ಪ.ಜಾತಿ/ ಪಂಗಡದ ಕಲಾಸಕ್ತರಿಗೆ ಜಾನಪದ ತರಬೇತಿ

ಉಡುಪಿ: ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2019-20 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಹಾಗೂ ಜಾನಪದ ಕಲಾಪ್ರಕಾರಗಳಲ್ಲಿ ಆರು ತಿಂಗಳ ತರಬೇತಿ ಕಾಯಾಗಾರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ವಿಶೇಷ ಘಟಕ ಯೋಜನೆಯಡಿ 20 ಜನ ಹಾಗೂ ಗಿರಿಜನ ಉಪಯೋಜನೆಯಡಿ 8 ಜನ ಶಿಬಿರಾರ್ಥಿಗಳಿಗೆ ಮಾಹೆಯಾನ 1000 ರೂ.ಗಳ ಶಿಷ್ಯವೇತನ ನೀಡಲಾಗುವುದು. ಶಿಬಿರಾರ್ಥಿಗಳ ವಯಸ್ಸು ಕನಿಷ್ಟ 18 ರಿಂದ 35 ವರ್ಷ ಒಳಗಿರಬೇಕು. ಮಹಿಳೆಯರಿಗೆ ಮತ್ತು ಅಂಗವಿಕಲರಿಗೆ ನಿಯಮಾನುಸಾರ ಹೆಚ್ಚಿನ ಆದ್ಯತೆ ನೀಡಲಾಗುವುದು.

ತರಬೇತಿ ನೀಡಲಿಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುರುಗಳಿಂದಲೂ (ತರಬೇತುದಾರರು) ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತುದಾರರಿಗೆ ಮಾಸಿಕ 8000 ರೂ. ಸಂಭಾವನೆ ನಿಗಧಿಪಡಿಸಲಾಗಿದೆ. ಸ್ವವಿರಗಳನ್ನು ಒಳಗೊಂಡ ಅರ್ಜಿಯನ್ನು ಇತ್ತೀಚಿನ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಆಗಸ್ಟ್ 28 ರ ಒಳಗೆ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0820-2986168 ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.