ಉಡುಪಿ: ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ಉಗ್ರರ ದಾಳಿಯನ್ನು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತೀವ್ರವಾಗಿ ಖಂಡಿಸಿದ್ದಾರೆ.
ಕಾಶ್ಮೀರದ ದುರ್ಘಟನೆಯಿಂದ ಬಹಳ ಆಘಾತವಾಗಿದೆ. ಆ ಕಡೆ ಪಶ್ಚಿಮ ಬಂಗಾಳ, ಈ ಕಡೆ ಕಾಶ್ಮೀರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ.
ಕಾಶ್ಮೀರ ಫೈಲ್ಸ್ ಚಿತ್ರದಂತೆ ವ್ಯತಿರಿಕ್ತ ಇಲ್ಲದೆ ಈ ಘಟನೆ ನಡೆದಿದೆ. ಈ ಘಟನೆ ಬಹಳ ಆಘಾತಕಾರಿ ಸರಕಾರ ಬಲವಾದ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆ ದೇಶದಲ್ಲೆಲ್ಲೂ ಮರುಕಳಿಸಬಾರದು. ದೇಶದೊಳಗೆ ಸೂಕ್ತ ಭದ್ರತೆ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದರು.












