ಏ.15ರಂದು ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ 60ರ ಅಭಿನಂದನಾ ಸಮಾರಂಭ

ಉಡುಪಿ : ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ದ ರಜತ ಮಹೋತ್ಸವದ ಉದ್ಘಾಟನೆ ಹಾಗೂ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ 60ರ ಅಭಿನಂದನಾ ಸಮಾರಂಭ ಏಪ್ರಿಲ್ 15ರಂದು ಸಂಜೆ 4:00 ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ್ ಉಪಾಧ್ಯ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 60ರ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ ಒಂದರಿಂದ 2024ರ ಮಾರ್ಚ್ 31ರವರೆಗೆ ಒಂದು ವರ್ಷಗಳ ಕಾಲ ತಾಲೂಕು ಮಟ್ಟದಲ್ಲಿ 25 ದೊಡ್ಡ ಮಟ್ಟದ ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ಶೈಕ್ಷಣಿಕ ಕೃಷಿ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಪೇಜಾವರ ಶ್ರೀಗಳು ರಜತ ಮಹೋತ್ಸವ ಉದ್ಘಾಟಿಸಲಿದ್ದಾರೆ ಶಾರದಾ ಸಮೂಹ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ. ಎಮ್ ಬಿ ಪುರಾಣಿಕ್, ಮಂಗಳೂರು ವಿವಿಯ ಸುಬ್ರಮಣ್ಯ ಯಡಪಡಿತ್ತಾಯ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದಾರೆ ಅಧ್ಯಕ್ಷ ಎಂ ಶ್ರೀನಿವಾಸ ಬಲ್ಲಾಳ್, ಪ್ರಧಾನ ಕಾರ್ಯದರ್ಶಿ ಜಯರಾಮ್ ಆಚಾರ್ಯ, ಕೋಶಾಧಿಕಾರಿ ಜನಾರ್ಧನ ಭಟ್, ಸಂಚಾಲಕ ಶ್ರೀಕಾಂತ್ ಉಪಾಧ್ಯಾಯ, ಬ್ರಾಹ್ಮಣ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಂದೀಪ್ ಮಂಜ, ಕೋಶಾಧಿಕಾರಿ ನಾರಾಯಣ ದಾಸ ಉಡುಪ ಉಪಸ್ಥಿತರಿದ್ದರು.