ನಾಳೆ ಶಾಸಕಾಂಗ ಪಕ್ಷದ ಸಭೆ, ಸೋಮವಾರವೇ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ?

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ. ಹೊಸ ಮುಖ್ಯಮಂತ್ರಿ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಶನಿವಾರ (ಮೇ 30) ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ಹೊಸ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ನಡೆಯಲಿದ್ದು, ಬಳಿಕ ಸರ್ಕಾರ ರಚನೆ ಹಕ್ಕು ಮಂಡನೆ ಪ್ರಕ್ರಿಯೆ ನಡೆಯಲಿದೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್ […]

ಭಾರತದ ಮಾವಿಗೆ ಜಪಾನ್ ನಿಂದ ಹೊಡೆತ: ಜಪಾನ್‌ ನಲ್ಲಿ ಭಾರತೀಯ ಮಾವಿಗೆ ನಿರ್ಬಂಧ, ಕಾರಣ ಏನು?

ನವದೆಹಲಿ: ದೇಶದ ಮಾವು ಬೆಳೆಗಾರರಿಗೆ ಹಾಗೂ ರಫ್ತುದಾರರಿಗೆ ದೊಡ್ಡ ಆಘಾತ ಎದುರಾಗಿದೆ. ಸುಮಾರು 20 ವರ್ಷಗಳ ಬಳಿಕ ಮೊದಲ ಬಾರಿಗೆ Japan ಸರ್ಕಾರವು ಭಾರತದ ಮಾವಿನ ಹಣ್ಣಿನ ಆಮದು ಮೇಲೆ ನಿರ್ಬಂಧ ಹೇರಿದೆ. ಈ ವರ್ಷದ ಆರಂಭದಲ್ಲಿ ಭಾರತೀಯ ಸಂಸ್ಕರಣಾ ಘಟಕಗಳಲ್ಲಿ ಕೀಟ ನಿಯಂತ್ರಣ ಕ್ರಮಗಳಲ್ಲಿ ದೋಷಗಳು ಪತ್ತೆಯಾಗಿದ್ದ ಹಿನ್ನೆಲೆ, ಭಾರತದಿಂದ ಮಾವಿನ ಹಣ್ಣುಗಳ ಆಮದುಗಳನ್ನು ಜಪಾನ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದರಿಂದ ಬೇಸಿಗೆ ಕಾಲದ ಪ್ರಮುಖ ರಫ್ತು ಹಂಗಾಮಿಗೆ ತೀವ್ರ ಹೊಡೆತ ಬಿದ್ದಿದೆ. ಅಲ್ಫೋನ್ಸೊ, ಕೇಸರ್, ಲಂಗ್ರಾ […]

ಒಂದೇ ವಾಕ್ಯದಲ್ಲಿ ರಾಜೀನಾಮೆ ಪತ್ರ ಬರೆದಿದ್ದ ಸಿದ್ದರಾಮಯ್ಯ! ಸದ್ದು ಮಾಡಿದ ಸಿದ್ದು ರಾಜೀನಾಮೆ ಪತ್ರ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ Thaawarchand Gehlot ಅವರು ರಾಜೀನಾಮೆಯನ್ನು ಅಂಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವೂ ವಿಸರ್ಜನೆಯಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಸಲ್ಲಿಸಿದ ಪತ್ರ ಇದೀಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ ರಾಜೀನಾಮೆ ಪತ್ರಗಳಲ್ಲಿ ಕಾರಣಗಳು, ಸರ್ಕಾರದ […]

ಧರ್ಮಸ್ಥಳ: ವೃದ್ಧೆಗೆ ಲಡ್ಡು–ಜ್ಯೂಸ್ ನೀಡಿ ವಂಚನೆ; ಚಿನ್ನಾಭರಣದೊಂದಿಗೆ ಪರಾರಿ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಯೊಬ್ಬರಿಗೆ ಲಡ್ಡು ಪ್ರಸಾದ ಮತ್ತು ಜ್ಯೂಸ್ ನೀಡಿ ಅಸ್ವಸ್ಥಳನ್ನಾಗಿಸಿ ಸುಮಾರು ₹10 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆ Dharmasthala Police Station ನಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿ ಪ್ರೇಮಾ ಕೆ. (70) ಅವರು ಮೇ 23ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ಸಂಬಂಧಿಕರ ಮನೆಗೆ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಳಿಕ ಮೇ 25ರಂದು ಶ್ರೀ ಕ್ಷೇತ್ರ […]

ಬೆಳುವಾಯಿ–ಕಾಂತಾವರ ಮಾರ್ಗದಲ್ಲಿ ಗೊಂದಲ; ಬಸ್–ಕಾರು ಮುಖಾಮುಖಿ

ಮೂಡಬಿದಿರೆ: ಸಮೀಪದ ಕಾಂತಾವರ ಕ್ರಾಸ್‌ನಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಯು-ಟರ್ನ್ ತಾತ್ಕಾಲಿಕವಾಗಿ ಬಂದ್ ಮಾಡಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಏಕಾಏಕಿ ಬದಲಾವಣೆ ಉಂಟಾಗಿ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು. ವಿಶೇಷವಾಗಿ ಕಾಂತಾವರದಿಂದ ಬೆಳುವಾಯಿ ಕಡೆಗೆ ಸಾಗುವ ವಾಹನ ಸವಾರರು ಈಗ ಚಿಲಿಂಬಿವರೆಗೆ ತೆರಳಿ ಯು-ಟರ್ನ್ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸ್ಥಳೀಯ […]