25 ಗಂಟೆಗಳ ದಾಸರಪದ ಗಾಯನಕ್ಕೆ ಸಂಗೀತ ಬಾಲಚಂದ್ರ ಸಜ್ಜು

ಉಡುಪಿ: ಸಂಗೀತ ಕ್ಷೇತ್ರದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸಿರುವ ಆಕಾಶವಾಣಿಯ ಉನ್ನತ ಶ್ರೇಣಿಯ ಕಲಾವಿದೆ ಹಾಗೂ ಚಲನಚಿತ್ರ ಹಿನ್ನೆಲೆ ಗಾಯಕಿ ಸಂಗೀತ ಬಾಲಚಂದ್ರ ಅವರು ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ಸಾಧನೆಗಾಗಿ 25 ಗಂಟೆಗಳ ಕಾಲ ನಿರಂತರವಾಗಿ ದಾಸರಪದಗಳನ್ನು ಹಾಡುವ ಐತಿಹಾಸಿಕ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಭೀಮಾ ಜ್ಯುವೆಲ್ಲರ್ಸ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ಗಾಯನ ಕಾರ್ಯಕ್ರಮಕ್ಕೆ ‘ಪಂಚವಿಂಶತಿ’ ಎಂದು ಹೆಸರಿಡಲಾಗಿದೆ. ಉಡುಪಿಯ ಶ್ರೀಕೃಷ್ಣ ಮಠದ ಸಮೀಪದ ಗೀತಾ ಮಂದಿರದ ಶ್ರೀ ಪುತ್ತಿಗೆ ನೃಸಿಂಹ ಸಭಾಂಗಣದಲ್ಲಿ ಕಾರ್ಯಕ್ರಮ […]
ಎಚ್ಚರ, ಫುಟ್ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಬೀಳುತ್ತೆ ₹5,000 ದಂಡ!

ಬೆಂಗಳೂರು: ಫುಟ್ಪಾತ್ ಮೇಲೆ ವಾಹನ ಚಲಾಯಿಸುವ ಸವಾರರಿಗೆ ಇನ್ಮುಂದೆ ಭಾರಿ ದಂಡ ವಿಧಿಸುವ ಸಾಧ್ಯತೆ ಇದೆ. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಸ್ತುತ ಇರುವ ದಂಡಕ್ಕಿಂತ ಹಲವು ಪಟ್ಟು ಹೆಚ್ಚಿಸುವಂತೆ ಸಾರಿಗೆ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸದ್ಯ ಫುಟ್ಪಾತ್ ಮೇಲೆ ವಾಹನ ಚಲಾಯಿಸಿದರೆ ₹500 ದಂಡ ವಿಧಿಸಲಾಗುತ್ತಿದೆ. ಇದೀಗ ಮೊದಲ ಬಾರಿಗೆ ನಿಯಮ ಉಲ್ಲಂಘಿಸುವವರಿಗೆ ₹5,000 ದಂಡ ವಿಧಿಸುವಂತೆ ಸಾರಿಗೆ ಇಲಾಖೆ ಪ್ರಸ್ತಾವನೆ ಮಾಡಿದೆ. ಅದೇ ರೀತಿ, ಎರಡನೇ ಬಾರಿಗೆ ನಿಯಮ ಉಲ್ಲಂಘಿಸಿದರೆ ₹10,000 ದಂಡ ವಿಧಿಸುವಂತೆ […]
ಭಾರತೀಯ ರೈಲ್ವೇನಲ್ಲೇ ಕೆಲಸ ಬೇಕು ಎನ್ನುವವರು ಇಲ್ಲಿ ಗಮನಿಸಿ, ರೈಲ್ವೆಯಲ್ಲಿ 3,993 ಹುದ್ದೆಗಳಿಗೆ ನೇಮಕಾತಿ ಶುರು, ಅರ್ಜಿ ಸಲ್ಲಿಸುವ ಕೊನೆ ದಿನ ಯಾವಾಗ? ಸಂಬಳ ಎಷ್ಟು? ಎಲ್ಲಾ ಮಾಹಿತಿ ಇಲ್ಲಿದೆ

ಭಾರತೀಯ ರೈಲ್ವೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಅವಕಾಶ ಒದಗಿ ಬಂದಿದೆ. ರೈಲ್ವೆ ನೇಮಕಾತಿ ಮಂಡಳಿ (RRB) CEN 04/2026ರ ಅಡಿಯಲ್ಲಿ ಜೂನಿಯರ್ ಎಂಜಿನಿಯರ್ (JE) ಮತ್ತು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 3,993 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 14ರಂದು ಆರಂಭವಾಗಿದ್ದು, ಸೆಪ್ಟೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ರೈಲ್ವೆಯ ವಿವಿಧ ವಲಯಗಳಲ್ಲಿ ತಾಂತ್ರಿಕ […]
LPG E-KYC ಗಡುವು ವಿಸ್ತರಣೆ: ಬರೀ ಎರಡೇ ನಿಮಿಷದಲ್ಲಿ ಮನೆಯಲ್ಲೇ LPG e-KYC ನೀವೇ ಮಾಡಬಹುದು!

ಸಬ್ಸಿಡಿ ದರದಲ್ಲಿ ಅಡುಗೆ ಅನಿಲ ಪಡೆಯುತ್ತಿರುವ LPG ಗ್ರಾಹಕರಿಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. LPG e-KYC ಪೂರ್ಣಗೊಳಿಸಲು ಈ ಮೊದಲು ನೀಡಲಾಗಿದ್ದ ಆಗಸ್ಟ್ 16ರ ಗಡುವನ್ನು ಆಗಸ್ಟ್ 23ರವರೆಗೆ ವಿಸ್ತರಿಸಲಾಗಿದೆ. ನೀವು ಇನ್ನೂ LPG e-KYC ಪೂರ್ಣಗೊಳಿಸದಿದ್ದರೆ ಆತಂಕಪಡುವ ಅಗತ್ಯವಿಲ್ಲ. ಇಂಡೇನ್, ಎಚ್ಪಿ ಗ್ಯಾಸ್ ಹಾಗೂ ಭಾರತ್ ಗ್ಯಾಸ್ ಗ್ರಾಹಕರು ತಮ್ಮ ಮೊಬೈಲ್ನಲ್ಲೇ e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. LPG e-KYC ಏಕೆ ಅಗತ್ಯ? LPG ಕಾಳಸಂತೆ ಹಾಗೂ ದುರ್ಬಳಕೆಯನ್ನು ತಡೆಯುವುದು ಮತ್ತು ಅಡುಗೆ ಅನಿಲ […]
ಅಲೋಶಿಯಸ್ ಗೊನ್ಜಾಗಾ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕನ್ನಡ ಲಿಪಿಯಲ್ಲೂ ಕಲಿಸಲು ಅಣಿಯಾಗಿದೆ: ಪ್ರಾಂಶುಪಾಲ ಫಾ ರೋಹನ್ ಡಿ’ಅಲ್ಮೇಡಾ ಘೋಷಣೆ.

ಕೊಂಕಣಿ ತೃತೀಯ ಭಾಷೆಯಾಗಿ ಅಲೋಶಿಯಸ್ ಗೊನ್ಜಾಗಾ ಸಿಬಿಎಸ್ಇ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದ ಮೊದಲಿನಿಂದ ಆರಂಭಿಸಲಾಗುವುದು, ಎಂದು ಶಾಲೆಯ ಪ್ರಾಂಶುಪಾಲ ಫಾ ರೋಹನ್ ಡಿ’ಅಲ್ಮೇಡಾ ಎಸ್ ಜೆ ನುಡಿದರು.ಅವರು ಕೊಂಕಣಿ ಭಾಷಾ ಮಂಡಳ್ ಕರ್ನಾಟಕ ಇದರ ಸಹಯೋಗದೊಂದಿಗೆ ಕೊಂಕಣಿ ಸಂಘದ ಉದ್ಘಾಟನೆ ತಮ್ಮ ಶಾಲೆಯಲ್ಲಿ ದೀಪ ಬೆಳಗಿಸಿ ಮಾಡಿ ಮಾತನಾಡಿದರು. ಕೊಂಕಣಿ ಮಾತೃಭಾಷೆ ಇರುವ ಮಕ್ಕಳು ಕನ್ನಡ, ದೇವನಾಗರಿ, ರೋಮಿ,ಯಾವ ಲಿಪಿಗಳಲ್ಲಿ ಆಗುತ್ತದೆ ಅವುಗಳ ಉಪಯೋಗ ಮಾಡಿ ಕೊಂಕಣಿ ಕಲಿಯಬೇಕು. ನಾವು ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ ಎಂದರು.ಕೊಂಕಣಿ […]