ಮೂಡ್ಲಕಟ್ಟೆಯ ಐ ಎಂ ಜೆ ಕ್ವಾಂಟಮ್ ತಂತ್ರಜ್ಞಾನ ಸಂಶೋಧನಾ ಸಂಸ್ಥೆಗೆ ಸಚಿವರ ಭೇಟಿ

ಕುಂದಾಪುರ: ಕರ್ನಾಟಕ ಸರಕಾರದಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಮಾನ್ಯ ಶ್ರೀ ಎನ್. ಎಸ್. ಬೋಸರಾಜು ಅವರು 2026 ಮೇ 13ರಂದು ಐ ಎಂ ಜೆ ಸಂಶೋಧನಾ ಸಂಸ್ಥೆಯಲ್ಲಿರುವ ಕ್ವಾಂಟಮ್ ಕಂಪ್ಯೂಟಿಂಗ್ ಪ್ರಯೋಗಾಲಯ, ಡೆಲ್ಟಾ-Q ಗೆ ಭೇಟಿ ನೀಡಿದರು. ಭೇಟಿ ವೇಳೆ ಮಾನ್ಯ ಸಚಿವರು ಸಂಸ್ಥೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಅಯಾನ್-ಟ್ರ್ಯಾಪ್ ಆಧಾರಿತ 16-ಕ್ವಿಬಿಟ್ ಕ್ವಾಂಟಮ್ ಪ್ರೊಸೆಸರ್ನ ಪ್ರಾಯೋಗಿಕ ವ್ಯವಸ್ಥೆಯನ್ನು ವೀಕ್ಷಿಸಿದರು. ಮಾನ್ಯ ಸಚಿವರು ಸಂಸ್ಥೆಯ ಸಂಶೋಧನಾ ದೃಷ್ಟಿಕೋನ ಮತ್ತು ನಡೆಯುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು. ಗ್ರಾಮೀಣ ಕರ್ನಾಟಕದಲ್ಲಿ ಇಂತಹ […]
“ಒಂದೇ ದಿನದ ಅಂತರದಲ್ಲಿ ‘ಹಿಟ್ಲರ್ ಕಲ್ಯಾಣ’ದ ಇಬ್ಬರು ನಟರು ಹೃದಯಾಘಾತಕ್ಕೆ ಬಲಿ!”

ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಇಬ್ಬರು ನಟರು ಒಂದೇ ದಿನದ ಅಂತರದಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವುದು ಅಭಿಮಾನಿಗಳಿಗೆ ಶಾಕ್ ನೀಡಿದೆ. ವರ್ಷಗಳ ಹಿಂದೆ ರಾಕೇಶ್ ಪೂಜಾರಿ, ಇದೀಗ ದಿಲೀಪ್ ರಾಜ್ ಅಕಾಲಿಕವಾಗಿ ಮರಣವನ್ನಪ್ಪಿದ್ದಾರೆ.ದಿಲೀಪ್ ರಾಜ್ ನಿಧನಕನ್ನಡ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಗುರುತಿಸಿಕೊಂಡ ಪ್ರತಿಭಾನ್ವಿತ ನಟ, ನಿರ್ದೇಶಕ, ನಿರ್ಮಾಪಕ ದಿಲೀಪ್ ರಾಜ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಝೀ ಕನ್ನಡದ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಇವರು ನಾಯಕರಾಗಿ ನಟಿಸಿದ್ದರು. ಕಳೆದ ವರ್ಷ ಇದೇ ಸಮಯದಲ್ಲಿ ಧಾರಾವಾಹಿಯ ಹಾಸ್ಯ ಕಲಾವಿದ […]
ಉಡುಪಿ: ಕಾಂಗ್ರೆಸ್ ಮುಖಂಡರು ಪ್ರಧಾನಿ ಹೇಳಿಕೆಯನ್ನು ಅರ್ಥೈಸಿಕೊಳ್ಳಲು ಆಗದಷ್ಟು ದುರ್ಬಲರಾಗಿದ್ದಾರೆ- ಸಂಸದ ಕೋಟ

ಉಡುಪಿ: ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರು ಚಿನ್ನ ಖರೀದಿ ಮಾಡಬೇಡಿ ಎಂದು ಭಾರತೀಯರಲ್ಲಿ ಮನವಿ ಮಾಡಿದ್ದು ಸಾಕಷ್ಟು ಚರ್ಚೆಗೆ ಈಡಾಗಿತ್ತು. ಈ ಸಂಬಂಧ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಧಾನಿ ಮೋದಿಯವರು ಚಿನ್ನ ಖರೀದಿಯನ್ನು ಸ್ವಲ್ಪ ಕಡಿಮೆ ಪ್ರಮಾಣದಲ್ಲಿ ಮಾಡಿ, ಅವಶ್ಯಕತೆಗೆ ತಕ್ಕಂತೆ ಖರೀದಿ ಮಾಡಿ ಎಂದು ಕರೆ ಕೊಟ್ಟಿದ್ದಾರೆ. ಇದಕ್ಕೆ ಬೇರೆ ಕಾರಣ ಇಲ್ಲ. ದೇಶದ ಹಿತದೃಷ್ಟಿಯಿಂದ ಈ ಕರೆಯನ್ನು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಅದೇ ರೀತಿ ಎಲೆಕ್ಟ್ರಿಕ್ […]
ನಾಲ್ಕೈದು ತಿಂಗಳಲ್ಲಿ ಉಡುಪಿ ವಿಜ್ಞಾನ ಕೇಂದ್ರ ಪೂರ್ಣ- ಸಚಿವ ಭೋಸರಾಜು

ಉಡುಪಿ: ಉಡುಪಿ ತಾಲೂಕಿನ ಅಲೆವೂರು ಗ್ರಾಪಂ ವ್ಯಾಪ್ತಿಯ ಪ್ರಗತಿ ನಗರದ ಐದು ಎಕರೆ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಉಡುಪಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಯು ಮುಂದಿನ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದ್ದಾರೆ. ಮಣಿಪಾಲ ಪ್ರಗತಿನಗರದಲ್ಲಿ ನಿರ್ಮಾಣವಾಗುತ್ತಿರುವ ಉಡುಪಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡು ವರ್ಷಗಳ ಹಿಂದೆ ಕೇಂದ್ರ ಮಂಜೂರಾಗಿದ್ದು, ಜಾಗದ ವಿವಾದ ದಿಂದ […]
ಮೇ 14 ರಿಂದ 17 ರ ವರೆಗೆ ಉಡುಪಿ ದೊಡ್ಡಣಗುಡ್ಡೆಯಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳ

ಉಡುಪಿ: ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘ, (ರಿ), ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ ಇವರ ವತಿಯಿಂದ ಮೇ 14 ರಿಂದ 17 ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿರುತ್ತದೆ.ಮಾವು ಮೇಳ-2026 ರ ಉದ್ಘಾಟನಾ ಸಮಾರಂಭವು ಮೇ 14 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ […]