ಕರಾವಳಿ ಯೂತ್ ಕ್ಲಬ್ ಉಡುಪಿಗೆ 5ನೇ ವರ್ಷದ ಸಂಭ್ರಮ: ಐದು ಕುಟುಂಬಗಳಿಗೆ ಸಹಾಯಧನ ವಿತರಣೆ

ಉಡುಪಿ: ಕರಾವಳಿ ಯೂತ್ ಕ್ಲಬ್ ಉಡುಪಿ ಇದರ ಐದನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಕಡಿಯಾಳಿಯ ಕಾತ್ಯಾಯಿನಿ ಮಂಟಪದಲ್ಲಿ ಭಾನುವಾರ ಐದು ಜನ ಅಶಕ್ತ ಕುಟುಂಬಗಳಿಗೆ ಒಟ್ಟು 50 ಸಾವಿರ ಮೊತ್ತದ ಸಹಾಯಧನ ವಿತರಣೆ ಹಾಗೂ ಸಾಧಕರಿಗೆ ಗೌರವಾರ್ಪಣೆ ಮೂಲಕ ವಿಶೇಷವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮನೋವೈದ್ಯ ಡಾ. ಡಾ. ಪಿ.ವಿ. ಭಂಡಾರಿ, ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ರುವಾರಿ ಅರ್ಜುನ್ ಭಂಡಾರ್ಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಭಯಹಸ್ತ ಸಂಸ್ಥಾಪಕ ಸತೀಶ್ ಸಾಲ್ಯಾನ್, ಮುರಳಿಕೃಷ್ಣ, ಸಂಸ್ಥೆಯ ಅಧ್ಯಕ್ಷ ಅಶೋಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಮಾತನಾಡಿ, ಸಂಸ್ಥೆಯು 5 ವರ್ಷದಿಂದ ನಡೆದು ಬಂದಂತಹ ಹಾದಿಯ ಬಗ್ಗೆ ವಿವರಿಸಿದರು.

ಸಂಸ್ಥೆಯ ಸದಸ್ಯರ ರಾಮಾಂಜಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸರ್ವ ಸದಸ್ಯರು, ಹಿತೈಷಿಗಳು ಭಾಗವಹಿಸಿದ್ದರು.