ನಾಳೆಯಿಂದ ಶಾಲೆ ಶುರು, ಹಬ್ಬದ ವಾತಾವರಣದಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಬೇಸಿಗೆ ರಜೆ ಮುಗಿದ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ನಾಳೆಯಿಂದ (ಜೂನ್ 1) 2026-27ನೇ ಶೈಕ್ಷಣಿಕ ವರ್ಷದ ತರಗತಿಗಳು ಪುನರಾರಂಭವಾಗಲಿವೆ. ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ವಿಶೇಷವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಶಾಲೆಗಳಿಗೆ ಸೂಚನೆ ನೀಡಿದೆ. ಅದರಂತೆ ಶಾಲಾ ಆವರಣವನ್ನು ತಳಿರು-ತೋರಣ, ಹೂವುಗಳು ಹಾಗೂ ಆಕರ್ಷಕ ಅಲಂಕಾರಗಳಿಂದ ಸಿಂಗಾರ ಮಾಡಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಬೇಕು ಎಂದು ತಿಳಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಶಾಲೆಯ ಬಗ್ಗೆ ಉತ್ಸಾಹ ಮತ್ತು ಸಂತಸ ಮೂಡಿಸುವ ಉದ್ದೇಶದಿಂದ ಹಬ್ಬದ ಸಡಗರದ ವಾತಾವರಣವನ್ನು ನಿರ್ಮಿಸಲು […]

ಗಂಡನಿಲ್ಲದ ವೇಳೆ ಪ್ರೀತಿಸಿದ ಪ್ರಿಯಕರನ ಜೊತೆಗೆ ರೊಮ್ಯಾನ್ಸ್, ಆಮೇಲೇನಾಯ್ತು? ಈ ಚಿತ್ರದ ಕ್ಲೈಮ್ಯಾಕ್ಸ್ ಸಖತ್!

ಒಟಿಟಿ ವೇದಿಕೆಗಳಲ್ಲಿ ಥ್ರಿಲ್ಲರ್ ಸಿನಿಮಾಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ಸಾಲಿನಲ್ಲಿ ಮಲಯಾಳಂ ಭಾಷೆಯ Udal ಸಿನಿಮಾ ಗಮನ ಸೆಳೆಯುತ್ತಿದೆ. ರೋಚಕ ಕಥಾಹಂದರ ಹಾಗೂ ಅನಿರೀಕ್ಷಿತ ತಿರುವುಗಳಿಂದ ಕೂಡಿರುವ ಈ ಚಿತ್ರ ಥ್ರಿಲ್ಲರ್ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ಕುಟುಂಬದ ಒಳಗಿನ ಸಂಘರ್ಷ, ದ್ವೇಷ ಮತ್ತು ಸೇಡಿನ ಸುತ್ತ ಹೆಣೆದಿರುವ ಕಥೆಯಲ್ಲಿ ಒಬ್ಬ ಮಹಿಳೆ ತನ್ನ ವೈಯಕ್ತಿಕ ಜೀವನದ ಸಂಕೀರ್ಣತೆಗಳ ನಡುವೆ ಸಿಲುಕಿಕೊಳ್ಳುತ್ತಾಳೆ. ಪರಿಸ್ಥಿತಿಗಳು ತೀವ್ರ ಸ್ವರೂಪ ಪಡೆದು ಒಂದು ಕೊಲೆ ನಡೆಯುತ್ತದೆ. ಬಳಿಕ ನಡೆಯುವ ಘಟನೆಗಳು […]

ಆಳ್ವಾಸ್‌ನಲ್ಲಿ ಪದವಿ ಪ್ರದಾನ ಸಮಾರಂಭ; ಪದವಿ ಪ್ರಮಾಣಪತ್ರಕ್ಕಿಂತ ಅದರ ಹಿಂದಿರುವ ಮೌಲ್ಯಗಳು ಶ್ರೇಷ್ಠ: ಡಾ. ಚಿನ್ನಪ್ಪ ಗೌಡ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಶನಿವಾರ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ಆಯೋಜಿಸಲಾದ ಪದವಿ ಪ್ರದಾನ ಸಮಾರಂಭದಲ್ಲಿ  ಆಳ್ವಾಸ್‌ನ ವಿವಿಧ ಶಿಕ್ಷಣ ಸಂಸ್ಥೆಗಳ 2,627 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕರ‍್ಯಕ್ರಮ ನಡೆಯಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ ಪದವೀಧರರನ್ನು ಉದ್ದೇಶಿಸಿ ಮಾತನಾಡಿ, ಶಿಕ್ಷಣದ ನಿಜವಾದ ಉದ್ದೇಶವು ಕೇವಲ ಪದವಿ ಪಡೆಯುವುದಲ್ಲ, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಾಗಿದೆ. ಪದವಿ ಪ್ರಮಾಣಪತ್ರವು ಕೇವಲ ಒಂದು ಕಾಗದದ ತುಣುಕಾಗಿದ್ದು, ಅದಕ್ಕೆ […]

ಇನ್ನು ಭಾರತದಲ್ಲಿ ಹಾಲು ಇರುವ ಐಸ್ ಕ್ರೀಂಗಳನ್ನೇ ತಯಾರು ಮಾಡ್ತೇವೆ ಎಂದ ಕ್ವಾಲಿಟಿ ವಾಲ್ಸ್: ಹಾಗಾದ್ರೆ ಇಷ್ಟು ದಿನ ನಾವು ತಿಂದ ಐಸ್ ಕ್ರೀಂ ನಲ್ಲಿ ಏನಿತ್ತು?

ನವದೆಹಲಿ: ಜನಪ್ರಿಯ ಐಸ್‌ಕ್ರೀಮ್ ತಯಾರಿಕಾ ಸಂಸ್ಥೆ ಕ್ವಾಲಿಟಿ ವಾಲ್ಸ್ Kwality Wall’s ತನ್ನ ಎಲ್ಲಾ ಉತ್ಪನ್ನಗಳನ್ನು ಇನ್ನು ಮುಂದೆ ಸಂಪೂರ್ಣ ಹಾಲು ಆಧಾರಿತ ಐಸ್‌ಕ್ರೀಮ್‌ಗಳಾಗಿ ಮಾರಾಟ ಮಾಡುವುದಾಗಿ ಘೋಷಿಸಿದೆ. ಈ ಮೂಲಕ ಸಂಸ್ಥೆ ತನ್ನ “ಫ್ರೋಜನ್ ಡೆಸರ್ಟ್” ಮಾದರಿಯಿಂದ ಸಂಪೂರ್ಣವಾಗಿ ಹೊರಬಂದು ನೈಜ ಐಸ್‌ಕ್ರೀಮ್ ಉತ್ಪನ್ನಗಳತ್ತ ಹೆಜ್ಜೆ ಇಟ್ಟಿದೆ. ಈ ಹೇಳಿಕೆಯಿಂದ ಹಾಗಾದ್ರೆ ನಾವೆಲ್ಲಾ ಇಷ್ಟು ದಿನ ತಿಂದ ಐಸ್ ಕ್ರೀಂ ಗಳಲ್ಲಿ ಹಾಲಿನ ಅಂಶಗಳೇ ಇರಲಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಸಂಸ್ಥೆಯ ಜನಪ್ರಿಯ ಬ್ರ್ಯಾಂಡ್‌ಗಳಾದ Magnum […]

ನಾಳೆಯಿಂದ ಬೆಂಗಳೂರು–ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ ಶುರು: ಪ್ರಯಾಣದ ಅವಧಿ 5 ಗಂಟೆ ಕಡಿಮೆಯಾಗುವ ನಿರೀಕ್ಷೆ

ಮಂಗಳೂರು: ಅಂತೂ ಇಂತೂ ಕರಾವಳಿ ಕರ್ನಾಟಕದ ಜನರ ಬಹುದಿನಗಳ ನಿರೀಕ್ಷೆಯಾಗಿದ್ದ ಬೆಂಗಳೂರು–ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಜೂನ್ 1ರಿಂದ ಪ್ರಾಯೋಗಿಕವಾಗಿ ಆರಂಭವಾಗಲಿದ್ದು, ಯಶಸ್ವಿ ಪರೀಕ್ಷೆಗಳ ಬಳಿಕ ವಾಣಿಜ್ಯ ಸಂಚಾರಕ್ಕೆ ಹಸಿರು ನಿಶಾನೆ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ ಶಿರಾಡಿ ಘಾಟ್ ಮಾರ್ಗದ ಮೂಲಕ ಬೆಂಗಳೂರು ಮತ್ತು ಮಂಗಳೂರು ನಡುವೆ ರಸ್ತೆ ಪ್ರಯಾಣಕ್ಕೆ 8ರಿಂದ 10 ಗಂಟೆಗಳವರೆಗೆ ಸಮಯ ಬೇಕಾಗುತ್ತದೆ. ಆದರೆ ವಂದೇ ಭಾರತ್ ರೈಲು ಸೇವೆ ಆರಂಭವಾದರೆ ಈ ಅವಧಿ ಸುಮಾರು 5 ಗಂಟೆಗಳಿಗೆ ಇಳಿಯುವ […]