ಕುಂಜಿಬೆಟ್ಟು ವಾರ್ಡ್ ರಸ್ತೆ ಕಾಂಕ್ರೀಟ್ ಕಾಮಗಾರಿ: 30 ದಿನ ಸಂಚಾರ ನಿರ್ಬಂಧ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಕುಂಜಿಬೆಟ್ಟು ವಾರ್ಡಿನ ಶಾರದ ಕಲ್ಯಾಣ ಮಂಟಪ ರಸ್ತೆಯಿಂದ ಸೇತುವೆವರೆಗೆ ರಸ್ತೆ ಕಾಂಕ್ರೀಟ್ ಕಾಮಗಾರಿ ಕೈಗೊಳ್ಳುವ ಪ್ರಯುಕ್ತ 30 ದಿನಗಳವರೆಗೆ ಸದ್ರಿ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಅಕ್ಕ-ಪಕ್ಕದ ಬದಲೀ ರಸ್ತೆಯನ್ನು ಬಳಸಿ, ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.