ಉಡುಪಿ: ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಗೊಂದಲಗಳು ಶೀಘ್ರ ಸುಖಾಂತ್ಯ ಕಾಣಲಿದೆ. ಅಲ್ಲಿ ಎನ್ ಡಿಎ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯಿಸಿದ, ಈ ಕ್ಷಣದವರೆಗೆ ಅವರು ನಮ್ಮ ಪಕ್ಷದಲ್ಲೇ ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಮುಂದಿನ ಬೆಳವಣಿಗೆ ಗೊತ್ತಿಲ್ಲ. ಅವರು ಈ ಹಿಂದೆ ಬಿಜೆಪಿಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದವರು. ಕುಮಾರಸ್ವಾಮಿ ಅವರು ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಹೀಗಾಗಿ ಸಹಜವಾಗಿಯೇ ಚೆನ್ನಪಟ್ಟಣ ಸೂಕ್ಷ್ಮ ಕ್ಷೇತ್ರ. ಅಲ್ಲಿ ಏನೇ ಗೊಂದಲಗಳಿದ್ದರೂ ನಮ್ಮ ವರಿಷ್ಠರು ಅದಕ್ಕೆ ಪರಿಹಾರ ಸೂಚಿಸಲಿದ್ದಾರೆ. ಆ ಕ್ಷೇತ್ರದಲ್ಲಿ ಎನ್ಡಿಎ ಗೆಲ್ಲಲೇಬೇಕಿದೆ ಎಂದರು.