ಕೃಷ್ಣಮಠಕ್ಕೆ ಕೇಂದ್ರ ರಸಗೊಬ್ಬರ ಸಚಿವರ ಭೇಟಿ

ಉಡುಪಿ: ಕೇಂದ್ರ ಸರ್ಕಾರದ ರಸಗೊಬ್ಬರ ಸಚಿವರಾದ ಮಾನ್ಸುಖ್ ಎಲ್.ಮಾಂಡವಿ ಅವರು ಶುಕ್ರವಾರ ಕೃಷ್ಣಮಠಕ್ಕೆ ಭೇಟಿ ನೀಡಿ  ಶ್ರೀಕೃಷ್ಣ ದೇವರ ದರ್ಶನ ಪಡೆದು ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್,ಉಡುಪಿ ಶಾಸಕರಾದ ರಘುಪತಿ ಭಟ್,ಮಂಗಳೂರು ಬಂದರಿನ ಅಧ್ಯಕ್ಷರಾದ ವೆಂಕಟ ರಾಮನ್ ಅಕ್ಕರಾಜು ಮೊದಲಾದವರು ಉಪಸ್ಥಿತರಿದ್ದರು.