ಮತ್ತೆ ಹಿಜಾಬ್ ಗದ್ದಲ: 99.99% ಜನರು ತೀರ್ಪನ್ನು ಒಪ್ಪಿಕೊಂಡಿದ್ದಾರೆ, ವಿವಾದವನ್ನು ಬೆಳೆಸುವ ಅಗತ್ಯವಿಲ್ಲ: ಬೊಮ್ಮಾಯಿ

ಬೆಂಗಳೂರು: ಮತ್ತೆ ಮರುಜೀವ ಪಡೆದಿರುವ ಹಿಜಾಬ್ ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಷಯವನ್ನು ಬೆಳೆಸುವ ಅಗತ್ಯವಿಲ್ಲ, ನ್ಯಾಯಾಲಯವು ಈಗಾಗಲೇ ತೀರ್ಪು ನೀಡಿದೆ. ಎಲ್ಲರೂ ಅದನ್ನು ಅನುಸರಿಸುತ್ತಿದ್ದಾರೆ, 99.99% ತೀರ್ಪನ್ನು ಅನುಸರಿಸಿದ್ದಾರೆ. ನ್ಯಾಯಾಲಯ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.