ಉಡುಪಿ:ಎಂಜಿಎಂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಮ್ಮಾನ ಕಾರ್ಯಕ್ರಮ

ಉಡುಪಿ:ಇತ್ತೀಚೆಗೆ ಎಂಜಿಎಂ ಕಾಲೇಜಿನ ಪ್ರಾಂಶುಪಾಲರ ಹುದ್ದೆಯಿಂದ ನಿವೃತ್ತರಾದ ಪ್ರೊ.ಚಿತ್ರಪಾಡಿ ಲಕ್ಷ್ಮೀನಾರಾಯಣ ಕಾರಂತರನ್ನು ಅಭಿನಂದಿಸಿ ಸಮ್ಮಾನಿಸಿ ವಿದಾಯ ಕೇೂರುವ ಸಮಾರಂಭ ಎಂಜಿಎಂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಂಗಳವಾರ ಕಾಲೇಜಿನ ಎ.ವಿ.ಹಾಲ್ ನಲ್ಲಿ ನಡೆಯಿತು.

ಪ್ರೊ.ಲಕ್ಷ್ಮಿನಾರಾಯಣ ಕಾರಂತರ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಅವರು ಪ್ರಾಂಶುಪಾಲರಾಗಿ ಕಾಲೇಜಿನ ಬೆಳವಣಿಗೆಯಲ್ಲಿ ನೀಡಿದ ಅನುಪಮ ಸೇವೆಯನ್ನು ಸ್ಮರಿಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಎಲ್.ಸಾಮಗ, ಕಾಲೇಜಿನ ಉಪ ಪ್ರಾಂಶುಪಾಲ ಡಾ.ಎಂ.ವಿಶ್ವನಾಥ ಪೈ,ನೂತನ ನಿಯೇೂಜಿತ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಪದವಿಪೂರ್ವ ಪ್ರಾಂಶುಪಾಲೆ ಮಾಲತಿದೇವಿ ಮಾತನಾಡಿದರು.

ಸಭಾಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತನಾಡಿ ಕಾರಂತರ ಜೊತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡು ಪ್ರೊ.ಕಾರಂತರ ವ್ಯಕ್ತಿತ್ವದ ವಿಶೇಷತೆ ಕುರಿತಾಗಿ ಮಾತನಾಡಿದರು.

ವೇದಿಕೆಯಲ್ಲಿ ಸಂಘದ ಕೇೂಶಾಧಿಕಾರಿ ದೀಪಾಲಿ ಕಾಮತ್, ಪದಾಧಿಕಾರಿಗಳಾದ ಪ್ರೀತೇಶ ಬಿ.ಡಿಸಾ, ಶ್ಯಾಮಲಾ ಉಪಸ್ಥಿತರಿದ್ದರು. ರಾಜ್ಯ ಶಾಸ್ತ್ರ ಉಪನ್ಯಾಸಕಿ ಅದಿತಿ ಸ್ವಾಗತಿಸಿದರು.ಉಪನ್ಯಾಸಕ ಸನತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.