ಉಡುಪಿ: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯಲ್ಲಿ ಬೆಂಕಿ: ರಸ್ತೆ ಮಧ್ಯೆಯೇ ಸ್ಕೂಟಿ ನಿಲ್ಲಿಸಿ ಅಪಾಯದಿಂದ ಪಾರಾದ ಸವಾರ!

ಉಡುಪಿ: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ರಸ್ತೆ ಮಧ್ಯೆಯೇ ಸ್ಕೂಟಿಯನ್ನು ನಿಲ್ಲಿಸಿ ತಕ್ಷಣ ದೂರ ಓಡಿ ಹೋಗಿದ್ದಾನೆ. ಇದರಿಂದ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಬಳಿಕ ಸ್ಥಳೀಯರು ನೀರು ಸುರಿದು ಬೆಂಕಿಯನ್ನು ನಂದಿಸಿದ್ದಾರೆ. ಸ್ಕೂಟಿಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.
ಸೆ.16 ರಂದು ನೇರ ಸಂದರ್ಶನ

ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, […]
‘ಮನುಸ್ಮೃತಿ ಮನಸ್ಥಿತಿಯಿಂದ ಸಂವಿಧಾನಕ್ಕೆ ಅಪಮಾನ’: ಸೊರಕೆ

ಉಡುಪಿ: ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವುದು ಬಿಜೆಪಿಯ ಮನುಸ್ಮೃತಿ ಮನಸ್ಥಿತಿಗೆ ಸಾಕ್ಷಿ. ದಲಿತರ ಮೂಲಕ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು. ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ಶನಿವಾರ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ನಡೆದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿನ ಅಸಮಾನತೆ, ಮೇಲು-ಕೀಳು […]
ಕಾರ್ಕಳ: ಆಶ್ರಯ ಮನೆ ವಿತರಣೆ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾರ್ಕಳ ತಾಲೂಕಿನ ಪುರಸಭಾ ವ್ಯಾಪ್ತಿಯ ಮನೆ ರಹಿತರಿಗೆ ಸರ್ಕಾರದ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವಲ್ಲಿ ಶಾಸಕ ವಿ. ಸುನಿಲ್ ಕುಮಾರ್ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು. ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನಗರ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಅವರ ನೇತೃತ್ವದಲ್ಲಿ ಪತ್ತೊಂಜಿಕಟ್ಟೆಯ ಗುಂಪು ನಿವೇಶನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುನಿಯಾಲು ಉದಯ ಶೆಟ್ಟಿ […]
ಗಣೇಶೋತ್ಸವಕ್ಕೆ ಸಿದ್ಧವಾಯ್ತು ‘ಕಪ್ಪು ಕಬ್ಬು’

ಉಡುಪಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಇನ್ನಂಜೆ ಗ್ರಾಮದಲ್ಲಿ ಬೆಳೆದಿರುವ ಕಪ್ಪು ಕಬ್ಬು ಕಟಾವಿಗೆ ಸಿದ್ಧವಾಗಿದ್ದು, ಹಬ್ಬದ ಪೂಜಾ ಮಂಟಪಗಳ ಅಲಂಕಾರಕ್ಕೆ ವಿಶೇಷ ಬೇಡಿಕೆ ಪಡೆದುಕೊಂಡಿದೆ. ಇನ್ನಂಜೆಯ ಸುಮಾರು 10 ಮಂದಿ ರೈತರು ನಾಲ್ಕು ಎಕರೆ ಪ್ರದೇಶದಲ್ಲಿ ಕಳೆದ 15 ವರ್ಷಗಳಿಂದ ಗಣೇಶೋತ್ಸವವನ್ನೇ ಗಮನದಲ್ಲಿಟ್ಟುಕೊಂಡು ಕಬ್ಬು ಬೆಳೆಯುತ್ತಿದ್ದಾರೆ. ಏಳು ತಿಂಗಳ ಹಿಂದೆ ನಾಟಿ ಮಾಡಿದ್ದ ಕಬ್ಬು ಇದೀಗ ಕಟಾವಿಗೆ ಸಿದ್ಧವಾಗಿದೆ. ಸ್ಥಳೀಯ ಕೃಷಿಕ ಉದಯ್ ಅವರೂ ಈ ವಿಶೇಷ ಕಬ್ಬು ಕೃಷಿ ನಡೆಸುತ್ತಿದ್ದಾರೆ. ಗಣಪತಿಯ ಕೈಯಲ್ಲೂ […]