ಕುಶಲ ಶೇಖರ ಶೆಟ್ಟಿ ಆಡಿಟೋರಿಯಂ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆ

ಕಳತ್ತೂರು: ಕುಶಲ ಶೇಖರ ಶೆಟ್ಟಿ ಆಡಿಟೋರಿಯಂ ಕಳತ್ತೂರು ವತಿಯಿಂದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಹಿರಿಯರಾದ ವಾಸು ಶೆಟ್ಟಿ ಧ್ವಜಾರೋಹಣ ಮಾಡಿದರು. ಆಡಿಟೋರಿಯಂನ ಮಾಲಕ ಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಆಡಿಟೋರಿಯಂನ ನಿರ್ದೇಶಕಿ ಕುಶಲ ಶೇಖರ ಶೆಟ್ಟಿ, ಆನಂದಿ ಶೆಟ್ಟಿ, ದಿವಾಕರ ಶೆಟ್ಟಿ, ದಿನೇಶ್ ಶೆಟ್ಟಿ ಕೊತ್ತಲಂಗಡಿ ಮತ್ತು ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕರಂದಾಡಿ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ನಿರೂಪಿಸಿದರು.

ಕಾರ್ಯಕ್ರಮದ ಭಾಗವಾಗಿ ಗ್ರಾಮಸ್ಥರಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು.