ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಸಾಧನ ಸಲಕರಣೆಗಳನ್ನು ಪಡೆಯಲು ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್ರವರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ ಹಾಗೂ
ಆಧಾರ್ ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












