ಕಡಿಯಾಳಿ ವಲಯ ಬ್ರಾಹ್ಮಣ ಸಮಿತಿಯ 26 ನೇ ವಾರ್ಷಿಕೋತ್ಸವ ಕಾರ್ಯಕ್ರಮ

ಉಡುಪಿ: ಕಡಿಯಾಳಿ ವಲಯ ಬ್ರಾಹ್ಮಣ ಸಮಿತಿಯ 26 ನೇ ವಾರ್ಷಿಕೋತ್ಸವವು ವಲಯದ ಅಧ್ಯಕ್ಷ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಮಂಜುನಾಥ ಉಪಾಧ್ಯ ಹಾಗೂ ಕಾರ್ಯದರ್ಶಿ ಸಂದೀಪ್ ಮಂಜ ಅವರು ಭಾಗವಹಿಸಿದ್ದರು.

ಸಭೆಯಲ್ಲಿ ಹಿರಿಯ ವಿದ್ವಾಂಸ ಡಾ.ಬಿ.ಗೋಪಾಲಾಚಾರ್ಯ ಹಾಗೂ ವೇದವ್ಯಾಸ ಪುರಾಣಿಕ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಹತ್ತನೇ ತರಗತಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಲಯದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಲಯದ 9 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು. ಸದಸ್ಯರಿಗಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯದರ್ಶಿ ಸದಾನಂದ ಶರ್ಮ ವರದಿ ವಾಚಿಸಿದರು. ಕೋಶಾಧಿಕಾರಿ ಶ್ರೀನಿವಾಸ ಭಟ್ ಲೆಕ್ಕ ಪತ್ರ ಮಂಡಿಸಿದರು. ವ್ಯಾಸರಾಜ ಭಟ್ ವಂದಿಸಿದರು. ನಾಗರಾಜ ತಂತ್ರಿ ಕಾರ್ಯಕ್ರಮ ನಿರೂಪಿಸಿದರು.

ಮಂಜುನಾಥ ತೆಂಕಿಲ್ಲಾಯ, ಬಾಲಕೃಷ್ಣ ಆಚಾರ್ಯ, ರಾಜೇಶ್ ಭಟ್, ರಾಘವೇಂದ್ರ ರಾವ್ ಅವರ ಸಹಕಾರದಿಂದ ನಡೆದ ಕಾರ್ಯಕ್ರಮದ ಕೊನೆಯಲ್ಲಿ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.