ಉಡುಪಿ: ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಗ್ರಾಮದೊಳಗೆ ನುಗ್ಗಿದ ಒಂಟಿ ಸಲಗವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮನೆ ಸಮೀಪವೇ ಕಾಡಾನೆ ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮುಂಜಾಗ್ರತಾ ಕ್ರಮವಾಗಿ ಸಿದ್ದಾಪುರ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಒತ್ತಾಯ ಮಾಡಿದ್ದಾರೆ. ನಿನ್ನೆ ಬಾಳೆಬರೆ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿತ್ತು.












