ಅಹಮದಾಬಾದ್: ನನ್ನ ಹೃದಯ ಬೆಂಗಳೂರಿಗಾಗಿ, ನನ್ನ ಆತ್ಮ ಬೆಂಗಳೂರಿಗಾಗಿ, ನಾನು ಐಪಿಎಲ್ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ. ಐತಿಹಾಸಿಕ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲಿ ವಿರಾಟ್ ಕೊಹ್ಲಿ ಅವರು ಹೇಳಿದ ಮಾತುಗಳಿವು.
ಸಂದರ್ಶನದಲ್ಲಿ ಮಾತಾನಾಡಿದ ಅವರು, ನಾನು ಈ ರಾತ್ರಿ ಮಗುವಿನಂತೆ ಮಲಗುತ್ತೇನೆ ಎಂದು ಹೇಳಿದ್ದರಲಲ್ದೇ. ನನ್ನ ಹೃದಯ, ಆತ್ಮ ಎರಡೂ ಬೆಂಗಳೂರಿಗಾಗಿಯೇ.. ಐಪಿಎಲ್ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡುತ್ತೇನೆ ಎಂದು ಭಾವುಕವಾಗಿ ನುಡಿದರು.
ನಾನು ಪ್ರಭಾವಿ ಆಟಗಾರನಾಗಿ ಆಡಲು ಬಯಸುವುದಿಲ್ಲ, ನಾನು ಫೀಲ್ಡಿಂಗ್ ಮಾಡಿ ಪ್ರಭಾವ ಬೀರಲು ಬಯಸುತ್ತೇನೆ.. ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ ಅಭಿಮಾನಿಗಳಿಗೂ ಅಷ್ಟೇ ಮುಖ್ಯವಾಗಿತ್ತು. 18 ವರ್ಷಗಳು ಕಳೆದಿವೆ. ಈ ಬಾರಿ ನಾನು ನನ್ನ ಯೌವನವನ್ನು ಮರೆತು ನನ್ನ ಅತ್ಯುನ್ನತೆಯ ಆಟವನ್ನು ನೀಡಿದ್ದೇನೆ. ನನ್ನಲ್ಲಿರುವ ಎಲ್ಲವನ್ನೂ ನಾನು ಅದಕ್ಕೆ ನೀಡಿದ್ದೇನೆ. ಈ ದಿನ ಬರುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಕೊನೆಯ ಚೆಂಡು ಎಸೆದ ತಕ್ಷಣ ಭಾವುಕನಾಗಿದ್ದೆ.
ಅಭಿಮಾನಿಗಳ ಜೊತೆಗೆ ಸಂಭ್ರಮ:
ಬಳಿಕ ಕಪ್ ಗೆದ್ದ ಸಂಭ್ರಮದಲ್ಲೂ ಬೆಂಗಳೂರನ್ನು ಮರೆಯದ ಕೊಹ್ಲಿ… ಕಪ್ ಗೆದ್ದ ಸಂಭ್ರಮವನ್ನ ಅಭಿಮಾನಿಗಳ ಜೊತೆಗೆ ಆನಂದಿಸಬೇಕು. ನಮ್ಮ ನಗರ ಸಂಭ್ರಮಿಸಲು ಕಾಯುತ್ತಿದೆ ಅಂತ ನೆನಪಿಸಿಕೊಂಡರು. ಯಾರೋ ಒಬ್ಬರು ಬೆಂಗಳೂರಿನ ಒಂದು ವಿಡಿಯೋ ಕಳಿಸಿದ್ರು, ಇಡೀ ನಗರ ಪಟಾಕಿ ಸಿಡಿಸಿ ಸಂಭ್ರಮಿಸುತ್ತು. ಆ ಅನುಭವವೇ ಬೇರೆ ಅದನ್ನು ಹೇಳಲು ಆಗುವುದಿಲ್ಲ, ಅನುಭವಿಸಬೇಕು ಅಂತ ಹೇಳಿದ್ರು. ಈ ಮೂಲಕ ಬೆಂಗಳೂರಿನಲ್ಲಿ ಸಂಭ್ರಮಾಚಣೆ ನಡೆಸುವ ಸುಳಿವುಕೊಟ್ಟರು.
ʻಈ ಸಲ ಕಪ್ ನಮ್ದೇʼ:
ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ 6 ರನ್ಗಳಿಂದ ಗೆಲುವು ಸಾಧಿಸಿತು. ಇದರೊಂದಿಗೆ ಮೊದಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿತು.












