ಮುರ್ಡೇಶ್ವರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಮಾರ್ಗದಲ್ಲಿ ಬದಲಾವಣೆ

ಉಡುಪಿ: ನೈರುತ್ಯ ರೈಲ್ವೇ ವತಿಯಿಂದ ಕೆ.ಎಸ್.ಆರ್. ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ KSR Bengaluru Railway Station ನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಿನ್ನೆಲೆ, ಮುರ್ಡೇಶ್ವರ ಹಾಗೂ ಬೆಂಗಳೂರು ನಡುವೆ ಸಂಚರಿಸುವ ರೈಲು ಸಂಖ್ಯೆ 16586 ಎಕ್ಸ್ಪ್ರೆಸ್ ರೈಲಿನ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ಕೊಂಕಣ್ ರೈಲ್ವೇ Konkan Railway ಪ್ರಕಟಣೆ ತಿಳಿಸಿದೆ. ಮುಂದಿನ ಜುಲೈ 16 ಮತ್ತು 17ರಂದು ಸಂಚರಿಸುವ ಮುರ್ಡೇಶ್ವರ-ಬೆಂಗಳೂರು ಎಕ್ಸ್ಪ್ರೆಸ್ ರೈಲು ಕೆ.ಎಸ್.ಆರ್. ಬೆಂಗಳೂರು, ಯಶವಂತಪುರ, ಹೆಬ್ಬಾಳ ಹಾಗೂ ಬಾಣಸವಾಡಿ ಮೂಲಕ ಸಂಚರಿಸಲಿದೆ. […]
ಪೆಟ್ರೊಲ್, ಡೀಸೆಲ್ ಬಳಿಕ ಇದೀಗ CNG ದರ ಕೂಡ ಏರಿಕೆ, ಆಟೋ, ಕ್ಯಾಬ್, ದರದಲ್ಲೂ ಹೆಚ್ಚಳ ಸಾಧ್ಯತೆ!

ದೇಶದಲ್ಲಿ ಇಂಧನ ದರ ಏರಿಕೆಯ ನಡುವೆಯೇ ಇದೀಗ CNG (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ದರವೂ ಹೆಚ್ಚಳ ಕಂಡಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಎದುರಾಗಿದೆ. ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯ ಅಸ್ಥಿರತೆ ಹಾಗೂ ಹೋರ್ಮುಜ್ ಜಲಸಂಧಿ ಬಿಕ್ಕಟ್ಟಿನ ಪರಿಣಾಮವಾಗಿ CNG ದರವನ್ನು ಪ್ರತಿ ಕಿಲೋಗ್ರಾಂಗೆ ಸುಮಾರು ₹2ರವರೆಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇತ್ತೀಚೆಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡಿದ್ದರೆ, ಇದೀಗ CNG ದರ ಏರಿಕೆಯೂ ಸಾರಿಗೆ ಕ್ಷೇತ್ರದ ಮೇಲೆ ಪರಿಣಾಮ ಬೀರುವ […]
ಜನತೆಗೆ ಮತ್ತೊಂದು ಶಾಕ್, ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ

ರಾಜ್ಯದಲ್ಲಿ ಇಂಧನ ದರ ಏರಿಕೆಯ ಪರಿಣಾಮ ಇದೀಗ ಬಸ್ ಪ್ರಯಾಣ ದರದ ಮೇಲೂ ನೇರವಾಗಿ ಬಿದ್ದಿದೆ. ಡೀಸೆಲ್ ಬೆಲೆ ಲೀಟರ್ಗೆ 3 ರೂಪಾಯಿ ಹೆಚ್ಚಳವಾಗಿರುವುದರಿಂದ ಖಾಸಗಿ ಬಸ್ ಮಾಲೀಕರಿಗೆ ದಿನನಿತ್ಯ ಹೆಚ್ಚುವರಿ ವೆಚ್ಚದ ಭಾರ ಎದುರಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮಾ, “ಪ್ರತಿದಿನ ಒಂದು ಬಸ್ಗೆ ಕನಿಷ್ಠ 150 ಲೀಟರ್ ಡೀಸೆಲ್ ಅಗತ್ಯವಿರುತ್ತದೆ. ಬೆಲೆ ಏರಿಕೆಯಿಂದ ದಿನಕ್ಕೆ ಸುಮಾರು 450 ರೂಪಾಯಿ ಹೆಚ್ಚುವರಿ ಖರ್ಚಾಗುತ್ತಿದೆ. ಈ […]
ಸುಪ್ರಿಂ ಕೋರ್ಟ್ ಮಹತ್ವದ ಆದೇಶ, ನಟ ದರ್ಶನ್ ಗೆ ಜಾಮೀನು ನಿರಾಕರಣೆ, ಪರಪ್ಪನ ಅಗ್ರಹಾರವೇ ಗತಿ

ಬೆಂಗಳೂರು: ದರ್ಶನ್ ವಿರುದ್ಧದ ರೇಣುಕಾ ಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ನಟ ದರ್ಶನ್ ಅವರಿಗೆ ಜಾಮೀನು ನಿರಾಕರಿಸಿದೆ. ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠ, ಪ್ರಕರಣದ ವಿಚಾರಣೆಯನ್ನು ವೇಗವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ. “ಒಂದು ವರ್ಷದೊಳಗೆ ವಿಚಾರಣೆ ಪೂರ್ಣಗೊಳಿಸಬೇಕು. ನಿಗದಿತ ಅವಧಿಯೊಳಗೆ ಟ್ರಯಲ್ ಮುಗಿಯದಿದ್ದರೆ ಜಾಮೀನು ಪರಿಗಣಿಸಲಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಕಳೆದ ಏಳು ತಿಂಗಳಲ್ಲಿ ಕೇವಲ 10 ಮಂದಿಯ […]
Petrol Diesel Price: ಚುನಾವಣೆ ನಂತರ ಜನರ ಜೇಬಿಗೆ ಕತ್ತರಿ? ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಇಷ್ಟೊಂದು ಏರಿಕೆ ಬಗ್ಗೆ ಕೋಟಕ್ ಈಕ್ವಿಟೀಸ್ ಭವಿಷ್ಯ!

ಮಧ್ಯಪ್ರಾಚ್ಯದ ಯುದ್ಧ ದೇಶದ ಮೇಲೆ ಭಾರೀ ಎಫೆಕ್ಟ್ ಆಗುತ್ತಿದೆ. ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತೀವ್ರವಾಗಿ ಏರಬಹುದು ಎಂಬ ಎಚ್ಚರಿಕೆ ಹೊರಬಿದ್ದಿದೆ. ಕೋಟಕ್ ಇನ್ಸ್ಟಿಟ್ಯೂಷನಲ್ ಈಕ್ವಿಟೀಸ್ ಪೆಟ್ರೋಲ್ ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ.ಭಾರತದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ತೀವ್ರವಾಗಿ ಏರಬಹುದು ಎಂಬ ಎಚ್ಚರಿಕೆ ಹೊರಬಿದ್ದಿದೆ. ಕಚ್ಚಾ ತೈಲದ ಜಾಗತಿಕ ಬೆಲೆಗಳು ಹೆಚ್ಚುತ್ತಿರುವುದರಿಂದ ಭಾರತದಲ್ಲಿ ತೈಲ ಸಂಸ್ಕರಣಾಗಾರಗಳ ಮೇಲೆ ದೊಡ್ಡ ಒತ್ತಡ ನಿರ್ಮಾಣವಾಗಿದೆ. […]