ಸಕಾರಾತ್ಮಕ ಚಿಂತನೆ ಬದುಕು ರೂಪಿಸುವ ಮನೋಧರ್ಮ- ಡಾ. ಬಿ.ಎ. ವಿವೇಕ ರೈ

ಉಡುಪಿ: ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಕಲಾರಂಗದ ಐವೈಸಿ ಸಭಾಭವನದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಯುವಜನತೆ […]
ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಉಡುಪಿ ಕೋಸ್ಟಲ್ ಲೀಜನ್ನ ಪದಪ್ರದಾನ

ಉಡುಪಿ: ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ಉಡುಪಿ ಕೋಸ್ಟಲ್ ಲೀಜನ್ನ 2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಚಂದ್ರಶೇಖರ್ ಎಸ್.ವಿ., ಕಾರ್ಯದರ್ಶಿಯಾಗಿ ಸುನಂದಾ ಹಾಗೂ ಕೋಶಾಧಿಕಾರಿಯಾಗಿ ಮಮತಾ ಅಮೀನ್ ಪದಗ್ರಹಣ ಮಾಡಿದರು. ನಗರದ ಓಷನ್ ಪಾರ್ಲರ್ ಹೋಟೆಲ್ ಸಭಾಂಗಣದಲ್ಲಿ ನಡೆದ ಪದಪ್ರದಾನ ಸಮಾರಂಭವನ್ನು ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ನ ರಾಷ್ಟ್ರೀಯ ಅಧ್ಯಕ್ಷ ಎಂ.ಆರ್. ಜಯೇಶ್ ಉದ್ಘಾಟಿಸಿದರು. ಉಡುಪಿ ಕೋಸ್ಟಲ್ ಲೀಜನ್ನ ನಿರ್ಗಮಿತ ಅಧ್ಯಕ್ಷೆ ಝಿನಾತ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕ ಡಾ. ಜಯರಾಮ್ ಶೆಟ್ಟಿಗಾರ್ ದಿಕ್ಸೂಚಿ ಭಾಷಣ ಮಾಡಿದರು. ಸೀನಿಯರ್ ಛೇಂಬರ್ […]
ಜಿಮ್ ಹೋಗ್ಬೇಕು ಅಂತಿಲ್ಲ,ಮನೆಲೇ ಇಷ್ಟು ಮಾಡಿ ಸಾಕು, ನಿಮ್ಮ ದೇಹ ಫಿಟ್ ಆಗಿರತ್ತೆ!

ಫಿಟ್ ಆಗಿರಲು ಜಿಮ್ಗೆ ಹೋಗಿಯೇ ಗಂಟೆಗಟ್ಟಲೆ ಬೆವರು ಸುರಿಸಬೇಕು ಎನ್ನುವುದು ತಪ್ಪು ಕಲ್ಪನೆ. ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್ ಆಗಿ ಇಟ್ಟುಕೊಳ್ಳಲು ನಿಯಮಿತ ದೈಹಿಕ ಚಟುವಟಿಕೆ ಸಾಕು. ಮನೆಯಲ್ಲಿ ಅಥವಾ ಪಾರ್ಕ್ನಲ್ಲಿ ನಿಮ್ಮ ಅನುಕೂಲಕ್ಕೆ ತಕ್ಕ ಸಮಯದಲ್ಲಿ ದಿನವೂ ಸ್ವಲ್ಪ ಸಮಯ ವ್ಯಾಯಾಮ ಮಾಡಿದರೂ ಉತ್ತಮ ಫಲಿತಾಂಶ ಪಡೆಯಬಹುದು. ಜಿಮ್ಗೆ ಹೋಗುವುದಕ್ಕೆ ಸಮಯ ಮತ್ತು ಹಣ ಬೇಕಾಗುತ್ತದೆ. ಆದರೆ ಫಿಟ್ನೆಸ್ ಕಾಪಾಡಿಕೊಳ್ಳಲು ಅದೇ ಒಂದು ಮಾರ್ಗ ಅಲ್ಲ. ಸರಳ ವ್ಯಾಯಾಮ ಮಾಡಿ: ದೇಹದ ತೂಕ ಕಡಿಮೆ ಮಾಡಿಕೊಳ್ಳಲು […]
ಇನ್ನು5 ವರ್ಷಗಳಲ್ಲಿ ಭಾರತದಲ್ಲಿ ಪ್ಲಂಬರ್, ಎಲೆಕ್ಟ್ರೀಶನ್,ಬ್ಲೂ ಕಾಲರ್ ಉದ್ಯೋಗಿಗಳು ಸಿಗೋದೇ ಕಷ್ಟ: ತಜ್ಞರ ಅಧ್ಯಯನ ಬಿಚ್ಚಿಟ್ಟ ಸತ್ಯವೇನು?

ನವದೆಹಲಿ: ದೇಶದಲ್ಲಿ ಮುಂದಿನ ಐದು ವರ್ಷಗಳಲ್ಲಿ ಪ್ಲಂಬರ್ಗಳು, ಎಲೆಕ್ಟ್ರಿಷಿಯನ್ಗಳು, ಕಾರ್ಪೆಂಟರ್ಗಳು, ಚಾಲಕರು, ನರ್ಸ್ಗಳು ಹಾಗೂ ಆರೈಕೆ ಸಿಬ್ಬಂದಿಗಳಂತಹ ಬ್ಲೂ-ಕಾಲರ್ (Blue-Collar) ಉದ್ಯೋಗಿಗಳ ತೀವ್ರ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ದೊಡ್ಡ ಪ್ರಮಾಣದಲ್ಲಿ ಭಾರತೀಯ ಕೌಶಲ್ಯಯುತ ಕಾರ್ಮಿಕರನ್ನು ನೇಮಿಸಿಕೊಳ್ಳಲು ಮುಂದಾಗುತ್ತಿರುವುದು ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಬಹುದು ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಕೆನಡಾ ಮೂಲದ ಮ್ಯಾಕ್ರೋ ಟ್ರೆಂಡ್ಸ್ ಸಂಶೋಧನಾ ಸಂಸ್ಥೆ ಪೈನ್ಟ್ರೀ ಸಂಸ್ಥಾಪಕ ರಿತೇಶ್ ಜೈನ್ Ritesh Jain ಅವರು ಈ […]
ಹೊಸಂಗಡಿ: ಆವರಣವಿಲ್ಲದ ಬಾವಿಗೆ ಬಿದ್ದ ದನದ ರಕ್ಷಣೆ: ಸ್ಥಳೀಯರ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಉಡುಪಿ: ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದ ದನವೊಂದನ್ನು ಸ್ಥಳೀಯರು ಹಾಗೂ ಕ್ರೇನ್ ಚಾಲಕರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಿದ ಘಟನೆ ಶುಕ್ರವಾರ ಹೊಸಂಗಡಿ ಗ್ರಾಮದ ಅಂಬೂರು ಪ್ರದೇಶದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಯೊಬ್ಬರಿಗೆ ಸೇರಿದ ದನ ಮನೆಯ ಸಮೀಪ ಮೇಯುತ್ತಿದ್ದ ವೇಳೆ ಆವರಣವಿಲ್ಲದ ಬಾವಿಯ ಬಳಿ ತೆರಳಿ ಕಾಲು ಜಾರಿ ಬಾವಿಗೆ ಬಿದ್ದಿದೆ. ದನದ ಅರಚಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಅದು ಬಾವಿಯಲ್ಲಿ ಸಿಲುಕಿಕೊಂಡಿರುವುದು ಕಂಡುಬಂದಿತು. ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ ಸ್ಥಳೀಯರು ಮೊದಲಿಗೆ ಹಗ್ಗದ ಸಹಾಯದಿಂದ […]