ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಸ್ಕೌಟರ್ಗಳ ಸಮಾವೇಶವು ಇತ್ತೀಚೆಗೆ ಯು ಕಮಲ ಬಾಯಿ ಹೈಸ್ಕೂಲ್ನಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆಯ ಐದು ವಲಯಗಳಾದ ಉಡುಪಿ, ಕಾರ್ಕಳ, ಬೈಂದೂರು, ಬ್ರಹ್ಮಾವರ, ಕುಂದಾಪುರದ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು ಹಾಗೂ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಭಾಗವಹಿಸಿ, ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಸ್ಕೌಟ್ಸ್ ಗೈಡ್ಸ್ ದಳ ಹೊಂದಿರಬೇಕು ಹಾಗು ಚಟುವಟಿಕೆಯಿಂದ ಕೂಡಿರಬೇಕು ಎಂದರು.
ಜಿಲ್ಲಾ ಸಂಸ್ಥೆಯ ಉಪಾಧ್ಯಕ್ಷ ಎಡ್ವಿನ್ ಆಳ್ವ ಸಮಾವೇಶದ ಆಧ್ಯಕ್ಷತೆಯನ್ನು ವಹಿಸಿದ್ದರು.
ಸಮಾವೇಶದಲ್ಲಿ ಜಿಲ್ಲಾ ಸ್ಕೌಟ್ಸ್ ಆಯುಕ್ತ ಡಾ| ವಿಜಯೇಂದ್ರ ವಸಂತ್, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ ಪೈ, ಶಾಲಾ ಮುಖ್ಯ ಶಿಕ್ಷಕ ಗಣೇಶ್ ಮೂರ್ತಿ ಹೆಬ್ಬಾರ್, ಜಿಲ್ಲಾ ಸಹ ಆಯುಕ್ತ ಶೇಖರ್ ಪೂಜಾರಿ ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಐ.ಕೆ ಜಯಚಂದ್ರ ಸ್ವಾಗತಿಸಿದರು. ಜಿಲ್ಲಾ ತರಬೇತಿ ಆಯುಕ್ತ (ಸ್ಕೌಟ್ಸ್) ಬಿ.ಆನಂದ ಅಡಿಗ ನಿರೂಪಿಸಿದರು. ಜಿಲ್ಲಾ ತರಬೇತಿ ಆಯುಕ್ತ(ಗೈಡ್ಸ್) ಸಾವಿತ್ರಿ ಮನೋಹರ್ ವಂದಿಸಿದರು. ಜಿಲ್ಲಾ ಸಂಘಟಕರಾದ ನಿತಿನ್ ಅಮಿನ್, ಸುಮನ್ ಶೇಖರ್ ಕಾರ್ಯಕ್ರಮ ಸಂಘಟಿಸಿದರು.












