ಮೇ 30ರಂದು ಸುಶಾನ್ ಟ್ರಸ್ಟ್ ನಿಂದ ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ, ಬಹುಮಾನ ವಿತರಣೆ ಕಾರ್ಯಕ್ರಮ

ಉಡುಪಿ: ಪರಿಸರ ಸಂರಕ್ಷಣೆಯ ಉದ್ದೇಶದಿಂದ ಸ್ಥಾಪಿಸಿರುವ ಸುಶಾನ್ ಟ್ರಸ್ಟ್ ಕೊಡ್ಲಾಡಿ ಇದರ ವತಿಯಿಂದ ಕಿರುಚಿತ್ರ ಬಿಡುಗಡೆ, ವಿಚಾರಗೋಷ್ಠಿ ಹಾಗು ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಮೇ 30 ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ನ ಸಂಚಾಲಕ ಕಿರಣ್ ಶೆಟ್ಟಿ ಕೊಡ್ಲಾಡಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದಾರೆ. […]
ಮಣಿಪಾಲ ಶ್ರೀ ಶಾರದಾ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’ನಲ್ಲಿ ಗರಿಷ್ಠ ಉದ್ಯೋಗ ಭರ್ತಿಯ ಸಾಧನೆ

ಮಣಿಪಾಲ: ಕಳೆದ 14 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದಾ ಟ್ರೈನಿಂಗ್ ಇನ್ಸ್ಟಿಟ್ಯೂಟ್, ಮಣಿಪಾಲ, ೨೦೨೫-೨೬ ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಉದ್ಯೋಗ ಲಭಿಸಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು, ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರವನ್ನು ನೀಡುತ್ತದೆ. ಈ ಕೋರ್ಸಿಗೆ ಪ್ರವೇಶಾತಿ (2026-27)ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು […]
ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ –1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ವರ್ಗದ ಪಿ.ಯು.ಸಿ ಸಮಾನಾಂತರ ಡಿಪ್ಲೋಮಾ, ಐ,.ಟಿ.ಐ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwdನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 […]
ಮಣಿಪಾಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

ಉಡುಪಿ: ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಮಣಿಪಾಲದಲ್ಲಿ ಸಾವಿರಾರು ಕಾರ್ಮಿಕರು ಭಾರಿ ಪ್ರತಿಭಟನೆ ನಡೆಸಿದರು. ಮಣಿಪಾಲದ ಟೈಗರ್ ಸರ್ಕಲ್ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಎಸಿ ಮೂಲಕ ರಾಜ್ಯದ […]
ಕುಕ್ಕುಂದೂರು ನಕ್ರೆ ಪೊಸನೊಟ್ಟು ರಸ್ತೆ ಕಾಮಗಾರಿಗೆ ವಿ ಸುನಿಲ್ ಕುಮಾರ್ ರವರಿಂದ ಚಾಲನೆ.

ಕಾರ್ಕಳ: ಕುಕ್ಕುಂದೂರು ಗ್ರಾಮದ ಆನಂದಿ ಮೈದಾನ ನಕ್ರೆ ಪೊಸನಟ್ಟು ಸಂಪರ್ಕ ರಸ್ತೆ ದುರಸ್ತಿಯ ಬಗ್ಗೆ ಸ್ಥಳೀಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್ ರವರು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 70ಲಕ್ಷ ರೂಪಾಯಿ ಅನುದಾನವನ್ನು ಒದಗಿಸಿ ಮೇ 27 ರಂದು ನಮನಪುರ ಪೊಸನೊಟ್ಟು ಕ್ರಾಸ್ ಬಳಿ ಗುದ್ದಲಿ ಪೂಜೆ ನೆರವೇರಿಸಿ ಕಾಯಿ ಒಡೆದು ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಜ್ಯೋತಿ ನಗರ ಕೊಂಡೇನಾಕ್ಯಾರು ಗುಳಿಗ ಸ್ಥಾನ ರಸ್ತೆ ಕಾಮಗಾರಿಗೆ […]