ಪಡುಬಿದ್ರೆ: ಆಟೊಗೆ ಖಾಸಗಿ ಬಸ್ ಡಿಕ್ಕಿ- ಓರ್ವ ಮೃತ್ಯು

ಉಡುಪಿ: ಆಟೊ ರಿಕ್ಷಾಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟಿದ್ದು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಪಡುಬಿದ್ರೆ ಕಾರ್ಕಳ ರಾಜ್ಯ ಹೆದ್ದಾರಿಯ ಅಡ್ವೆ ಕಣಜಾರ್ ಕಟ್ಟೆ ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ ಆಟೊಗೆ ಡಿಕ್ಕಿ ಹೊಡೆದಿದೆ. ಮೃತ ಪ್ರಯಾಣಿಕನ ಹೆಸರು ತಿಳಿದುಬಂದಿಲ್ಲ. ಆಟೊ ಚಾಲಕ ಕಂಚಿನಡ್ಕ ನಿವಾಸಿ‌ ಹಂಝ ಗಂಭೀರ ಗಾಯಗೊಂಡಿದ್ದಾರೆ. ಬಸ್ ಢಿಕ್ಕಿ ಹೊಡೆದ ಪರಿಣಾಮ‌ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಪಡುಬಿದ್ರಿ‌ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.