ಕ್ರಿಯೇಟಿವ್‌ ಪ.ಪೂ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

ಕಾರ್ಕಳ: ರಾಜ ಪ್ರಭುತ್ವದೆಡೆಯಿಂದ ಪ್ರಜಾಪ್ರಭುತ್ವದ ಕಡೆಗೆ ಸಾಗಿದ ಹೆಗ್ಗುರುತೇ ಗಣರಾಜ್ಯೋತ್ಸವ. ಸಂವಿಧಾನ ನಮಗೆ ಅನೇಕ ಕೊಡುಗೆಗಳನ್ನು ನೀಡಿದೆ. ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ದಿನವಿದು. ಆದ್ದರಿಂದ ನಾವೆಲ್ಲರೂ ಸಮಾನರೆಂಬ ಭಾವನೆಯನ್ನು ಸಂವಿಧಾನ ನಮಗೆ ನೀಡಿದೆ. ಕಾನೂನಿನ ಅಂಶಗಳನ್ನು ಗೌರವಿಸಿ, ರಾಷ್ಟ್ರಧ್ವಜ, ರಾಷ್ಟ್ರೀಯತೆಯನ್ನು ಗೌರವಿಸಿ ಬದುಕಬೇಕು ಎಂದು ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್‌ ಹೇಳಿದರು

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಂಸ್ಥಾಪ ಆದರ್ಶ ಎಂ.ಕೆ, ಸಂವಿಧಾನಾತ್ಮಕವಾಗಿ ನಮಗೆ ನೀಡಿರುವ ಅಧಿಕಾರವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಪ್ರಜಾಸತ್ತಾತ್ಮಕ ಅಂಶಗಳನ್ನು ಗೌರವಿಸಿ ಸಹಬಾಳ್ವೆ ನಡೆಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕಅಶ್ವತ್‌ ಎಸ್‌.ಎಲ್., ಗಣಪತಿ ಭಟ್‌ ಕೆ.ಎಸ್‌, ಉಪನ್ಯಾಸಕರಾದ ವಿನಾಯಕ ಜೋಗ್‌, ಶಿವಕುಮಾರ್‌, ರಾಘವೇಂದ್ರ ರಾವ್‌, ಗಿರೀಶ್‌ ಭಟ್‌, ರಾಜೇಶ್‌ ಶೆಟ್ಟಿ, ಆದಂ ಶೇಕ್‌, ಅಕ್ಷತಾ ಜೈನ್‌, ಪವಿತ್ರಾ ತೇಜ್‌, ನಿಧಿ ಬಿ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರಕಾಶ್‌, ರುವಿಟಾ ಡಿಸೋಜ ಹಾಗೂ ವಸತಿ ನಿಲಯದ ಪಾಲಕರು, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಉಡುಪಿಯಲ್ಲೂ ಗಣರಾಜ್ಯೋತ್ಸವ ದಿನಾಚರಣೆ

ಉಡುಪಿಯಲ್ಲಿರುವ ಕ್ರಿಯೇಟಿವ್ ಕಾಲೇಜಿನಲ್ಲೂ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಭವಿಷ್ಯದಲ್ಲಿ ಈ ದೇಶವನ್ನು ಕಟ್ಟುವ ರೂವಾರಿಗಳಾಗಬೇಕು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ನಮ್ಮ ಸಂವಿಧಾನದ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಕಾನೂನುಗಳನ್ನು ಗೌರವಿಸುತ್ತಾ, ಭವ್ಯ ಭಾರತದ ದಿವ್ಯ ಪ್ರಜೆಗಳಾಗಿ ಬಾಳಿ ಬದುಕಬೇಕೆಂದು ಸಂಸ್ಥೆಯ ಪ್ರಾಂಶುಪಾಲ ಸ್ಟ್ಯಾನಿ ಲೋಬೋ ಕರೆ ನೀಡಿದರು.

ಭಾರತ ದೇಶಕ್ಕೆ ಸುಭದ್ರ ಅಡಿಪಾಯವನ್ನು ಹಾಕಿ ಕೊಟ್ಟು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರಪಡಿಸುವಲ್ಲಿ ಸಂವಿಧಾನದ ಪಾತ್ರ ಅಮೂಲ್ಯವಾದದು. ಈ ನಿಟ್ಟಿನಲ್ಲಿ ಅಂಬೇಡ್ಕರ್ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕ ವರ್ಗದವರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.