ಹಾಗೂ ಗೇಮ್ಸ್ಗಳ ಮೂಲಕವೂ ಕ್ರಿಯಾಶೀಲವಾಗಿ ಹೇಳಿಕೊಡಲಾಗುತ್ತದೆ. ಒಟ್ಟಾರೆಯಾಗಿ ಮಕ್ಕಳಲ್ಲಿ ಗಣಿತ ಕೌಶಲ್ಯವನ್ನು ವೃದ್ಧಿಸುವ […]
ಕ್ರೈಸ್ಟ್ ಕಿಂಗ್: ಸಹನ್ ಕುಮಾರ್’ಗೆ ರಾಷ್ಟ್ರ ಮಟ್ಟದ ಜೆಇಇ ಮೈನ್ ಬಿ. ಆರ್ಕ್’ನಲ್ಲಿ 667 ಮತ್ತು ಬಿ. ಪ್ಲ್ಯಾನಿಂಗ್ ನಲ್ಲಿ 439ನೇ ರ್ಯಾಂಕ್

ಕಾರ್ಕಳ: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ರಾಷ್ಟ್ರಮಟ್ಟದ ಜೆಇಇ ಮೈನ್ – 2026ರ ಪರೀಕ್ಷೆಯಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್. ಸಹನ್ ಕುಮಾರ್ ಒಬಿಸಿ ಎನ್ಸಿಎಲ್ ಕ್ಯಾಟಗರಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಬಿ.ಆರ್ಕ್’ನಲ್ಲಿ 667 ನೇ ರ್ಯಾಂಕ್ ಹಾಗೂ ಬಿ. ಪ್ಲ್ಯಾನಿಂಗ್ ನಲ್ಲಿ 439ನೇ ರ್ಯಾಂಕ್ ಪಡೆದಿದ್ದಾನೆ.
ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಇದೀಗ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹೌದು ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. 3 ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ (ಮೇ 7) ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಹಿರಿಯ ಪೊಲೀಸ್ ಅಧಿಕಾರಿಗಳಾದ ಸಂದೀಪ್ ಪಾಟೀಲ್, […]
ಇಲ್ಲಿದೆ ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದರ ಹಿಂದಿನ ಅರ್ಥ!

ಹಿಂದೂ ಧರ್ಮ ಮತ್ತು ಭಾರತೀಯ ಸಂಪ್ರದಾಯದಲ್ಲಿ ವಿವಾಹವು ಕೇವಲ ಒಂದು ಸಾಮಾಜಿಕ ಕಾರ್ಯಕ್ರಮವಲ್ಲ, ಅದು ಪವಿತ್ರ ಸಂಸ್ಕಾರವೆಂದು ಪರಿಗಣಿಸಲಾಗುತ್ತದೆ. ಮದುವೆಯ ಸಂದರ್ಭದಲ್ಲಿ ವರ ವಧುವಿನ ಕೊರಳಿಗೆ ತಾಳಿ ಅಥವಾ ಮಾಂಗಲ್ಯಸೂತ್ರ ಕಟ್ಟುವ ಕ್ಷಣ ಅತ್ಯಂತ ಮಹತ್ವದ್ದಾಗಿದೆ. ಈ ತಾಳಿ ದಾಂಪತ್ಯ ಜೀವನದ ಶಾಶ್ವತ ಬಾಂಧವ್ಯದ ಪ್ರತೀಕವೆಂದು ನಂಬಲಾಗುತ್ತದೆ. ಆದರೆ ತಾಳಿ ಕಟ್ಟುವಾಗ ಸಾಮಾನ್ಯವಾಗಿ ಮೂರು ಗಂಟುಗಳನ್ನು ಹಾಕುವ ಸಂಪ್ರದಾಯದ ಹಿಂದೆ ಏನು ಅರ್ಥ ಇದೆ ಎಂಬುದನ್ನು ಅನೇಕರು ತಿಳಿದಿರಲಾರರು. ಹಿಂದೂ ಶಾಸ್ತ್ರಗಳ ಪ್ರಕಾರ ಈ ಮೂರು ಗಂಟುಗಳಿಗೆ […]