ಶ್ರೀ ಸುಜ್ಞಾನೇಂದ್ರ ತೀರ್ಥರ ಆರಾಧನೆ: ವೃಂದಾವನಕ್ಕೆ ವಿಶೇಷ ಪೂಜೆ

ಉಡುಪಿ: ಆಷಾಢ ಕೃಷ್ಣ ಪಕ್ಷದ ದ್ವಾದಶಿಯಂದು ಶ್ರೀಕೃಷ್ಣ ಮಠದಲ್ಲಿ ಶ್ರೀ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ಆರಾಧನೆ ಭಕ್ತಿಪೂರ್ವಕವಾಗಿ ನಡೆಯಿತು. ಆರಾಧನೆಯ ಪ್ರಯುಕ್ತ ಕೃಷ್ಣ ಮಠದ ಸಮುಚ್ಚಯದಲ್ಲಿರುವ ಶ್ರೀ ಸುಜ್ಞಾನೇಂದ್ರ ತೀರ್ಥ ಶ್ರೀಪಾದರ ವೃಂದಾವನಕ್ಕೆ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಗೋ ಪೂಜೆಯನ್ನು ನೆರವೇರಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಆರಾಧನಾ ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಮಠದ ಸಿಬ್ಬಂದಿ ಉಪಸ್ಥಿತರಿದ್ದರು.
ನೀಟ್ 2027 ಪರೀಕ್ಷೆಗೆ ತರಬೇತಿ ಪಡೆಯಿರಿ: ಉಡುಪಿಯ ಆಕಾಶ್ ಇನ್ಸ್ಟಿಟ್ಯೂಟ್ ನಲ್ಲಿ ಲಭ್ಯವಿದೆ ದೀರ್ಘಾವಧಿ ಬ್ಯಾಚ್,ಪ್ರವೇಶ ಶುರು

ಉಡುಪಿ: ವೈದ್ಯರಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಆಕಾಶ್ ಇನ್ಸ್ಟಿಟ್ಯೂಟ್, ಉಡುಪಿ ಶಾಖೆ (ಕುಂಜಿಬೆಟ್ಟು) ಸುವರ್ಣಾವಕಾಶ ನೀಡಿದೆ. NEET 2027 ಲಾಂಗ್ ಟರ್ಮ್ ಬ್ಯಾಚ್ಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಮಗ್ರ ತರಬೇತಿ ನೀಡುವ ಉದ್ದೇಶದಿಂದ ಅನುಭವಿ ಬೋಧಕ ವರ್ಗ, ವೈಯಕ್ತಿಕ ಮಾರ್ಗದರ್ಶನ ಹಾಗೂ ಫಲಿತಾಂಶ ಕೇಂದ್ರೀಕೃತ ಕಲಿಕಾ ವಿಧಾನವನ್ನು ಸಂಸ್ಥೆ ಒದಗಿಸುತ್ತಿದೆ. ವಿದ್ಯಾರ್ಥಿಗಳಿಗೆ ಒನ್-ಟು-ಒನ್ ಫ್ಯಾಕಲ್ಟಿ ಗೈಡನ್ಸ್, ಸಮಗ್ರ ಅಧ್ಯಯನ ಸಾಮಗ್ರಿ, ನಿಯಮಿತ ಪರೀಕ್ಷೆಗಳು ಹಾಗೂ ವಿಶೇಷ ಮಾರ್ಗದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ.ಇದಲ್ಲದೆ, […]
2026ರ ಆ.10: ಸಂಪುಟಕ್ಕೆ ಸರ್ಜರಿ, ಬಿಡದಿ ಹೋರಾಟ ಸೇರಿ ದಿನದ ಪ್ರಮುಖ ಸುದ್ದಿಗಳು

ರಾಜ್ಯ, ರಾಷ್ಟ್ರೀಯ, ವಿದೇಶ, ಸಂಪಾದಕೀಯ, ಆಲ-ಅಗಲ ಹಾಗೂ ಕ್ರೀಡೆಗೆ ಸಂಬಂಧಿಸಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾನುವಾರ ರಾತ್ರಿ ನವದೆಹಲಿಯಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು. ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಜೆಎಸ್ಎಸ್ಸಿ) ನಡೆಸಿದ ಕಂಬೈನ್ಸ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷಾ ಅಕ್ರಮಗಳ ಕುರಿತು ಸಿಬಿಐ ತನಿಖೆಯ […]
ತ್ರಿಶಾ ವಿದ್ಯಾ ಕಾಲೇಜಿನಲ್ಲಿಬಿಸಿಎವಿದ್ಯಾರ್ಥಿಗಳಿಗೆ ಐಒಟಿ ಕಾರ್ಯಾಗಾರ

ಕಟಪಾಡಿ, ಆ. 7: ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ & ಮ್ಯಾನೇಜ್ಮೆಂಟ್ನ ಬಿಸಿಎ ವಿಭಾಗ ಹಾಗೂ ಐಟಿ ಕ್ಲಬ್ನ ಆಶ್ರಯದಲ್ಲಿ ಆಗಸ್ಟ್ 7ರಂದು “ಇಂಟರ್ನೆಟ್ ಆಫ್ ಥಿಂಗ್ಸ್ (IoT)” ವಿಷಯದ ಕುರಿತು ಒಂದು ದಿನದ ಪ್ರಾಯೋಗಿಕ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳಿಗೆ ಐಒಟಿ ತಂತ್ರಜ್ಞಾನದ ಮೂಲಭೂತ ಪರಿಕಲ್ಪನೆಗಳು ಹಾಗೂ ಅದರ ಪ್ರಾಯೋಗಿಕ ಬಳಕೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿಟ್ಟೆ ಪರಿಗಣಿತ (NMAMIT) ವಿಶ್ವವಿದ್ಯಾಲಯದ ಡಾ. ಸುಕೇಶ್ ಹಾಗೂ ಶ್ರೀ ದಿಲೀಪ್ ಅವರು […]