ಕೇಂದ್ರ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯ

ಮಂಗಳೂರು: ಕೇಂದ್ರ ಸರ್ಕಾರದ ಬರ ಪರಿಹಾರ, ಬೆಳೆವಿಮೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ಸೌಲಭ್ಯಗಳನ್ನು ಪಡೆಯಲು ರಾಜ್ಯದ “ಫ್ರೂಟ್ಸ್” ಮಾದರಿಯಂತೆಯೇ ಕೇಂದ್ರ ಸರ್ಕಾರವು ‘ಕೇಂದ್ರ ರೈತ ಐಡಿ’ ವಿತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ. ಮಂಗಳೂರು ತಾಲೂಕಿನಲ್ಲಿ ಒಟ್ಟು ಎಫ್.ಐ.ಡಿ. ಹೊಂದಿರುವ 35,990 ರೈತರ ಪೈಕಿ ಇನ್ನು 14,520 ರೈತರು ನೋಂದಣಿಗೆ ಬಾಕಿ ಉಳಿದಿದ್ದಾರೆ. ರೈತರು ಮೊದಲು ಇ-ಕೆವೈಸಿ  ಮಾಡಿಸಿ, ಬಳಿಕ ವಿದ್ಯುನ್ಮಾನ ಸಹಮತಿ ಪತ್ರ ನೀಡುವುದು ಕಡ್ಡಾಯವಾಗಿದೆ. ಇದರ ನಂತರವಷ್ಟೇ ಕೇಂದ್ರದ ರೈತ ಐಡಿ ಸೃಜನೆಯಾಗುತ್ತದೆ. ಇನ್ನು ಕೆಲವೇ […]

ಮಂಗಳೂರು: ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಜೂನ್-2026ರ ಮಾಹೆಯಲ್ಲಿ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿಯನ್ನು ಏರ್ಪಡಿಸಲಾಗಿದೆ. ತರಬೇತಿ ವಿವರ: ರೈತರಿಗೆ ಹಂದಿ ಸಾಕಾಣಿಕೆ ತರಬೇತಿ ಜೂನ್ 16 ರಿಂದ 17 ರವರೆಗೆ  ಹಾಗೂ ಕುರಿ/ಮೇಕೆ ಸಾಕಾಣಿಕೆ ತರಬೇತಿ ಜೂನ್ 23 ರಿಂದ 24 ರವರೆಗೆ ನಡೆಯಲಿದೆ.  ಹೆಚ್ಚಿನ ಮಾಹಿತಿಗೆ ಆಸಕ್ತ ರೈತ ಬಾಂಧವರು  ಮಂಗಳೂರು ತಾಲೂಕು – 9243306956/ 0824-2950369, ಉಳ್ಳಾಲ ತಾಲೂಕು […]

ಜಮ್‌ಶೆಡ್‌ಪುರದ ಮಣಿಪಾಲ್ ಟಾಟಾ ವೈದ್ಯಕೀಯ ಕಾಲೇಜಿನ ಪ್ರಥಮ ಘಟಕೋತ್ಸವ ಸಂಭ್ರಮ: 133 ಯುವ ವೈದ್ಯರಿಗೆ ಪದವಿ ಪ್ರದಾನ

ಮಣಿಪಾಲ್: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ ಅಂಗಸಂಸ್ಥೆ, ಜಮ್‌ಷೆಡ್‌ಪುರದ ಮಣಿಪಾಲ್-ಟಾಟಾ ವೈದ್ಯಕೀಯ ಕಾಲೇಜು (ಎಂಟಿಎಂಸಿ), ಜಮ್‌ಷೆಡ್‌ಪುರದ ಬಾರಿಡಿಹ್ನಲ್ಲಿರುವ ಕ್ಯಾಂಪಸ್‌ನಲ್ಲಿ ತನ್ನ ಪ್ರಥಮ ಘಟಕೋತ್ಸವವನ್ನು ಇತ್ತೀಚೆಗೆ ಆಚರಿಸಿದ್ದು, ಮಾಹೆಯ 33ನೇ ಘಟಿಕೋತ್ಸವದ ಅಂಗವಾಗಿ ಈ ಸಮಾರಂಭ ನಡೆಯುತ್ತಿರುವುದು ಮಹತ್ವದ್ದಾಗಿದೆ. 2020-2021ರ ಶೈಕ್ಷಣಿಕ ಸಾಲಿನ 133 ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರಥಮ ಬ್ಯಾಚ್ ಯಶಸ್ವಿಯಾಗಿ ಪದವಿ ಪೂರೈಸಿದ್ದು, ಇದು ಈ ವೈದ್ಯಕೀಯ ಸಂಸ್ಥೆಗೆ ಅತ್ಯಂತ ಹೆಮ್ಮೆಯ ಹಾಗೂ ಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾಯಿತು. […]

ಕಾಮೆಡ್-ಕೆ ಫಲಿತಾಂಶ ಜ್ಞಾನಸುಧಾಕ್ಕೆ ಸಾವಿರದೊಳಗಿನ 9 ರ್ಯಾಂಕುಗಳು; ರಾಷ್ಟ್ರಮಟ್ಟದಲ್ಲಿ ಕನಿಷ್ಕ್‍ಗೆ 34ನೇ ರ್ಯಾಂಕ್

ಉಡುಪಿ: ಕರ್ನಾಟಕ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದಂತವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ) ಇಂಜಿನಿಯರಿಂಗ್ ಕೋರ್ಸ್‍ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳು ಸಾವಿರದೊಳಗೆ ರ್ಯಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ 1. ಕನಿಷ್ಕ್ ಎಸ್ ಅಮೀನ್ 34ನೇ ರ್ಯಾಂಕ್ (99.9720626ಪರ್ಸಂಟೈಲ್), 2. ವೈಷ್ಣವಿ ಕುಲಕರ್ಣಿ 111ನೇ ರ್ಯಾಂಕ್ (99.9057114ಪರ್ಸಂಟೈಲ್), 3. ನಿಶಾನ್ ಎನ್ ಸಾಲ್ಯಾನ್ 153ನೇ ರ್ಯಾಂಕ್ (99.8693924ಪರ್ಸಂಟೈಲ್), 4. ಎನ್. ಎಸ್. ವಿವೇಕ್ 292ನೇ ರ್ಯಾಂಕ್ […]

ಜೆಇಇ ಅಡ್ವಾನ್ಸ್ 2026: ಆಳ್ವಾಸ್ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ 2026 ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 17 ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಶ್ರೇಷ್ಠ ಸಾಧನೆ ಮೆರೆದು ಗಮನ ಸೆಳೆದಿದ್ದಾರೆ. ಜನರಲ್ ಹಾಗೂ ಕೆಟಗರಿ ವಿಭಾಗದ ಅಖಿಲ ಭಾರತ ಮಟ್ಟದಲ್ಲಿ ಸ್ವಾತಿ ತಲವಾರ್ (1513 ರ‍್ಯಾಂಕ್) ಹರ್ಷವರ್ಧನ್ ಕೆಪಿ(1698 ರ‍್ಯಾಂಕ್), ಮೆಲ್ರೋಯ್ ಕ್ಯಾಸ್ಟಲಿನೋ(1733 ರ‍್ಯಾಂಕ್), ಕೃತಿಕ್ ಬಿ(1795 ರ‍್ಯಾಂಕ್), ನೀಲಾಂಬಿಕ(2223 ರ‍್ಯಾಂಕ್), ಮಾನಸ ಕೆಎಸ್(2935 ರ‍್ಯಾಂಕ್), ಪಿಯೂಷ್ […]