ಉಡುಪಿ:ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಹಾಗೂ ನಮ್ಮ ಮನೆ ನಮ್ಮ ಮರ
ಅಭಿಯಾನ ತಂಡ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಗುರುವಾರ ಅಲೆವೂರಿನ ಪ್ರಗತಿನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣದಲ್ಲಿ ಸಿಂಧೂರ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ
ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ತಾಲೂಕು ಕ.ಸಾ.ಪ ದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ನಮ್ಮ ಮನೆ ನಮ್ಮ ಮರ ಅಭಿಯಾನ ತಂಡದ ರವಿರಾಜ ಹೆಚ್.ಪಿ, ಗುರುರಾಜ ಸನಿಲ್, ಅವಿನಾಶ್ ಕಾಮತ್, ಪರಿಸರ ಪ್ರೇಮಿಗಳಾದ ಮಧುಸೂದನ್ ಹೇರೂರು, ರಾಘವೇಂದ್ರ ಪ್ರಭು ಕರ್ವಾಲು, ಸುನೀತಾ, ರಾಮಾಂಜಿ ಹಾಗೂ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.