ಬೆಳಪು ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಭೇಟಿ

ಉಡುಪಿ: ಬೆಳಪು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಕಾಂಗ್ರೆಸ್ ಮುಖಂಡರಾದ ಹರಿಪ್ರಸಾದ್ ರೈ, ಬೆಳಪು ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಹುಲಿಕುಣಿತಕ್ಕೆ ಮನಸೋತ ಯತ್ನಾಳ್; ತಾಸೆ ಪೆಟ್ಟಿಗೆ ಸ್ಟೆಪ್!

ಉಡುಪಿ: ಬ್ರಹ್ಮಾವರ ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆ ಮೆರವಣಿಗೆಯ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಹುಲಿವೇಷದ ಊದುಪೂಜೆ ಕಾರ್ಯಕ್ರಮದಲ್ಲಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಭಾಗವಹಿಸಿ ಹುಲಿಕುಣಿತದ ಸೊಬಗನ್ನು ಸವಿದರು. ವಾರಂಬಳ್ಳಿ ಫ್ರೆಂಡ್ಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹುಲಿವೇಷಧಾರಿಗಳ ವಿಶೇಷ ಕುಣಿತವನ್ನು ವೀಕ್ಷಿಸಿದ ಯತ್ನಾಳ್, ಹುಲಿವೇಷದ ತಾಸೆಯ ಪೆಟ್ಟಿಗೆ ಮನಸೋತು ಸ್ವತಃ ಕುಣಿತಕ್ಕೆ ಹೆಜ್ಜೆ ಹಾಕಿದರು. ಹುಲಿವೇಷಧಾರಿಗಳೊಂದಿಗೆ ಕೆಲಕಾಲ ಸ್ಟೆಪ್ ಹಾಕಿ, ಹುಲಿಯಂತೆ ಕುಣಿದು ಸಂಭ್ರಮಿಸಿದರು. ಯತ್ನಾಳ್ ಅವರ ಹುಲಿಕುಣಿತದ ದೃಶ್ಯ ಕಾರ್ಯಕ್ರಮದಲ್ಲಿ ನೆರೆದಿದ್ದವರ ಗಮನ ಸೆಳೆಯಿತು.