ಪಶುಸಂಗೋಪನೆ ಕಾರ್ಯಕ್ರಮ-ಅರ್ಜಿ ಆಹ್ವಾನ

ಉಡುಪಿ: ಜಿಲ್ಲೆಯ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಬಿತ ಜನಾಂಗದವರಿಗೆ ಪಶುಸಂಗೋಪನೆ ಕಾರ್ಯಕ್ರಮಗಳಾದ ಹೈನುಗಾರಿಕೆ, ಹಸು, ಎಮ್ಮೆ, ಕುರಿ ಮೇಕೆ, ಸರಕು ಸಾಗಾಣಿಕೆ ವಾಹನ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ ಇತ್ಯಾದಿ ಸ್ವಯಂ ಉದ್ಯೋಗ ಕಾರ್ಯಕ್ರಮ ಅನುಷ್ಟಾನ ಮಾಡುತ್ತಿದ್ದು, ಆಸಕ್ತಿಯುಳ್ಳ ಅಲೆಮಾರಿ, ಮೂಲನಿವಾಸಿ ಮತ್ತು ಅರಣ್ಯ ಅವಲಂಬಿತ ಜನಾಂಗದವರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ಇಲ್ಲಿ ಹಾಗೂ ಸಂಬಂಧಪಟ್ಟ ಗ್ರಾಮ ಪಂಚಾಯತ್‍ಗಳಲ್ಲಿ ಸೆಪ್ಟಂಬರ್ 3 ರಿಂದ  ಪಡೆಯಹುದಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 26 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಉಡುಪಿ ಕಛೇರಿ, ದೂರವಾಣಿ ಸಂಖ್ಯೆ: 0820-2574814 ನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.