ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

ಮಂಗಳೂರು: ಧರ್ಮಸ್ಥಳ ಮೂಲದ ಯುವತಿ, ಪಂಜಾಬ್ ನಲ್ಲಿ ತಾನು ಉಳಿದುಕೊಂಡಿದ್ದ ಕೊಠಡಿಯ 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ. ಆಕಾಂಕ್ಷ ಎಸ್ ನಾಯರ್ (22) ಮೃತ ಯುವತಿ.

22 ವರ್ಷದ ಆಕಾಂಕ್ಷ ಧರ್ಮಸ್ಥಳ ಬಳಿಯ ಬೊಳಿಯಾರ್ ಗ್ರಾಮದ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ. ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು.

ಪಂಜಾಬಿನ ಎಲ್.ಪಿ.ಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದುಕೊಂಡಿದ್ದರು. ಎಲ್.ಪಿ.ಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ಆಕಾಂಕ್ಷ ಪಂಜಾಬ್​ಗೆ ತೆರಳಿದ್ದರು.ಅಲ್ಲಿ ಈ ಘಟನೆ ಸಂಭವಿಸಿದೆ. ಆಕೆ ಆಕಸ್ಮಿಕವಾಗಿ ಬಿದ್ದಿದ್ದಾ ಅಥವಾ ಬಾಹ್ಯ ಒತ್ತಡಗಳಿಂದ ಈ ಘಟನೆ ಸಂಭವಿಸಿದೆಯಾ ಎನ್ನುವುದು ದೃಢವಾಗಿಲ್ಲ.