ಉಡುಪಿ:ಜಿಲ್ಲೆಯಲ್ಲಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದಲ್ಲಿ ಅನಿಷ್ಠ ಪಿಡುಗಾಗಿದೆ. ಜಿಲ್ಲೆಯಲ್ಲಿ ಇದನ್ನುಸಂಪೂರ್ಣವಾಗಿ ನಿರ್ಮೂಲನೆ ಮಾಡುವುದರೊಂದಿಗೆ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆವಿದ್ಯಾಕುಮಾರಿ ಅಧಿಕಾರಿಗಳಿಗೆ ಕರೆ ನೀಡಿದರು.

ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲಕಾರ್ಮಿಕ ಯೋಜನಾ ಸಂಘದಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ, ಸಲಹಾ ಸಮಿತಿ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಕ್ಕಳು ತಮ್ಮ ಬಾಲ್ಯಾವಸ್ಥೆಯಲ್ಲಿಯೇ ದುಡಿಮೆಗೆ ತೊಡಗಿಕೊಂಡಲ್ಲಿ ಅವರುಗಳು ಶಿಕ್ಷಣದಿಂದ ವಂಚಿತರಾಗುವುದರ ಜೊತೆಗೆಮಾನಸಿಕ ಹಾಗೂ ದೈಹಿಕ ಶಾರೀರಿಕ ಬೆಳವಣಿಗೆಗೆ ಹಾನಿ ಉಂಟಾಗುವುದರ ಜೊತೆಗೆ ಭವಿಷ್ಯದ ಆಯ್ಕೆಗಳನ್ನು ಸೀಮಿತಗೊಳಿಸುತ್ತದೆ. ಈಹಿನ್ನೆಲೆ ಬಾಲಕಾರ್ಮಿಕ ರಕ್ಷಣಾ ಕಾಯಿದೆಯನ್ನು ಜಾರಿಗೆ ತರಲಾಗಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕರ್ತವ್ಯಜನಸಾಮಾನ್ಯರು ಹಾಗೂ ಅಧಿಕಾರಿಗಳ ಮೇಲಿದ್ದು, ಇದನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳು ತಮ್ಮಬಾಲ್ಯಾವಸ್ಥೆಯನ್ನು ಸವಿಯುವುದರೊಂದಿಗೆ ಶಿಕ್ಷಣವಂತರನ್ನಾಗಿಸಲು ಪೂರಕ ವಾತಾವರಣವನ್ನು ನಿರ್ಮಿಸಬೇಕು ಎಂದರು.

ಜಿಲ್ಲೆಯ ಮಲ್ಪೆ ಮೀನುಗಾರಿಕೆಯ ಹರಾಜು ಸ್ಥಳಗಳಲ್ಲಿ, ಕೆಲವು ವಾಣಿಜ್ಯ ಸ್ಥಳಗಳಲ್ಲಿ, ಕಲ್ಲುಕೋರೆಗಳಲ್ಲಿ ಮರಳು ತೆಗೆಯುವಪ್ರದೇಶಗಳು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಕ್ಕಳು ದುಡಿಮೆಗೆ ತೊಡಗಿಕೊಳ್ಳುತ್ತಿರುವ ಬಗ್ಗೆ ಈ ಹಿಂದೆ ಅನೇಕ ಪ್ರಕರಣಗಳು ಆಗಿವೆ.ಅಲ್ಲಿಯೇ ಪುನರಾವರ್ತಿತವಾಗುವ ಸಾಧ್ಯತೆಗಳು ಇರುತ್ತವೆ. ಇಂತಹ ತಾಣಗಳ ಮೇಲೆ ನಿರಂತರವಾಗಿ ಆಗಿಂದಾಗ್ಗೆ ಹಠಾತ್ ದಾಳಿ ನಡೆಸಿ,ಮಕ್ಕಳು ನಿಯೋಜನೆಗೊಂಡಿರುವುದು ಕಂಡುಬಂದಲ್ಲಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಿ, ಅವರುಗಳ ಮೇಲೆ ನಿರ್ದಾಕ್ಷಿಣ್ಯವಾಗಿಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕೆಲವು ವರ್ಷಗಳ ಹಿಂದೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರಾಗಿ ಕಂಡುಬಂದ ಮಕ್ಕಳಿಗೆ ಬಾಲ ಕಾರ್ಮಿಕ ಪುನರ್ವಸತಿ ನಿದಿ ಹಾಗೂಕಾರ್ಪಸ್ ನಿಧಿ ಒಳಗೊಂಡ ಒಟ್ಟು 35000 ರೂ.ಗಳನ್ನು ಅವರುಗಳಿಗೆ ವಿದ್ಯಾಭ್ಯಾಸಕ್ಕಾಗಿ 18 ವರ್ಷ ತುಂಬಿದ ಮೂರು ತಿಂಗಳ ಒಳಗಾಗಿಕಾಯಿದೆ ಅನ್ವಯ ನೀಡಬೇಕು. ಆದರೆ ಅನೇಕ ಪ್ರಕರಣಗಳಲ್ಲಿ ನೀಡದೇ ಇರುವುದು ಕಂಡು ಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು,ಕೂಡಲೇ ಮಕ್ಕಳಿಗೆ ಅನುದಾನವನ್ನು ನೀಡಬೇಕು ಎಂದು ಸೂಚನೆ ನೀಡಿದರು.

ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ಸಂಸ್ಥೆಯ ವಿರುದ್ಧ ಹಾಕಿರುವ ಮೊಕದ್ದಮೆಗಳನ್ನು ನಿರಂತರವಾಗಿ ಅನುಕರಣೆಮಾಡುವುದರೊಂದಿಗೆ ತಪ್ಪಿತಸ್ಥರಿಗೆ ದಂಡ ಹಾಗೂ ಶಿಕ್ಷೆ ವಿಧಿಸುವಂತೆ ನೋಡಿಕೊಳ್ಳಬೇಕು ಎಂದ ಅವರು, ಪುನರಾವರ್ತಿತವಾಗಿ ಬಾಲಕಾರ್ಮಿಕರನ್ನು ನಿಯೋಜಿಸಿಕೊಂಡ ಸಂಸ್ಥೆ ಅಥವಾ ವಾಣಿಜ್ಯ ಉದ್ಯಮಿಗಳಿದ್ದಲ್ಲಿ ಅಂತಹ ಸಂಸ್ಥೆಯ ಪರವಾನಿಗೆಯನ್ನು ರದ್ದುಪಡಿಸಲುಸ್ಥಳೀಯ ಸಂಸ್ಥೆಗಳು ಕ್ರಮ ವಹಿಸುವಂತೆ ವೃತ್ತ ನಿರೀಕ್ಷಕರು ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಭಿಕ್ಷಾಟನೆಯನ್ನು ಸಣ್ಣ ಮಗುವಿನೊಂದಿಗೆ ತಾಯಂದಿರು ಮಾಡುತ್ತಿರುವ ಪ್ರಕರಣಗಳು ಆಗಿವೆ. ಅವರನ್ನು ನಿರಾಶ್ರಿತರಕೇಂದ್ರಗಳಲ್ಲಿ ಪುನರ್ವಸತಿ ಕಲ್ಪಿಸಲು ನೆರೆಯ ದಕ್ಷಿಣ ಕನ್ನಡ ಜಿಲ್ಲೆಗೆ ಕಳುಹಿಸಿಕೊಟ್ಟಾಗ ಸಣ್ಣ ಮಕ್ಕಳನ್ನು ನಿರಾಶ್ರಿತ ಕೇಂದ್ರದಲ್ಲಿನಿಯೋಜಿಸಲು ಅವಕಾಶವಿಲ್ಲ ಎಂಬ ಕಾರಣ ಹೇಳುತ್ತಾರೆ. ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಜಿಲ್ಲೆಯಲ್ಲಿ ನಿರಾಶ್ರಿತರ ಕೇಂದ್ರತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಒಟ್ಟು 1032 ತಪಾಸಣೆ ನಡೆಸಿದಾಗ, 2 ಅಪಾಯಕಾರಿ ಹಾಗೂ 3ಅಪಾಯಕಾರಿಯಲ್ಲದ ಸಂಸ್ಥೆಗಳಲ್ಲಿ ಕಿಶೋರ ಕಾರ್ಮಿಕರು ಕಾರ್ಯನಿರ್ವಹಿಸಿತ್ತಿರುವ ಬಗ್ಗೆ ಒಟ್ಟು 5 ಪ್ರಕರಣಗಳು ಪತ್ತೆ ಮಾಡಿ,ಪ್ರಕರಣ ದಾಖಲಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯಿಂದ ರಕ್ಷಿಸಿದಮಕ್ಕಳ ಮುಂದಿನ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಜವಾಬ್ದಾರಿಯನ್ನು ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಸಮನ್ವಯದೊಂದಿಗೆ ಮಾಡಬೇಕು. ಅವಶ್ಯವಿದ್ದಲ್ಲಿ ಮಕ್ಕಳ ಶಿಕ್ಷಣ ಮುಂದುವರೆಸಲು ವಸತಿ ಶಾಲೆ, ಹಾಸ್ಟಲ್‌ಗಳಂತಹ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಕೈಗಾರಿಕಾ ಇಲಾಖೆಯ ಜಂಟಿನಿರ್ದೇಶಕ ನಾಗರಾಜ್ ವಿ ನಾಯಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಬಾಲ ಕಾರ್ಮಿಕ ಯೋಜನಾಸಂಸ್ಥೆಯ ಯೋಜನಾ ನಿರ್ದೇಶಕಿ ಅಮೃತಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.